Advertisement
MIRROR FOCUS

ಅಡಿಕೆ ಹಾನಿಕಾರಕವಲ್ಲ‌ | ಅಡಿಕೆ ಆಮದು ದರ ಏರಿಕೆ | ಅಡಿಕೆ ಟಾಸ್ಕ್‌ ಫೋರ್ಸ್‌ ಸಭೆಯಲ್ಲಿ ಚರ್ಚೆ|

Share

ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಟಾಸ್ಕ್‌ಫೋರ್ಸ್‌ ಸಭೆ ನಡೆಯಿತು. ಈ ಸಭೆಯಲ್ಲಿ ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ, ಆರೋಗ್ಯ ವರ್ಧಕ ಉತ್ಪನ್ನವೆಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರತಿಪಾದಿಸುವ ಹಾಗೂ ಸಂಶೋಧನಾ ವರದಿ ಸಲ್ಲಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಇದೇ ವೇಳೆ ಅಡಿಕೆ ಆಮದು ದರ ಏರಿಕೆ ಬಗ್ಗೆಯೂ ಚರ್ಚೆ ನಡೆಯಿತು.

ಆಮದು ಅಡಿಕೆಗೆ ದರವನ್ನು ಕಿಲೋಗೆ 309 ಹಾಗೂ 409 ರೂ. ಕೇಂದ್ರ ಸರ್ಕಾರ ಹೆಚ್ಚಿಸಲು ಕ್ರಮ ಆಗಬೇಕಿದೆ. ಆಮದಾಗುವ ವಿದೇಶಿ ಅಡಿಕೆಯ ಗುಣಮಟ್ಟ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಮನವರಿಕೆ ಮಾಡುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಈ ಸಂಬಂಧ ಕೇಂದ್ರಕ್ಕೆ ತಿಳಿಸಲು ಸಂಸದರನ್ನೊಳಗೊಂಡ ನಿಯೋಗ ಕೊಂಡೊಯ್ಯಲು ನಿರ್ಧರಿಸಲಾಗಿದೆ ಎಂದು ಟಾಸ್ಕ್‌ ಫೋರ್ಸ್‌ ಅಧ್ಯಕ್ಷ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶೃಂಗೇರಿ, ತೀರ್ಥಹಳ್ಳಿ, ಕೊಪ್ಪ ತಾಲೂಕಿನಲ್ಲಿ ಎಲೆ ಚುಕ್ಕೆ ರೋಗ ವ್ಯಾಪಕವಾಗಿ ಹಬ್ಬುತ್ತಿದ್ದು, ಅಧಿಕಾರಿಗಳು ಹಾಗೂ ಸಂಶೋಧಕರು, ರೈತರ ಬಳಿ ತೆರಳಿ ಮಾಹಿತಿ ನೀಡುವಂತೆ ಸೂಚಿಸಲಾಗಿದೆ ಎಂದು ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸಭೆಯಲ್ಲಿ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಕೆಆರ್‌ಎಎಂ ಅಧ್ಯಕ್ಷ  ಮಂಜಪ್ಪ, ತೋಟಗಾರಿಕೆ ಬೆಳೆ ಸಂಶೋಧನಾ ಕೇಂದ್ರದ ನಿವೃತ್ತ ನಿರ್ದೇಶಕ ಡಾ.ಪಿ.ಚೌಡಪ್ಪ , ಮ್ಯಾಮ್ಕೋಸ್ ಉಪಾಧ್ಯಕ್ಷ ಸುಬ್ರಹ್ಮಣ್ಯ ವೈ.ಎಸ್, ಪತ್ರಕರ್ತರಾದ ಹರಿಪ್ರಕಾಶ್ ಕೋಣೆಮನೆ, ತೋಟಗಾರಿಕೆ ಇಲಾಖೆ ನಿರ್ದೇಶಕ ನಾಗೇಂದ್ರ ಪ್ರಸಾದ್ ಹಾಜರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

11 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

18 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

18 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

18 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

1 day ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

1 day ago