Advertisement
MIRROR FOCUS

ಅಡಿಕೆ ಹಾನಿಕಾರಕವಲ್ಲ‌ | ಅಡಿಕೆ ಆಮದು ದರ ಏರಿಕೆ | ಅಡಿಕೆ ಟಾಸ್ಕ್‌ ಫೋರ್ಸ್‌ ಸಭೆಯಲ್ಲಿ ಚರ್ಚೆ|

Share

ಅಡಿಕೆ ಬೆಳೆಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಟಾಸ್ಕ್‌ಫೋರ್ಸ್‌ ಸಭೆ ನಡೆಯಿತು. ಈ ಸಭೆಯಲ್ಲಿ ಅಡಿಕೆ ಕ್ಯಾನ್ಸರ್ ಕಾರಕ ಅಲ್ಲ, ಆರೋಗ್ಯ ವರ್ಧಕ ಉತ್ಪನ್ನವೆಂದು ಸುಪ್ರೀಂ ಕೋರ್ಟ್‌ನಲ್ಲಿ ಪ್ರತಿಪಾದಿಸುವ ಹಾಗೂ ಸಂಶೋಧನಾ ವರದಿ ಸಲ್ಲಿಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಇದೇ ವೇಳೆ ಅಡಿಕೆ ಆಮದು ದರ ಏರಿಕೆ ಬಗ್ಗೆಯೂ ಚರ್ಚೆ ನಡೆಯಿತು.

ಆಮದು ಅಡಿಕೆಗೆ ದರವನ್ನು ಕಿಲೋಗೆ 309 ಹಾಗೂ 409 ರೂ. ಕೇಂದ್ರ ಸರ್ಕಾರ ಹೆಚ್ಚಿಸಲು ಕ್ರಮ ಆಗಬೇಕಿದೆ. ಆಮದಾಗುವ ವಿದೇಶಿ ಅಡಿಕೆಯ ಗುಣಮಟ್ಟ ಪರಿಶೀಲಿಸಿ ಕ್ರಮ ಕೈಗೊಳ್ಳುವಂತೆ ಕೇಂದ್ರಕ್ಕೆ ಮನವರಿಕೆ ಮಾಡುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಯಿತು. ಈ ಸಂಬಂಧ ಕೇಂದ್ರಕ್ಕೆ ತಿಳಿಸಲು ಸಂಸದರನ್ನೊಳಗೊಂಡ ನಿಯೋಗ ಕೊಂಡೊಯ್ಯಲು ನಿರ್ಧರಿಸಲಾಗಿದೆ ಎಂದು ಟಾಸ್ಕ್‌ ಫೋರ್ಸ್‌ ಅಧ್ಯಕ್ಷ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಶೃಂಗೇರಿ, ತೀರ್ಥಹಳ್ಳಿ, ಕೊಪ್ಪ ತಾಲೂಕಿನಲ್ಲಿ ಎಲೆ ಚುಕ್ಕೆ ರೋಗ ವ್ಯಾಪಕವಾಗಿ ಹಬ್ಬುತ್ತಿದ್ದು, ಅಧಿಕಾರಿಗಳು ಹಾಗೂ ಸಂಶೋಧಕರು, ರೈತರ ಬಳಿ ತೆರಳಿ ಮಾಹಿತಿ ನೀಡುವಂತೆ ಸೂಚಿಸಲಾಗಿದೆ ಎಂದು ಅರಗ ಜ್ಞಾನೇಂದ್ರ ತಿಳಿಸಿದ್ದಾರೆ.

ಸಭೆಯಲ್ಲಿ ಕ್ಯಾಂಪ್ಕೊ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ, ಕೆಆರ್‌ಎಎಂ ಅಧ್ಯಕ್ಷ  ಮಂಜಪ್ಪ, ತೋಟಗಾರಿಕೆ ಬೆಳೆ ಸಂಶೋಧನಾ ಕೇಂದ್ರದ ನಿವೃತ್ತ ನಿರ್ದೇಶಕ ಡಾ.ಪಿ.ಚೌಡಪ್ಪ , ಮ್ಯಾಮ್ಕೋಸ್ ಉಪಾಧ್ಯಕ್ಷ ಸುಬ್ರಹ್ಮಣ್ಯ ವೈ.ಎಸ್, ಪತ್ರಕರ್ತರಾದ ಹರಿಪ್ರಕಾಶ್ ಕೋಣೆಮನೆ, ತೋಟಗಾರಿಕೆ ಇಲಾಖೆ ನಿರ್ದೇಶಕ ನಾಗೇಂದ್ರ ಪ್ರಸಾದ್ ಹಾಜರಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

18 ಕರಿಮೆಣಸು ತಳಿಗಳ ನರ್ಸರಿ ನಿರ್ಮಿಸಿ ಯಶಸ್ಸು ಕಂಡ ಯುವ ರೈತ

ಕಣ್ಣೂರಿನ ಜಿನೇಶ್ ಕಲಿಯಾಣಿ 18 ಕರಿಮೆಣಸು ತಳಿಗಳ ನರ್ಸರಿ, ಮಿಶ್ರ ಕೃಷಿ ಮತ್ತು…

4 hours ago

ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಶಾಲೆ-ಕಾಲೇಜುಗಳಿಗೆ ಇಂದು ರಜೆ -ಉತ್ತರ ಕನ್ನಡದ ಕೆಲವು ತಾಲೂಕಿನಲ್ಲೂ ರಜೆ ಘೋಷಣೆ

ಕರಾವಳಿಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ,…

5 hours ago

ಭಾರೀ ಮಳೆ ಹಿನ್ನೆಲೆ – ದಕ್ಷಿಣ ಕನ್ನಡದಲ್ಲಿ ಇಂದು ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಡಳಿತ ಆದೇಶ

ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ಜುಲೈ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ…

1 day ago

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

2 days ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

2 days ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

3 days ago