ಅಡಿಕೆ ಹಳದಿ ರೋಗಕ್ಕೆ ಜೈವಿಕ ಗೊಬ್ಬರ ಪರಿಹಾರ…!

September 21, 2020
3:04 PM

ಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ  ಅಡಿಕೆಗೆ ಹಳದಿ ರೋಗ ಬಾಧಿಸಿದೆ. ಇದರಿಂದ ಕೃಷಿಕರು ಕಂಗಾಲಾಗಿದ್ದರು. ಯಾವುದೇ ಪರಿಹಾರ ಇಲ್ಲದೆ ಪರ್ಯಾಯ ಬೆಳೆಯತ್ತ ಚಿಂತನೆ ಮಾಡುತ್ತಿದ್ದಾರೆ. ಈ ನಡುವೆ ಇದೀಗ ಜೈವಿಕ ಗೊಬ್ಬರವೊಂದು ಪರಿಹಾರವಾಗುತ್ತದೆ ಎನ್ನುವ ಆಶಾವಾದ ಗರಿಗೆದರಿದೆ.

ಸುಳ್ಯ ತಾಲೂಕಿನ ಮಡಪ್ಪಾಡಿ ಪ್ರದೇಶದಲ್ಲಿ ಅಡಿಕೆ ಹಳದಿ ರೋಗ ಬಾಧಿಸಿದೆ. ಹಲವು ವರ್ಷಗಳಿಂದ ಹಳದಿ ರೋಗದಿಂದ ಪೀಡಿತವಾಗಿದ್ದ ಮಡಪ್ಪಾಡಿ ಗ್ರಾಮದ ಯತೀಶ್‌ ಗೋಳ್ಯಾಡಿ ಅವರ ತೋಟದಲ್ಲಿ  ಇದೀಗ ಪ್ರಾಯೋಗಿಕವಾಗಿ ಈ ಜೈವಿಕ ಗೊಬ್ಬರ ಬಳಕೆಯ ಪ್ರಾತ್ಯಕ್ಷಿಕೆ ನಡೆಸಲಾಯಿತು. ಈ ಜೈವಿಕ ಗೊಬ್ಬರ ಬಳಕೆಯಿಂದ ಹಳದಿಯಾಗಿರುವ ಎಲೆಗಳು 6 ತಿಂಗಳಲ್ಲಿ  ಮರು ಸ್ಥಿತಿಗೆ ಬರುತ್ತದೆ ಎನ್ನುವುದು  ಈ ಜೈವಿಕ ಗೊಬ್ಬರದ ಫಲಿತಾಂಶ ಎಂದು ಹೇಳಲಾಗಿದೆ. ಹೀಗಾಗಿ 6 ತಿಂಗಳ ಕಾಲ ಈಗ ಕೃಷಿಕರು ಫಲಿತಾಂಶಕ್ಕಾಗಿ ಕಾಯಬೇಕಾಗಿದೆ. ಜೈವಿಕ ಗೊಬ್ಬರದ ಮೂಲಕ ಹಳದಿ ರೋಗ ನಿಯಂತ್ರಣವಾದರೆ ಜಿಲ್ಲೆಯ ಎಲ್ಲಾ ಕೃಷಿಕರು ಈ ಬಗ್ಗೆ ಯೋಚಿಸಬಹುದಾಗಿದೆ. 6 ತಿಂಗಳ ಬಳಿಕದ ಫಲಿತಾಂಶ ವೀಕ್ಷಿಸಿ ಬಳಿಕ ಅಡಿಕೆ ಕೃಷಿಕರು ನಿರ್ಧಾರ ಮಾಡಬಹುದಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ
March 27, 2026
6:50 AM
by: ದ ರೂರಲ್ ಮಿರರ್.ಕಾಂ
ವೈಜ್ಞಾನಿಕ ಬೆಂಬಲ ಬೆಲೆ ಮತ್ತು ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ವರ್ಷಪೂರ್ತಿ ಖರೀದಿ ಕೇಂದ್ರಕ್ಕೆ ಕೋಡಿಹಳ್ಳಿ ಚಂದ್ರಶೇಖರ್ ಆಗ್ರಹ
March 27, 2026
6:45 AM
by: ದ ರೂರಲ್ ಮಿರರ್.ಕಾಂ
ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ
March 27, 2026
6:34 AM
by: ದ ರೂರಲ್ ಮಿರರ್.ಕಾಂ
ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!
March 26, 2026
7:04 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror