ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಅಡಿಕೆಗೆ ಹಳದಿ ರೋಗ ಬಾಧಿಸಿದೆ. ಇದರಿಂದ ಕೃಷಿಕರು ಕಂಗಾಲಾಗಿದ್ದರು. ಯಾವುದೇ ಪರಿಹಾರ ಇಲ್ಲದೆ ಪರ್ಯಾಯ ಬೆಳೆಯತ್ತ ಚಿಂತನೆ ಮಾಡುತ್ತಿದ್ದಾರೆ. ಈ ನಡುವೆ ಇದೀಗ ಜೈವಿಕ ಗೊಬ್ಬರವೊಂದು ಪರಿಹಾರವಾಗುತ್ತದೆ ಎನ್ನುವ ಆಶಾವಾದ ಗರಿಗೆದರಿದೆ.
ಸುಳ್ಯ ತಾಲೂಕಿನ ಮಡಪ್ಪಾಡಿ ಪ್ರದೇಶದಲ್ಲಿ ಅಡಿಕೆ ಹಳದಿ ರೋಗ ಬಾಧಿಸಿದೆ. ಹಲವು ವರ್ಷಗಳಿಂದ ಹಳದಿ ರೋಗದಿಂದ ಪೀಡಿತವಾಗಿದ್ದ ಮಡಪ್ಪಾಡಿ ಗ್ರಾಮದ ಯತೀಶ್ ಗೋಳ್ಯಾಡಿ ಅವರ ತೋಟದಲ್ಲಿ ಇದೀಗ ಪ್ರಾಯೋಗಿಕವಾಗಿ ಈ ಜೈವಿಕ ಗೊಬ್ಬರ ಬಳಕೆಯ ಪ್ರಾತ್ಯಕ್ಷಿಕೆ ನಡೆಸಲಾಯಿತು. ಈ ಜೈವಿಕ ಗೊಬ್ಬರ ಬಳಕೆಯಿಂದ ಹಳದಿಯಾಗಿರುವ ಎಲೆಗಳು 6 ತಿಂಗಳಲ್ಲಿ ಮರು ಸ್ಥಿತಿಗೆ ಬರುತ್ತದೆ ಎನ್ನುವುದು ಈ ಜೈವಿಕ ಗೊಬ್ಬರದ ಫಲಿತಾಂಶ ಎಂದು ಹೇಳಲಾಗಿದೆ. ಹೀಗಾಗಿ 6 ತಿಂಗಳ ಕಾಲ ಈಗ ಕೃಷಿಕರು ಫಲಿತಾಂಶಕ್ಕಾಗಿ ಕಾಯಬೇಕಾಗಿದೆ. ಜೈವಿಕ ಗೊಬ್ಬರದ ಮೂಲಕ ಹಳದಿ ರೋಗ ನಿಯಂತ್ರಣವಾದರೆ ಜಿಲ್ಲೆಯ ಎಲ್ಲಾ ಕೃಷಿಕರು ಈ ಬಗ್ಗೆ ಯೋಚಿಸಬಹುದಾಗಿದೆ. 6 ತಿಂಗಳ ಬಳಿಕದ ಫಲಿತಾಂಶ ವೀಕ್ಷಿಸಿ ಬಳಿಕ ಅಡಿಕೆ ಕೃಷಿಕರು ನಿರ್ಧಾರ ಮಾಡಬಹುದಾಗಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಧರ್ಮಸ್ಥಳ ಸುತ್ತಮುತ್ತ ಭಾಗಗಳಲ್ಲಿ ಒಂದೆರಡು ಕಡೆ ಹಾಗೂ…
ಉದ್ಯೋಗದ ಪರೀಕ್ಷೆಗಳಿಗೂ ಧಾರ್ಮಿಕ ಸಂಕೇತಗಳಿಗೂ ಯಾಕೆ ಹೊಂದಿ ಬರುವುದಿಲ್ಲ? ಇದೊಂದು ಮಿಲಿಯನ್ ಡಾಲರ್…
ರಾಷ್ಟ್ರೀಯ ಓಪನ್ ಕ್ಲಾಸಿಕಲ್ ರೇಟೆಡ್ ಚೆಸ್ ಪಂದ್ಯಾವಳಿ ಮೇ ತಿಂಗಳ 2 ರಿಂದ…
ವಿಶ್ವವಿಖ್ಯಾತ ಜೋಗ ಜಲಪಾತದಲ್ಲಿ ಪ್ರವಾಸಿಗರನ್ನು ಮತ್ತಷ್ಟು ಆಕರ್ಷಿಸುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ವಿವಿಧ…
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…