ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಅಡಿಕೆಗೆ ಹಳದಿ ರೋಗ ಬಾಧಿಸಿದೆ. ಇದರಿಂದ ಕೃಷಿಕರು ಕಂಗಾಲಾಗಿದ್ದರು. ಯಾವುದೇ ಪರಿಹಾರ ಇಲ್ಲದೆ ಪರ್ಯಾಯ ಬೆಳೆಯತ್ತ ಚಿಂತನೆ ಮಾಡುತ್ತಿದ್ದಾರೆ. ಈ ನಡುವೆ ಇದೀಗ ಜೈವಿಕ ಗೊಬ್ಬರವೊಂದು ಪರಿಹಾರವಾಗುತ್ತದೆ ಎನ್ನುವ ಆಶಾವಾದ ಗರಿಗೆದರಿದೆ.
ಸುಳ್ಯ ತಾಲೂಕಿನ ಮಡಪ್ಪಾಡಿ ಪ್ರದೇಶದಲ್ಲಿ ಅಡಿಕೆ ಹಳದಿ ರೋಗ ಬಾಧಿಸಿದೆ. ಹಲವು ವರ್ಷಗಳಿಂದ ಹಳದಿ ರೋಗದಿಂದ ಪೀಡಿತವಾಗಿದ್ದ ಮಡಪ್ಪಾಡಿ ಗ್ರಾಮದ ಯತೀಶ್ ಗೋಳ್ಯಾಡಿ ಅವರ ತೋಟದಲ್ಲಿ ಇದೀಗ ಪ್ರಾಯೋಗಿಕವಾಗಿ ಈ ಜೈವಿಕ ಗೊಬ್ಬರ ಬಳಕೆಯ ಪ್ರಾತ್ಯಕ್ಷಿಕೆ ನಡೆಸಲಾಯಿತು. ಈ ಜೈವಿಕ ಗೊಬ್ಬರ ಬಳಕೆಯಿಂದ ಹಳದಿಯಾಗಿರುವ ಎಲೆಗಳು 6 ತಿಂಗಳಲ್ಲಿ ಮರು ಸ್ಥಿತಿಗೆ ಬರುತ್ತದೆ ಎನ್ನುವುದು ಈ ಜೈವಿಕ ಗೊಬ್ಬರದ ಫಲಿತಾಂಶ ಎಂದು ಹೇಳಲಾಗಿದೆ. ಹೀಗಾಗಿ 6 ತಿಂಗಳ ಕಾಲ ಈಗ ಕೃಷಿಕರು ಫಲಿತಾಂಶಕ್ಕಾಗಿ ಕಾಯಬೇಕಾಗಿದೆ. ಜೈವಿಕ ಗೊಬ್ಬರದ ಮೂಲಕ ಹಳದಿ ರೋಗ ನಿಯಂತ್ರಣವಾದರೆ ಜಿಲ್ಲೆಯ ಎಲ್ಲಾ ಕೃಷಿಕರು ಈ ಬಗ್ಗೆ ಯೋಚಿಸಬಹುದಾಗಿದೆ. 6 ತಿಂಗಳ ಬಳಿಕದ ಫಲಿತಾಂಶ ವೀಕ್ಷಿಸಿ ಬಳಿಕ ಅಡಿಕೆ ಕೃಷಿಕರು ನಿರ್ಧಾರ ಮಾಡಬಹುದಾಗಿದೆ.
ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಮಾಲಿನ್ಯ ಮಣ್ಣಿನ ಆರೋಗ್ಯ ಮತ್ತು ಬೆಳೆ ಉತ್ಪಾದನೆಗೆ ಭೀತಿ ತಂದಿದೆ.…
ಮೇ 19 ಅಥವಾ 20ರಿಂದ ಕರ್ನಾಟಕದಲ್ಲಿ ಮುಂಗಾರು ಮಾದರಿಯ ಗಾಳಿಯ ಚಲನೆ ಆರಂಭವಾಗುವ…
ಹೆದ್ದಾರಿಯಲ್ಲಿ ಸಂಚರಿಸುವ ಖಾಸಗಿ ಬಸ್ಗಳ ಅತಿವೇಗ ಹಾಗೂ ಅತಿಯಾದ LED ಲೈಟುಗಳ ವಿರುದ್ಧ…
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಸಹಕಾರದಿಂದ ಹವಾಮಾನ ಸ್ನೇಹಿ ಕೃಷಿ, ಡ್ರೋನ್, AI ಹಾಗೂ ಸ್ಮಾರ್ಟ್…
ಕೋಟಿ ವೃಕ್ಷ ಅಭಿಯಾನದ ಪರಿಣಾಮವಾಗಿ ವಿಜಯಪುರದಲ್ಲಿ ಈ ವರ್ಷ ತಾಪಮಾನ 40 ಡಿಗ್ರಿ…
ಉತ್ತರ ಪ್ರದೇಶದಲ್ಲಿ ಭಾರೀ ಧೂಳುಗಾಳಿ, ಮಳೆ ಹಾಗೂ ಮಿಂಚಿನಿಂದ 140ಕ್ಕೂ ಹೆಚ್ಚು ಮಂದಿ…