ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಅಡಿಕೆಗೆ ಹಳದಿ ರೋಗ ಬಾಧಿಸಿದೆ. ಇದರಿಂದ ಕೃಷಿಕರು ಕಂಗಾಲಾಗಿದ್ದರು. ಯಾವುದೇ ಪರಿಹಾರ ಇಲ್ಲದೆ ಪರ್ಯಾಯ ಬೆಳೆಯತ್ತ ಚಿಂತನೆ ಮಾಡುತ್ತಿದ್ದಾರೆ. ಈ ನಡುವೆ ಇದೀಗ ಜೈವಿಕ ಗೊಬ್ಬರವೊಂದು ಪರಿಹಾರವಾಗುತ್ತದೆ ಎನ್ನುವ ಆಶಾವಾದ ಗರಿಗೆದರಿದೆ.
ಸುಳ್ಯ ತಾಲೂಕಿನ ಮಡಪ್ಪಾಡಿ ಪ್ರದೇಶದಲ್ಲಿ ಅಡಿಕೆ ಹಳದಿ ರೋಗ ಬಾಧಿಸಿದೆ. ಹಲವು ವರ್ಷಗಳಿಂದ ಹಳದಿ ರೋಗದಿಂದ ಪೀಡಿತವಾಗಿದ್ದ ಮಡಪ್ಪಾಡಿ ಗ್ರಾಮದ ಯತೀಶ್ ಗೋಳ್ಯಾಡಿ ಅವರ ತೋಟದಲ್ಲಿ ಇದೀಗ ಪ್ರಾಯೋಗಿಕವಾಗಿ ಈ ಜೈವಿಕ ಗೊಬ್ಬರ ಬಳಕೆಯ ಪ್ರಾತ್ಯಕ್ಷಿಕೆ ನಡೆಸಲಾಯಿತು. ಈ ಜೈವಿಕ ಗೊಬ್ಬರ ಬಳಕೆಯಿಂದ ಹಳದಿಯಾಗಿರುವ ಎಲೆಗಳು 6 ತಿಂಗಳಲ್ಲಿ ಮರು ಸ್ಥಿತಿಗೆ ಬರುತ್ತದೆ ಎನ್ನುವುದು ಈ ಜೈವಿಕ ಗೊಬ್ಬರದ ಫಲಿತಾಂಶ ಎಂದು ಹೇಳಲಾಗಿದೆ. ಹೀಗಾಗಿ 6 ತಿಂಗಳ ಕಾಲ ಈಗ ಕೃಷಿಕರು ಫಲಿತಾಂಶಕ್ಕಾಗಿ ಕಾಯಬೇಕಾಗಿದೆ. ಜೈವಿಕ ಗೊಬ್ಬರದ ಮೂಲಕ ಹಳದಿ ರೋಗ ನಿಯಂತ್ರಣವಾದರೆ ಜಿಲ್ಲೆಯ ಎಲ್ಲಾ ಕೃಷಿಕರು ಈ ಬಗ್ಗೆ ಯೋಚಿಸಬಹುದಾಗಿದೆ. 6 ತಿಂಗಳ ಬಳಿಕದ ಫಲಿತಾಂಶ ವೀಕ್ಷಿಸಿ ಬಳಿಕ ಅಡಿಕೆ ಕೃಷಿಕರು ನಿರ್ಧಾರ ಮಾಡಬಹುದಾಗಿದೆ.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…