ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಅಡಿಕೆಗೆ ಹಳದಿ ರೋಗ ಬಾಧಿಸಿದೆ. ಇದರಿಂದ ಕೃಷಿಕರು ಕಂಗಾಲಾಗಿದ್ದರು. ಯಾವುದೇ ಪರಿಹಾರ ಇಲ್ಲದೆ ಪರ್ಯಾಯ ಬೆಳೆಯತ್ತ ಚಿಂತನೆ ಮಾಡುತ್ತಿದ್ದಾರೆ. ಈ ನಡುವೆ ಇದೀಗ ಜೈವಿಕ ಗೊಬ್ಬರವೊಂದು ಪರಿಹಾರವಾಗುತ್ತದೆ ಎನ್ನುವ ಆಶಾವಾದ ಗರಿಗೆದರಿದೆ.
ಸುಳ್ಯ ತಾಲೂಕಿನ ಮಡಪ್ಪಾಡಿ ಪ್ರದೇಶದಲ್ಲಿ ಅಡಿಕೆ ಹಳದಿ ರೋಗ ಬಾಧಿಸಿದೆ. ಹಲವು ವರ್ಷಗಳಿಂದ ಹಳದಿ ರೋಗದಿಂದ ಪೀಡಿತವಾಗಿದ್ದ ಮಡಪ್ಪಾಡಿ ಗ್ರಾಮದ ಯತೀಶ್ ಗೋಳ್ಯಾಡಿ ಅವರ ತೋಟದಲ್ಲಿ ಇದೀಗ ಪ್ರಾಯೋಗಿಕವಾಗಿ ಈ ಜೈವಿಕ ಗೊಬ್ಬರ ಬಳಕೆಯ ಪ್ರಾತ್ಯಕ್ಷಿಕೆ ನಡೆಸಲಾಯಿತು. ಈ ಜೈವಿಕ ಗೊಬ್ಬರ ಬಳಕೆಯಿಂದ ಹಳದಿಯಾಗಿರುವ ಎಲೆಗಳು 6 ತಿಂಗಳಲ್ಲಿ ಮರು ಸ್ಥಿತಿಗೆ ಬರುತ್ತದೆ ಎನ್ನುವುದು ಈ ಜೈವಿಕ ಗೊಬ್ಬರದ ಫಲಿತಾಂಶ ಎಂದು ಹೇಳಲಾಗಿದೆ. ಹೀಗಾಗಿ 6 ತಿಂಗಳ ಕಾಲ ಈಗ ಕೃಷಿಕರು ಫಲಿತಾಂಶಕ್ಕಾಗಿ ಕಾಯಬೇಕಾಗಿದೆ. ಜೈವಿಕ ಗೊಬ್ಬರದ ಮೂಲಕ ಹಳದಿ ರೋಗ ನಿಯಂತ್ರಣವಾದರೆ ಜಿಲ್ಲೆಯ ಎಲ್ಲಾ ಕೃಷಿಕರು ಈ ಬಗ್ಗೆ ಯೋಚಿಸಬಹುದಾಗಿದೆ. 6 ತಿಂಗಳ ಬಳಿಕದ ಫಲಿತಾಂಶ ವೀಕ್ಷಿಸಿ ಬಳಿಕ ಅಡಿಕೆ ಕೃಷಿಕರು ನಿರ್ಧಾರ ಮಾಡಬಹುದಾಗಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…