Advertisement
ಸುದ್ದಿಗಳು

ಅಡಿಕೆ ಹಳದಿ ಎಲೆರೋಗ | ಪರ್ಯಾಯ ಬೆಳೆಗೆ ಪೈಲೆಟ್ ಯೋಜನೆ ಅನುಷ್ಠಾನಕ್ಕೆ ಸಿದ್ಧತೆ |

Share
News Summary
ಅಡಿಕೆ ಬೆಳೆಗಾರರನ್ನು ಕಾಡುವ ಬಹುದೊಡ್ಡ ಸಮಸ್ಯೆ ಅಡಿಕೆ ಹಳದಿ ಎಲೆರೋಗ. ಹಲವು ವರ್ಷಗಳಿಂದ ಈ ಸಮಸ್ಯೆ ಇದೆ. ಇದೀಗ ಲಭ್ಯವಾದ ಅನುದಾನದಲ್ಲಿ 2.25 ಕೋಟಿ ಪರ್ಯಾಯ ಬೆಳೆಗೆ ಹಾಗೂ  1 ಕೋಟಿ ಮೊತ್ತವನ್ನು ಸಂಶೋಧನೆಗೆ ಮೀಸಲಿಡಲಾಗುತ್ತಿದೆ.

ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ  ಅಡಿಕೆ ಹಳದಿ ಎಲೆರೋಗದಿಂದ ಕೃಷಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದೀಗ ರೈತರು ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪೈಲೆಟ್ ಯೋಜನೆಯನ್ನು ಅನುಷ್ಠಾನಗೊಳಿಸಲು ತೋಟಗಾರಿಕಾ ಇಲಾಖೆ ಮುಂದಾಗಿದೆ. ಅದರ ಜೊತೆಗೆ ರೋಗ ನಿಯಂತ್ರಣಕ್ಕೆ ಸಂಶೋಧನೆ ನಡೆಸಲು  ಬಜೆಟ್‌ನಲ್ಲಿ  ಘೋಷಿಸಿದಂತೆ ಸಂಶೋಧನೆಗೆ ಮೀಸಲಿಡುವ ಬಗ್ಗೆ ಚಿಂತನೆ ನಡೆಸಲಾಗಿದೆ.

ಅಡಿಕೆ ಹಳದಿ ರೋಗ ಬಾಧಿತ  ತೋಟಗಳಲ್ಲಿ ಪರ್ಯಾಯ ಬೆಳೆ ಬೆಳೆಸಲು ಹಾಗೂ ರೋಗ ನಿಯಂತ್ರಣದ  ಸಂಶೋನೆಗೆ ರಾಜ್ಯ ಸರ್ಕಾರದಿಂದ ಲಭ್ಯವಾಗುವ 3.25 ಕೋಟಿ ರೂಪಾಯಿ ಮೊತ್ತದ ಸದ್ಯದ ಪ್ಯಾಕೇಜಿನಲ್ಲಿ ಮುಂಜೂರುಗೊಳಿಸಲು ಚಿಂತನೆ ನಡೆಸಲಾಗಿದೆ. ಪ್ರಸ್ತುತ ಮಂಜೂರು ಆಗಿರುವ ಅನುದಾನದಲ್ಲಿ 2.25 ಕೋಟಿ ಪರ್ಯಾಯ ಬೆಳೆಗೆ ಹಾಗೂ  1 ಕೋಟಿ ಮೊತ್ತವನ್ನು ಸಂಶೋಧನೆಗೆ ಮೀಸಲಿಡಲಾಗಿದೆ. ಪರೀಕ್ಷಾ ಪ್ರಯೋಗಾಲಯ ಸ್ಥಾಪನೆ, ರೋಗ ನಿಯಂತ್ರಣದ ಬಗ್ಗೆ ಸಂಶೋಧನೆಯನ್ನು ನಡೆಸುವಂತೆ ಸಿಪಿಸಿಆರ್‌ಐಗೆ ತಿಳಿಸಲಾಗಿದೆ ಎಂದು ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಎಚ್.ಆರ್.ನಾಯ್ಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಇಲಾಖೆ ನಡಸಿದ ಸಮೀಕ್ಷೆಯಲ್ಲಿ ಸಾಕಷ್ಟು ಮಂದಿ ಪರ್ಯಾಯ ಬೆಳೆ ಬೆಳೆಯಲು ಆಸಕ್ತಿ ತೋರಿದ್ದರು. ಆದರೆ ಪರ್ಯಾಯ ಬೆಳೆ ಬೆಳೆಯಲು ರೈತರಿಗೆ ಆರ್ಥಿಕ ಬಲ ಇಲ್ಲದ ಕಾರಣ ಪ್ರೋತ್ಸಾಹಧನ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ  ರೈತರು ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪೈಲೆಟ್ ಯೋಜನೆಯನ್ನು ಅನುಷ್ಠಾನಗೊಳಿಸಲು ಇಲಾಖೆ ಮುಂದಾಗಿದೆ. ಹಾಲಿ ಇರುವ ರೋಗ ಬಾಧಿತ ತೋಟಗಳ ನಡುವೆ ಪರ್ಯಾಯ ಬೆಳೆ ಪ್ರಾರಂಭಿಸಿ, ರೈತರ ಆದಾಯ ಹೆಚ್ಚಿಸುವ ಮೊದಲ ಹೆಜ್ಜೆಯಾಗಿದೆ. ರೈತರು ಆಸಕ್ತಿ ಹೊಂದಿರುವ  ಯಾವುದೇ ಬೆಳೆಗಳನ್ನು ಬೆಳೆಸಲು ಅವಕಾಶ ಇದೆ. ಇದರಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಳಕೆಗೂ ಅವಕಾಶ ಇರುತ್ತದೆ. ಹೀಗಾಗಿ ರೈತರಿಗೆ ಕಡಿಮೆ ವೆಚ್ಚದಲ್ಲಿ  ಕೃಷಿ ಮಾಡುವ ಅವಕಾಶ ಇರುತ್ತದೆ.

ಹಳದಿ ಎಲೆ ರೋಗ ಸಂಶೋಧನೆ ಹಾಗೂ ರೋಗನಿರೋಧಕ ತಳಿ ಅಭಿವೃದ್ಧಿ ಅಥವಾ ಇತರ ಸಂಶೋಧನೆಗಳು,  ಪರೀಕ್ಷಾ ಪ್ರಯೋಗಾಲಯ ಸ್ಥಾಪನೆ, ರೋಗ ನಿಯಂತ್ರಣದ ಬಗ್ಗೆ ಸಂಶೋಧನೆಯನ್ನು ಈಗಾಗಲೇ ವಿಟ್ಲದ ಸಿಪಿಸಿಆರ್‌ಐ ನಡೆಸುತ್ತಿದೆ. ಇನ್ನಷ್ಟು ನಿಖರವಾಗಿ ಸಂಶೋಧನೆಗೆ ಆದ್ಯತೆ ನೀಡುವಂತೆ ಸಿಪಿಸಿಆರ್‌ಐಗೆ ಮನವಿ ಮಾಡಲಾಗಿದೆ.

ಒಟ್ಟಿನಲ್ಲಿ ಅಡಿಕೆ ಬೆಳೆಗಾರರು ಹಳದಿ ಎಲೆರೋಗದಿಂದ ಕಂಗಾಲಾಗುತ್ತಿರುವ ವೇಳೆ ರೋಗ ನಿರೋಧಕ ತಳಿ ಹಾಗೂ ಪರ್ಯಾಯ ಬೆಳೆಯತ್ತ ಕೃಷಿಕರನ್ನು ಉತ್ತೇಜಿಸಲು ಕೆಲಸ ಈಗ ಆರಂಭವಾಗಿದೆ. ಇದು ಪಾಸಿಟಿವ್‌ ಆಗಿರುವ ಫಲಿತಾಂಶ ದೊರೆಯಲಿ ಎಂಬುದು ರೈತರ ಆಶಯ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಬೆಳೆ ಋತುವಿಗೆ ಸಕಲ ಸಿದ್ದತೆ | ದೇಶದಲ್ಲಿ ರಸಗೊಬ್ಬರ ದಾಸ್ತಾನು ದ್ವಿಗುಣ

ಖಾರೀಫ್‌ ಬೆಳೆಗಾಲಕ್ಕೆ ರೈತರಿಗೆ ಕೊರತೆ ಆಗದಂತೆ ದೇಶದಲ್ಲಿ ರಸಗೊಬ್ಬರ ದಾಸ್ತಾನು ಹೆಚ್ಚಿಸಲಾಗಿದೆ. ಯೂರಿಯಾ…

2 hours ago

ಹವಾಮಾನ ವರದಿ | 15-03-2026 | ಬಿಸಿಲಿನ ಮಧ್ಯೆ ಮಳೆ ಅಬ್ಬರ – ರಾಜ್ಯದ ಹಲವೆಡೆ ಸಂಜೆ ಗುಡುಗು ಮಳೆ ಸಾಧ್ಯತೆ

ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ಸಂಜೆ–ರಾತ್ರಿ ಗುಡುಗು ಸಹಿತ ಮಳೆಯ ಮುನ್ಸೂಚನೆ…

11 hours ago

ಹವಾಮಾನ ಚಕ್ರಗಳೇ ಬದಲಾಗುತ್ತಿವೆ | ಲಾ ನೀನಾ ಪರಿಣಾಮ ಕಡಿಮೆ, ಉಷ್ಣ ಅಲೆಗಳ ಭೀತಿ ಹೆಚ್ಚಳ

ಹವಾಮಾನ ಬದಲಾವಣೆಯಿಂದ ಲಾ ನೀನಾದ ತಂಪು ಪರಿಣಾಮ ದುರ್ಬಲವಾಗಿ ಭಾರತದಲ್ಲಿ ಬೇಸಿಗೆ ಮುಂಚಿತವಾಗಿ…

12 hours ago

ಹೊಸರುಚಿ | ಹಲಸಿನ ಹಣ್ಣಿನಿಂದ ಇಷ್ಟು ರುಚಿ ಸಿಗುತ್ತದಾ…? ಈ ಕಸ್ಟರ್ಡ್ ಮಿಸ್ ಮಾಡ್ಬೇಡಿ…!

ಹಲಸಿನ ಹಣ್ಣಿನಿಂದ ಸುಲಭವಾಗಿ ತಯಾರಿಸಬಹುದಾದ ಕಸ್ಟರ್ಡ್ ಬೇಸಿಗೆಯಲ್ಲಿ ಉತ್ತಮ ಡೆಸರ್ಟ್ ಆಯ್ಕೆಯಾಗಿದೆ. ಕಡಿಮೆ…

1 day ago

ಹವಾಮಾನ ವರದಿ | 14-03-2026 | ಇಂದು ಕರಾವಳಿ ಜಿಲ್ಲೆಯಲ್ಲಿ ಮಳೆ ಸಾಧ್ಯತೆ – ರಾಜ್ಯದ ಹಲವೆಡೆ ಗುಡುಗು ಮಳೆ ಮುನ್ಸೂಚನೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಹಾಗೂ ರಾತ್ರಿ ವೇಳೆಯಲ್ಲಿ ಗುಡುಗು…

1 day ago

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ – ಭಾರತೀಯ ರೈತರಿಗೆ ಏನು ಸಂದೇಶ?

ಮಲೇಷ್ಯಾದಲ್ಲಿ ರಬ್ಬರ್ ಉತ್ಪಾದನೆ ಇಳಿಕೆ ಭಾರತೀಯ ರೈತರಿಗೆ ಬೆಲೆ ಬೆಂಬಲದ ಸೂಚನೆ ನೀಡುತ್ತಿದೆ.…

2 days ago