ಸುದ್ದಿಗಳು

ಅಡಿಕೆ ಹಳದಿ ಎಲೆರೋಗ | ಪರ್ಯಾಯ ಬೆಳೆಗೆ ಪೈಲೆಟ್ ಯೋಜನೆ ಅನುಷ್ಠಾನಕ್ಕೆ ಸಿದ್ಧತೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
News Summary
ಅಡಿಕೆ ಬೆಳೆಗಾರರನ್ನು ಕಾಡುವ ಬಹುದೊಡ್ಡ ಸಮಸ್ಯೆ ಅಡಿಕೆ ಹಳದಿ ಎಲೆರೋಗ. ಹಲವು ವರ್ಷಗಳಿಂದ ಈ ಸಮಸ್ಯೆ ಇದೆ. ಇದೀಗ ಲಭ್ಯವಾದ ಅನುದಾನದಲ್ಲಿ 2.25 ಕೋಟಿ ಪರ್ಯಾಯ ಬೆಳೆಗೆ ಹಾಗೂ  1 ಕೋಟಿ ಮೊತ್ತವನ್ನು ಸಂಶೋಧನೆಗೆ ಮೀಸಲಿಡಲಾಗುತ್ತಿದೆ.

ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ  ಅಡಿಕೆ ಹಳದಿ ಎಲೆರೋಗದಿಂದ ಕೃಷಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದೀಗ ರೈತರು ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪೈಲೆಟ್ ಯೋಜನೆಯನ್ನು ಅನುಷ್ಠಾನಗೊಳಿಸಲು ತೋಟಗಾರಿಕಾ ಇಲಾಖೆ ಮುಂದಾಗಿದೆ. ಅದರ ಜೊತೆಗೆ ರೋಗ ನಿಯಂತ್ರಣಕ್ಕೆ ಸಂಶೋಧನೆ ನಡೆಸಲು  ಬಜೆಟ್‌ನಲ್ಲಿ  ಘೋಷಿಸಿದಂತೆ ಸಂಶೋಧನೆಗೆ ಮೀಸಲಿಡುವ ಬಗ್ಗೆ ಚಿಂತನೆ ನಡೆಸಲಾಗಿದೆ.

Advertisement

ಅಡಿಕೆ ಹಳದಿ ರೋಗ ಬಾಧಿತ  ತೋಟಗಳಲ್ಲಿ ಪರ್ಯಾಯ ಬೆಳೆ ಬೆಳೆಸಲು ಹಾಗೂ ರೋಗ ನಿಯಂತ್ರಣದ  ಸಂಶೋನೆಗೆ ರಾಜ್ಯ ಸರ್ಕಾರದಿಂದ ಲಭ್ಯವಾಗುವ 3.25 ಕೋಟಿ ರೂಪಾಯಿ ಮೊತ್ತದ ಸದ್ಯದ ಪ್ಯಾಕೇಜಿನಲ್ಲಿ ಮುಂಜೂರುಗೊಳಿಸಲು ಚಿಂತನೆ ನಡೆಸಲಾಗಿದೆ. ಪ್ರಸ್ತುತ ಮಂಜೂರು ಆಗಿರುವ ಅನುದಾನದಲ್ಲಿ 2.25 ಕೋಟಿ ಪರ್ಯಾಯ ಬೆಳೆಗೆ ಹಾಗೂ  1 ಕೋಟಿ ಮೊತ್ತವನ್ನು ಸಂಶೋಧನೆಗೆ ಮೀಸಲಿಡಲಾಗಿದೆ. ಪರೀಕ್ಷಾ ಪ್ರಯೋಗಾಲಯ ಸ್ಥಾಪನೆ, ರೋಗ ನಿಯಂತ್ರಣದ ಬಗ್ಗೆ ಸಂಶೋಧನೆಯನ್ನು ನಡೆಸುವಂತೆ ಸಿಪಿಸಿಆರ್‌ಐಗೆ ತಿಳಿಸಲಾಗಿದೆ ಎಂದು ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಎಚ್.ಆರ್.ನಾಯ್ಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಇಲಾಖೆ ನಡಸಿದ ಸಮೀಕ್ಷೆಯಲ್ಲಿ ಸಾಕಷ್ಟು ಮಂದಿ ಪರ್ಯಾಯ ಬೆಳೆ ಬೆಳೆಯಲು ಆಸಕ್ತಿ ತೋರಿದ್ದರು. ಆದರೆ ಪರ್ಯಾಯ ಬೆಳೆ ಬೆಳೆಯಲು ರೈತರಿಗೆ ಆರ್ಥಿಕ ಬಲ ಇಲ್ಲದ ಕಾರಣ ಪ್ರೋತ್ಸಾಹಧನ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ  ರೈತರು ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪೈಲೆಟ್ ಯೋಜನೆಯನ್ನು ಅನುಷ್ಠಾನಗೊಳಿಸಲು ಇಲಾಖೆ ಮುಂದಾಗಿದೆ. ಹಾಲಿ ಇರುವ ರೋಗ ಬಾಧಿತ ತೋಟಗಳ ನಡುವೆ ಪರ್ಯಾಯ ಬೆಳೆ ಪ್ರಾರಂಭಿಸಿ, ರೈತರ ಆದಾಯ ಹೆಚ್ಚಿಸುವ ಮೊದಲ ಹೆಜ್ಜೆಯಾಗಿದೆ. ರೈತರು ಆಸಕ್ತಿ ಹೊಂದಿರುವ  ಯಾವುದೇ ಬೆಳೆಗಳನ್ನು ಬೆಳೆಸಲು ಅವಕಾಶ ಇದೆ. ಇದರಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಳಕೆಗೂ ಅವಕಾಶ ಇರುತ್ತದೆ. ಹೀಗಾಗಿ ರೈತರಿಗೆ ಕಡಿಮೆ ವೆಚ್ಚದಲ್ಲಿ  ಕೃಷಿ ಮಾಡುವ ಅವಕಾಶ ಇರುತ್ತದೆ.

ಹಳದಿ ಎಲೆ ರೋಗ ಸಂಶೋಧನೆ ಹಾಗೂ ರೋಗನಿರೋಧಕ ತಳಿ ಅಭಿವೃದ್ಧಿ ಅಥವಾ ಇತರ ಸಂಶೋಧನೆಗಳು,  ಪರೀಕ್ಷಾ ಪ್ರಯೋಗಾಲಯ ಸ್ಥಾಪನೆ, ರೋಗ ನಿಯಂತ್ರಣದ ಬಗ್ಗೆ ಸಂಶೋಧನೆಯನ್ನು ಈಗಾಗಲೇ ವಿಟ್ಲದ ಸಿಪಿಸಿಆರ್‌ಐ ನಡೆಸುತ್ತಿದೆ. ಇನ್ನಷ್ಟು ನಿಖರವಾಗಿ ಸಂಶೋಧನೆಗೆ ಆದ್ಯತೆ ನೀಡುವಂತೆ ಸಿಪಿಸಿಆರ್‌ಐಗೆ ಮನವಿ ಮಾಡಲಾಗಿದೆ.

ಒಟ್ಟಿನಲ್ಲಿ ಅಡಿಕೆ ಬೆಳೆಗಾರರು ಹಳದಿ ಎಲೆರೋಗದಿಂದ ಕಂಗಾಲಾಗುತ್ತಿರುವ ವೇಳೆ ರೋಗ ನಿರೋಧಕ ತಳಿ ಹಾಗೂ ಪರ್ಯಾಯ ಬೆಳೆಯತ್ತ ಕೃಷಿಕರನ್ನು ಉತ್ತೇಜಿಸಲು ಕೆಲಸ ಈಗ ಆರಂಭವಾಗಿದೆ. ಇದು ಪಾಸಿಟಿವ್‌ ಆಗಿರುವ ಫಲಿತಾಂಶ ದೊರೆಯಲಿ ಎಂಬುದು ರೈತರ ಆಶಯ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ | 3570 ಟನ್ ಕಟ್ಟಡ ತ್ಯಾಜ್ಯ ತೆರವು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು, ಎರಡು…

5 hours ago

ಇಂದು ಶೂನ್ಯ  ನೆರಳಿನ ದಿನ | ಪಿಲಿಕುಳದಲ್ಲಿ  ಪ್ರಾತ್ಯಕ್ಷಿಕೆ

ಎಪ್ರಿಲ್ 24 ರಂದು ಮಧ್ಯಾಹ್ನ ನಿಮ್ಮ ನೆರಳನ್ನು ಕಾಣಲಾಗುವುದಿಲ್ಲ.  ಏಕೆಂದರೆ ಈಗ ಕರ್ಕಾಟಕ…

5 hours ago

ಬದುಕು ಕಲಿಸುವ ಪಾಠಗಳು

ಹಂಚಿ ತಿನ್ನುವ ಅಭ್ಯಾಸ ರೂಡಿ ಇಲ್ಲವಾದರೂ ಸಂಸಾರಿಯಾದ ಕೂಡಲೇ ಎಲ್ಲವೂ ಬದಲಾಗುತ್ತದೆ. ಆ…

5 hours ago

82 ವರ್ಷಗಳ ಬಳಿಕ ಅಕ್ಷಯ ತೃತೀಯ ದಿನವೇ 3 ಅಪರೂಪದ ಯೋಗಗಳ ನಿರ್ಮಾಣ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಪ್ರಕೃತಿ ಸೌಂದರ್ಯ ಮತ್ತು ಧಾರ್ಮಿಕತೆ ಮೇಳೈಸಿದ ಸ್ಥಳ ನಾಕೂರುಗಯ | ಭಕ್ತಿ ಪ್ರಕೃತಿಗಳ ಸಂಗಮ

ಸಕಲಜೀವಿಗಳ ಆಡುಂಬೊಲ ನಮ್ಮೀ  ಪ್ರಕೃತಿ. ಪ್ರಕೃತಿಯೊಡಲು ನಮ್ಮತಾಯ ಮಡಿಲು. ಪ್ರಕೃತಿಯು ಕೆಲವೆಡೆ ರುದ್ರರಮಣೀಯ;…

5 hours ago

ಕೂಡಿಟ್ಟ ಆಸ್ತಿ ಮನೆಯಲ್ಲೇ ನಡೀತು ಕುಸ್ತಿ

ಹಕ್ಕಿಗಳು ಮರಿಗಳಿಗೆ ಹಾರಲು ಕಲಿಸುತ್ತವೆ. ಒಮ್ಮೆ ಹಾರಲು ಬಂತೆಂದರೆ ಗೂಡು ಬಿಟ್ಟು ಹಾರುತ್ತವೆ…

13 hours ago