Advertisement
ಸುದ್ದಿಗಳು

ಅಡಿಕೆ ಹಳದಿ ಎಲೆರೋಗ | ಪರ್ಯಾಯ ಬೆಳೆಗೆ ಪೈಲೆಟ್ ಯೋಜನೆ ಅನುಷ್ಠಾನಕ್ಕೆ ಸಿದ್ಧತೆ |

Share
News Summary
ಅಡಿಕೆ ಬೆಳೆಗಾರರನ್ನು ಕಾಡುವ ಬಹುದೊಡ್ಡ ಸಮಸ್ಯೆ ಅಡಿಕೆ ಹಳದಿ ಎಲೆರೋಗ. ಹಲವು ವರ್ಷಗಳಿಂದ ಈ ಸಮಸ್ಯೆ ಇದೆ. ಇದೀಗ ಲಭ್ಯವಾದ ಅನುದಾನದಲ್ಲಿ 2.25 ಕೋಟಿ ಪರ್ಯಾಯ ಬೆಳೆಗೆ ಹಾಗೂ  1 ಕೋಟಿ ಮೊತ್ತವನ್ನು ಸಂಶೋಧನೆಗೆ ಮೀಸಲಿಡಲಾಗುತ್ತಿದೆ.

ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ  ಅಡಿಕೆ ಹಳದಿ ಎಲೆರೋಗದಿಂದ ಕೃಷಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದೀಗ ರೈತರು ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪೈಲೆಟ್ ಯೋಜನೆಯನ್ನು ಅನುಷ್ಠಾನಗೊಳಿಸಲು ತೋಟಗಾರಿಕಾ ಇಲಾಖೆ ಮುಂದಾಗಿದೆ. ಅದರ ಜೊತೆಗೆ ರೋಗ ನಿಯಂತ್ರಣಕ್ಕೆ ಸಂಶೋಧನೆ ನಡೆಸಲು  ಬಜೆಟ್‌ನಲ್ಲಿ  ಘೋಷಿಸಿದಂತೆ ಸಂಶೋಧನೆಗೆ ಮೀಸಲಿಡುವ ಬಗ್ಗೆ ಚಿಂತನೆ ನಡೆಸಲಾಗಿದೆ.

ಅಡಿಕೆ ಹಳದಿ ರೋಗ ಬಾಧಿತ  ತೋಟಗಳಲ್ಲಿ ಪರ್ಯಾಯ ಬೆಳೆ ಬೆಳೆಸಲು ಹಾಗೂ ರೋಗ ನಿಯಂತ್ರಣದ  ಸಂಶೋನೆಗೆ ರಾಜ್ಯ ಸರ್ಕಾರದಿಂದ ಲಭ್ಯವಾಗುವ 3.25 ಕೋಟಿ ರೂಪಾಯಿ ಮೊತ್ತದ ಸದ್ಯದ ಪ್ಯಾಕೇಜಿನಲ್ಲಿ ಮುಂಜೂರುಗೊಳಿಸಲು ಚಿಂತನೆ ನಡೆಸಲಾಗಿದೆ. ಪ್ರಸ್ತುತ ಮಂಜೂರು ಆಗಿರುವ ಅನುದಾನದಲ್ಲಿ 2.25 ಕೋಟಿ ಪರ್ಯಾಯ ಬೆಳೆಗೆ ಹಾಗೂ  1 ಕೋಟಿ ಮೊತ್ತವನ್ನು ಸಂಶೋಧನೆಗೆ ಮೀಸಲಿಡಲಾಗಿದೆ. ಪರೀಕ್ಷಾ ಪ್ರಯೋಗಾಲಯ ಸ್ಥಾಪನೆ, ರೋಗ ನಿಯಂತ್ರಣದ ಬಗ್ಗೆ ಸಂಶೋಧನೆಯನ್ನು ನಡೆಸುವಂತೆ ಸಿಪಿಸಿಆರ್‌ಐಗೆ ತಿಳಿಸಲಾಗಿದೆ ಎಂದು ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಎಚ್.ಆರ್.ನಾಯ್ಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಇಲಾಖೆ ನಡಸಿದ ಸಮೀಕ್ಷೆಯಲ್ಲಿ ಸಾಕಷ್ಟು ಮಂದಿ ಪರ್ಯಾಯ ಬೆಳೆ ಬೆಳೆಯಲು ಆಸಕ್ತಿ ತೋರಿದ್ದರು. ಆದರೆ ಪರ್ಯಾಯ ಬೆಳೆ ಬೆಳೆಯಲು ರೈತರಿಗೆ ಆರ್ಥಿಕ ಬಲ ಇಲ್ಲದ ಕಾರಣ ಪ್ರೋತ್ಸಾಹಧನ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ  ರೈತರು ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪೈಲೆಟ್ ಯೋಜನೆಯನ್ನು ಅನುಷ್ಠಾನಗೊಳಿಸಲು ಇಲಾಖೆ ಮುಂದಾಗಿದೆ. ಹಾಲಿ ಇರುವ ರೋಗ ಬಾಧಿತ ತೋಟಗಳ ನಡುವೆ ಪರ್ಯಾಯ ಬೆಳೆ ಪ್ರಾರಂಭಿಸಿ, ರೈತರ ಆದಾಯ ಹೆಚ್ಚಿಸುವ ಮೊದಲ ಹೆಜ್ಜೆಯಾಗಿದೆ. ರೈತರು ಆಸಕ್ತಿ ಹೊಂದಿರುವ  ಯಾವುದೇ ಬೆಳೆಗಳನ್ನು ಬೆಳೆಸಲು ಅವಕಾಶ ಇದೆ. ಇದರಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಳಕೆಗೂ ಅವಕಾಶ ಇರುತ್ತದೆ. ಹೀಗಾಗಿ ರೈತರಿಗೆ ಕಡಿಮೆ ವೆಚ್ಚದಲ್ಲಿ  ಕೃಷಿ ಮಾಡುವ ಅವಕಾಶ ಇರುತ್ತದೆ.

ಹಳದಿ ಎಲೆ ರೋಗ ಸಂಶೋಧನೆ ಹಾಗೂ ರೋಗನಿರೋಧಕ ತಳಿ ಅಭಿವೃದ್ಧಿ ಅಥವಾ ಇತರ ಸಂಶೋಧನೆಗಳು,  ಪರೀಕ್ಷಾ ಪ್ರಯೋಗಾಲಯ ಸ್ಥಾಪನೆ, ರೋಗ ನಿಯಂತ್ರಣದ ಬಗ್ಗೆ ಸಂಶೋಧನೆಯನ್ನು ಈಗಾಗಲೇ ವಿಟ್ಲದ ಸಿಪಿಸಿಆರ್‌ಐ ನಡೆಸುತ್ತಿದೆ. ಇನ್ನಷ್ಟು ನಿಖರವಾಗಿ ಸಂಶೋಧನೆಗೆ ಆದ್ಯತೆ ನೀಡುವಂತೆ ಸಿಪಿಸಿಆರ್‌ಐಗೆ ಮನವಿ ಮಾಡಲಾಗಿದೆ.

ಒಟ್ಟಿನಲ್ಲಿ ಅಡಿಕೆ ಬೆಳೆಗಾರರು ಹಳದಿ ಎಲೆರೋಗದಿಂದ ಕಂಗಾಲಾಗುತ್ತಿರುವ ವೇಳೆ ರೋಗ ನಿರೋಧಕ ತಳಿ ಹಾಗೂ ಪರ್ಯಾಯ ಬೆಳೆಯತ್ತ ಕೃಷಿಕರನ್ನು ಉತ್ತೇಜಿಸಲು ಕೆಲಸ ಈಗ ಆರಂಭವಾಗಿದೆ. ಇದು ಪಾಸಿಟಿವ್‌ ಆಗಿರುವ ಫಲಿತಾಂಶ ದೊರೆಯಲಿ ಎಂಬುದು ರೈತರ ಆಶಯ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

7 hours ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

10 hours ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

11 hours ago

ಗ್ರಾಮೀಣ ಜಾಲಕ್ಕೆ ನೆಟ್ವರ್ಕ್ ಬೂಸ್ಟ್‌ – ಬಿಎಸ್ಎನ್ಎಲ್ ಸುಧಾರಣೆಗೆ ಕೇಂದ್ರದ ಆದ್ಯತೆ

ಗ್ರಾಮೀಣ ಪ್ರದೇಶಗಳಿಗೆ ಉತ್ತಮ ಸಂಪರ್ಕ ಒದಗಿಸಲು ಕೇಂದ್ರ ಸರ್ಕಾರ ಆದ್ಯತೆ ನೀಡುತ್ತಿದೆ.

11 hours ago

ಜಾಗತಿಕ ತಾಪಮಾನಕ್ಕೆ ಪರಿಹಾರ : ವೃಕ್ಷ ಸಂವರ್ಧನೆಗೆ ಒತ್ತು

ಜಾಗತಿಕ ತಾಪಮಾನ ನಿಯಂತ್ರಣಕ್ಕೆ ವೃಕ್ಷ ಸಂವರ್ಧನೆ ಮುಖ್ಯ ಎಂದು ಸಚಿವ ಈಶ್ವರ ಖಂಡ್ರೆ…

11 hours ago

ಕೃಷಿಗೆ ಹೊಸ ದಿಕ್ಕು – ICAR ಟಾಸ್ಕ್ ಫೋರ್ಸ್ ಘೋಷಣೆ – ರೈತರ ಆದಾಯ ಹೆಚ್ಚಳಕ್ಕೆ ಪ್ಲಾನ್

ICAR ಕೃಷಿ ಕ್ಷೇತ್ರವನ್ನು ಬಲಪಡಿಸಲು ಸ್ಪೆಷಲ್ ಟಾಸ್ಕ್ ಫೋರ್ಸ್ ರಚಿಸಿದೆ. ಹವಾಮಾನ ಸವಾಲುಗಳಿಗೆ…

19 hours ago