Advertisement
ಸುದ್ದಿಗಳು

ಅಡಿಕೆ ಹಳದಿ ಎಲೆರೋಗ | ಪರ್ಯಾಯ ಬೆಳೆಗೆ ಪೈಲೆಟ್ ಯೋಜನೆ ಅನುಷ್ಠಾನಕ್ಕೆ ಸಿದ್ಧತೆ |

Share
News Summary
ಅಡಿಕೆ ಬೆಳೆಗಾರರನ್ನು ಕಾಡುವ ಬಹುದೊಡ್ಡ ಸಮಸ್ಯೆ ಅಡಿಕೆ ಹಳದಿ ಎಲೆರೋಗ. ಹಲವು ವರ್ಷಗಳಿಂದ ಈ ಸಮಸ್ಯೆ ಇದೆ. ಇದೀಗ ಲಭ್ಯವಾದ ಅನುದಾನದಲ್ಲಿ 2.25 ಕೋಟಿ ಪರ್ಯಾಯ ಬೆಳೆಗೆ ಹಾಗೂ  1 ಕೋಟಿ ಮೊತ್ತವನ್ನು ಸಂಶೋಧನೆಗೆ ಮೀಸಲಿಡಲಾಗುತ್ತಿದೆ.

ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ  ಅಡಿಕೆ ಹಳದಿ ಎಲೆರೋಗದಿಂದ ಕೃಷಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದೀಗ ರೈತರು ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪೈಲೆಟ್ ಯೋಜನೆಯನ್ನು ಅನುಷ್ಠಾನಗೊಳಿಸಲು ತೋಟಗಾರಿಕಾ ಇಲಾಖೆ ಮುಂದಾಗಿದೆ. ಅದರ ಜೊತೆಗೆ ರೋಗ ನಿಯಂತ್ರಣಕ್ಕೆ ಸಂಶೋಧನೆ ನಡೆಸಲು  ಬಜೆಟ್‌ನಲ್ಲಿ  ಘೋಷಿಸಿದಂತೆ ಸಂಶೋಧನೆಗೆ ಮೀಸಲಿಡುವ ಬಗ್ಗೆ ಚಿಂತನೆ ನಡೆಸಲಾಗಿದೆ.

ಅಡಿಕೆ ಹಳದಿ ರೋಗ ಬಾಧಿತ  ತೋಟಗಳಲ್ಲಿ ಪರ್ಯಾಯ ಬೆಳೆ ಬೆಳೆಸಲು ಹಾಗೂ ರೋಗ ನಿಯಂತ್ರಣದ  ಸಂಶೋನೆಗೆ ರಾಜ್ಯ ಸರ್ಕಾರದಿಂದ ಲಭ್ಯವಾಗುವ 3.25 ಕೋಟಿ ರೂಪಾಯಿ ಮೊತ್ತದ ಸದ್ಯದ ಪ್ಯಾಕೇಜಿನಲ್ಲಿ ಮುಂಜೂರುಗೊಳಿಸಲು ಚಿಂತನೆ ನಡೆಸಲಾಗಿದೆ. ಪ್ರಸ್ತುತ ಮಂಜೂರು ಆಗಿರುವ ಅನುದಾನದಲ್ಲಿ 2.25 ಕೋಟಿ ಪರ್ಯಾಯ ಬೆಳೆಗೆ ಹಾಗೂ  1 ಕೋಟಿ ಮೊತ್ತವನ್ನು ಸಂಶೋಧನೆಗೆ ಮೀಸಲಿಡಲಾಗಿದೆ. ಪರೀಕ್ಷಾ ಪ್ರಯೋಗಾಲಯ ಸ್ಥಾಪನೆ, ರೋಗ ನಿಯಂತ್ರಣದ ಬಗ್ಗೆ ಸಂಶೋಧನೆಯನ್ನು ನಡೆಸುವಂತೆ ಸಿಪಿಸಿಆರ್‌ಐಗೆ ತಿಳಿಸಲಾಗಿದೆ ಎಂದು ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಎಚ್.ಆರ್.ನಾಯ್ಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಇಲಾಖೆ ನಡಸಿದ ಸಮೀಕ್ಷೆಯಲ್ಲಿ ಸಾಕಷ್ಟು ಮಂದಿ ಪರ್ಯಾಯ ಬೆಳೆ ಬೆಳೆಯಲು ಆಸಕ್ತಿ ತೋರಿದ್ದರು. ಆದರೆ ಪರ್ಯಾಯ ಬೆಳೆ ಬೆಳೆಯಲು ರೈತರಿಗೆ ಆರ್ಥಿಕ ಬಲ ಇಲ್ಲದ ಕಾರಣ ಪ್ರೋತ್ಸಾಹಧನ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ  ರೈತರು ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪೈಲೆಟ್ ಯೋಜನೆಯನ್ನು ಅನುಷ್ಠಾನಗೊಳಿಸಲು ಇಲಾಖೆ ಮುಂದಾಗಿದೆ. ಹಾಲಿ ಇರುವ ರೋಗ ಬಾಧಿತ ತೋಟಗಳ ನಡುವೆ ಪರ್ಯಾಯ ಬೆಳೆ ಪ್ರಾರಂಭಿಸಿ, ರೈತರ ಆದಾಯ ಹೆಚ್ಚಿಸುವ ಮೊದಲ ಹೆಜ್ಜೆಯಾಗಿದೆ. ರೈತರು ಆಸಕ್ತಿ ಹೊಂದಿರುವ  ಯಾವುದೇ ಬೆಳೆಗಳನ್ನು ಬೆಳೆಸಲು ಅವಕಾಶ ಇದೆ. ಇದರಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಳಕೆಗೂ ಅವಕಾಶ ಇರುತ್ತದೆ. ಹೀಗಾಗಿ ರೈತರಿಗೆ ಕಡಿಮೆ ವೆಚ್ಚದಲ್ಲಿ  ಕೃಷಿ ಮಾಡುವ ಅವಕಾಶ ಇರುತ್ತದೆ.

ಹಳದಿ ಎಲೆ ರೋಗ ಸಂಶೋಧನೆ ಹಾಗೂ ರೋಗನಿರೋಧಕ ತಳಿ ಅಭಿವೃದ್ಧಿ ಅಥವಾ ಇತರ ಸಂಶೋಧನೆಗಳು,  ಪರೀಕ್ಷಾ ಪ್ರಯೋಗಾಲಯ ಸ್ಥಾಪನೆ, ರೋಗ ನಿಯಂತ್ರಣದ ಬಗ್ಗೆ ಸಂಶೋಧನೆಯನ್ನು ಈಗಾಗಲೇ ವಿಟ್ಲದ ಸಿಪಿಸಿಆರ್‌ಐ ನಡೆಸುತ್ತಿದೆ. ಇನ್ನಷ್ಟು ನಿಖರವಾಗಿ ಸಂಶೋಧನೆಗೆ ಆದ್ಯತೆ ನೀಡುವಂತೆ ಸಿಪಿಸಿಆರ್‌ಐಗೆ ಮನವಿ ಮಾಡಲಾಗಿದೆ.

ಒಟ್ಟಿನಲ್ಲಿ ಅಡಿಕೆ ಬೆಳೆಗಾರರು ಹಳದಿ ಎಲೆರೋಗದಿಂದ ಕಂಗಾಲಾಗುತ್ತಿರುವ ವೇಳೆ ರೋಗ ನಿರೋಧಕ ತಳಿ ಹಾಗೂ ಪರ್ಯಾಯ ಬೆಳೆಯತ್ತ ಕೃಷಿಕರನ್ನು ಉತ್ತೇಜಿಸಲು ಕೆಲಸ ಈಗ ಆರಂಭವಾಗಿದೆ. ಇದು ಪಾಸಿಟಿವ್‌ ಆಗಿರುವ ಫಲಿತಾಂಶ ದೊರೆಯಲಿ ಎಂಬುದು ರೈತರ ಆಶಯ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

21 hours ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

2 days ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

2 days ago