Advertisement
ಸುದ್ದಿಗಳು

ಅಡಿಕೆ ಹಳದಿ ಎಲೆರೋಗ | ಪರ್ಯಾಯ ಬೆಳೆಗೆ ಪೈಲೆಟ್ ಯೋಜನೆ ಅನುಷ್ಠಾನಕ್ಕೆ ಸಿದ್ಧತೆ |

Share
News Summary
ಅಡಿಕೆ ಬೆಳೆಗಾರರನ್ನು ಕಾಡುವ ಬಹುದೊಡ್ಡ ಸಮಸ್ಯೆ ಅಡಿಕೆ ಹಳದಿ ಎಲೆರೋಗ. ಹಲವು ವರ್ಷಗಳಿಂದ ಈ ಸಮಸ್ಯೆ ಇದೆ. ಇದೀಗ ಲಭ್ಯವಾದ ಅನುದಾನದಲ್ಲಿ 2.25 ಕೋಟಿ ಪರ್ಯಾಯ ಬೆಳೆಗೆ ಹಾಗೂ  1 ಕೋಟಿ ಮೊತ್ತವನ್ನು ಸಂಶೋಧನೆಗೆ ಮೀಸಲಿಡಲಾಗುತ್ತಿದೆ.

ಸುಳ್ಯ ತಾಲೂಕಿನ ಹಲವು ಕಡೆಗಳಲ್ಲಿ  ಅಡಿಕೆ ಹಳದಿ ಎಲೆರೋಗದಿಂದ ಕೃಷಿಕರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದೀಗ ರೈತರು ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪೈಲೆಟ್ ಯೋಜನೆಯನ್ನು ಅನುಷ್ಠಾನಗೊಳಿಸಲು ತೋಟಗಾರಿಕಾ ಇಲಾಖೆ ಮುಂದಾಗಿದೆ. ಅದರ ಜೊತೆಗೆ ರೋಗ ನಿಯಂತ್ರಣಕ್ಕೆ ಸಂಶೋಧನೆ ನಡೆಸಲು  ಬಜೆಟ್‌ನಲ್ಲಿ  ಘೋಷಿಸಿದಂತೆ ಸಂಶೋಧನೆಗೆ ಮೀಸಲಿಡುವ ಬಗ್ಗೆ ಚಿಂತನೆ ನಡೆಸಲಾಗಿದೆ.

ಅಡಿಕೆ ಹಳದಿ ರೋಗ ಬಾಧಿತ  ತೋಟಗಳಲ್ಲಿ ಪರ್ಯಾಯ ಬೆಳೆ ಬೆಳೆಸಲು ಹಾಗೂ ರೋಗ ನಿಯಂತ್ರಣದ  ಸಂಶೋನೆಗೆ ರಾಜ್ಯ ಸರ್ಕಾರದಿಂದ ಲಭ್ಯವಾಗುವ 3.25 ಕೋಟಿ ರೂಪಾಯಿ ಮೊತ್ತದ ಸದ್ಯದ ಪ್ಯಾಕೇಜಿನಲ್ಲಿ ಮುಂಜೂರುಗೊಳಿಸಲು ಚಿಂತನೆ ನಡೆಸಲಾಗಿದೆ. ಪ್ರಸ್ತುತ ಮಂಜೂರು ಆಗಿರುವ ಅನುದಾನದಲ್ಲಿ 2.25 ಕೋಟಿ ಪರ್ಯಾಯ ಬೆಳೆಗೆ ಹಾಗೂ  1 ಕೋಟಿ ಮೊತ್ತವನ್ನು ಸಂಶೋಧನೆಗೆ ಮೀಸಲಿಡಲಾಗಿದೆ. ಪರೀಕ್ಷಾ ಪ್ರಯೋಗಾಲಯ ಸ್ಥಾಪನೆ, ರೋಗ ನಿಯಂತ್ರಣದ ಬಗ್ಗೆ ಸಂಶೋಧನೆಯನ್ನು ನಡೆಸುವಂತೆ ಸಿಪಿಸಿಆರ್‌ಐಗೆ ತಿಳಿಸಲಾಗಿದೆ ಎಂದು ತೋಟಗಾರಿಕಾ ಇಲಾಖೆ ಉಪನಿರ್ದೇಶಕ ಎಚ್.ಆರ್.ನಾಯ್ಕ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಇಲಾಖೆ ನಡಸಿದ ಸಮೀಕ್ಷೆಯಲ್ಲಿ ಸಾಕಷ್ಟು ಮಂದಿ ಪರ್ಯಾಯ ಬೆಳೆ ಬೆಳೆಯಲು ಆಸಕ್ತಿ ತೋರಿದ್ದರು. ಆದರೆ ಪರ್ಯಾಯ ಬೆಳೆ ಬೆಳೆಯಲು ರೈತರಿಗೆ ಆರ್ಥಿಕ ಬಲ ಇಲ್ಲದ ಕಾರಣ ಪ್ರೋತ್ಸಾಹಧನ ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಇದೀಗ  ರೈತರು ಪರ್ಯಾಯ ಬೆಳೆ ಬೆಳೆಯಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಪೈಲೆಟ್ ಯೋಜನೆಯನ್ನು ಅನುಷ್ಠಾನಗೊಳಿಸಲು ಇಲಾಖೆ ಮುಂದಾಗಿದೆ. ಹಾಲಿ ಇರುವ ರೋಗ ಬಾಧಿತ ತೋಟಗಳ ನಡುವೆ ಪರ್ಯಾಯ ಬೆಳೆ ಪ್ರಾರಂಭಿಸಿ, ರೈತರ ಆದಾಯ ಹೆಚ್ಚಿಸುವ ಮೊದಲ ಹೆಜ್ಜೆಯಾಗಿದೆ. ರೈತರು ಆಸಕ್ತಿ ಹೊಂದಿರುವ  ಯಾವುದೇ ಬೆಳೆಗಳನ್ನು ಬೆಳೆಸಲು ಅವಕಾಶ ಇದೆ. ಇದರಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಬಳಕೆಗೂ ಅವಕಾಶ ಇರುತ್ತದೆ. ಹೀಗಾಗಿ ರೈತರಿಗೆ ಕಡಿಮೆ ವೆಚ್ಚದಲ್ಲಿ  ಕೃಷಿ ಮಾಡುವ ಅವಕಾಶ ಇರುತ್ತದೆ.

ಹಳದಿ ಎಲೆ ರೋಗ ಸಂಶೋಧನೆ ಹಾಗೂ ರೋಗನಿರೋಧಕ ತಳಿ ಅಭಿವೃದ್ಧಿ ಅಥವಾ ಇತರ ಸಂಶೋಧನೆಗಳು,  ಪರೀಕ್ಷಾ ಪ್ರಯೋಗಾಲಯ ಸ್ಥಾಪನೆ, ರೋಗ ನಿಯಂತ್ರಣದ ಬಗ್ಗೆ ಸಂಶೋಧನೆಯನ್ನು ಈಗಾಗಲೇ ವಿಟ್ಲದ ಸಿಪಿಸಿಆರ್‌ಐ ನಡೆಸುತ್ತಿದೆ. ಇನ್ನಷ್ಟು ನಿಖರವಾಗಿ ಸಂಶೋಧನೆಗೆ ಆದ್ಯತೆ ನೀಡುವಂತೆ ಸಿಪಿಸಿಆರ್‌ಐಗೆ ಮನವಿ ಮಾಡಲಾಗಿದೆ.

ಒಟ್ಟಿನಲ್ಲಿ ಅಡಿಕೆ ಬೆಳೆಗಾರರು ಹಳದಿ ಎಲೆರೋಗದಿಂದ ಕಂಗಾಲಾಗುತ್ತಿರುವ ವೇಳೆ ರೋಗ ನಿರೋಧಕ ತಳಿ ಹಾಗೂ ಪರ್ಯಾಯ ಬೆಳೆಯತ್ತ ಕೃಷಿಕರನ್ನು ಉತ್ತೇಜಿಸಲು ಕೆಲಸ ಈಗ ಆರಂಭವಾಗಿದೆ. ಇದು ಪಾಸಿಟಿವ್‌ ಆಗಿರುವ ಫಲಿತಾಂಶ ದೊರೆಯಲಿ ಎಂಬುದು ರೈತರ ಆಶಯ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ

ದೇಶದಾದ್ಯಂತ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಮುಂದಿನ 5 ದಿನ…

3 hours ago

ಅಡಿಕೆ ಕಳ್ಳಸಾಗಣೆ ಪ್ರಕರಣ – ಸಿಲ್ಚಾರ್ ಉದ್ಯಮಿಯ ಮನೆ ಮೇಲೆ ಇ.ಡಿ. ದಾಳಿ, ಹಣ ಅಕ್ರಮ ವರ್ಗಾವಣೆ ತನಿಖೆ ತೀವ್ರ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಸಿಲ್ಚಾರ್ ಉದ್ಯಮಿಯ…

3 hours ago

ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ

ಈ ವಾರದ ಚಿಂತನೆ - "ಸಂಬಂಧಗಳಲ್ಲಿ ಸೋಲು ಅಲ್ಲ, ಅರಿವು ಮುಖ್ಯ"

6 hours ago

ಮುಂಬೈನಲ್ಲಿ ಭಾರೀ ಮಳೆ ಅಬ್ಬರ – ರೆಡ್ ಅಲರ್ಟ್ ಮುಂದುವರಿಕೆ, ಜನಜೀವನ ಅಸ್ತವ್ಯಸ್ತ

ಮುಂಬೈನಲ್ಲಿ ನಿರಂತರ ಭಾರೀ ಮಳೆಯಿಂದ ನಗರದಲ್ಲಿ ಜಲಾವೃತ ಮತ್ತು ಸಂಚಾರ ಅಸ್ತವ್ಯಸ್ತವಾಗಿದೆ. IMD…

15 hours ago

ಮಹಾರಾಷ್ಟ್ರದಲ್ಲಿ ಅಡಿಕೆ ಲಾರಿಗಳ ತಡೆಗೆ BIS ಮಾನದಂಡ ಕಾರಣವೇ ? ಯಾವ ಅಡಿಕೆ ಉತ್ತಮ? ಗ್ರೇಡ್ ಹೇಗೆ ನಿರ್ಧಾರ?

ಭಾರತೀಯ BIS ಮಾನದಂಡದ ಪ್ರಕಾರ ಅಡಿಕೆಯ ಗುಣಮಟ್ಟವನ್ನು ತೇವಾಂಶ, ಅಫ್ಲಾಟಾಕ್ಸಿನ್, ಕೀಟ ಹಾನಿ,…

16 hours ago

ಜಾಕ್‌ಫ್ರೂಟ್ ಸ್ಪೈಸಿ – ಹಲಸಿನ ಕಾಯಿಯಿಂದ 5 ನಿಮಿಷದಲ್ಲಿ ರುಚಿಕರ ಸ್ನ್ಯಾಕ್..!

ಸ್ವಲ್ಪ ಸಿಹಿ ರುಚಿಯ ಹಲಸಿನ ಕಾಯಿಗೆ ವಿವಿಧ ಮಸಾಲೆಗಳನ್ನು ಸೇರಿಸಿ ಕೆಲವೇ ನಿಮಿಷಗಳಲ್ಲಿ…

22 hours ago