Advertisement
MIRROR FOCUS

ಅಡಿಕೆ ಹಳದಿ ರೋಗ ಸಾವಯವ ಕೃಷಿಯಿಂದ ನಿಯಂತ್ರಣವೇ ? | ಮರ್ಕಂಜದ ಕೃಷಿಕ ಬಾಲಕೃಷ್ಣ ಏನು ಹೇಳುತ್ತಾರೆ ?

Share

ಅಡಿಕೆ ಹಳದಿ ಎಲೆ ರೋಗ  ಈಗ ವೇಗವಾಗಿ ವಿಸ್ತರಣೆಯಾಗುತ್ತಿದೆ. ಸಂಪಾಜೆ ಪ್ರದೇಶದಲ್ಲಿ ಮಾತ್ರಾ ಕಂಡುಬರುತ್ತಿದ್ದ ರೋಗ ಈಗ ಮರ್ಕಂಜ ಸೇರಿದಂತೆ ಹಲವು ಕಡೆಗಳಲ್ಲಿ  ಕಂಡುಬಂದಿದೆ. ಈ ರೋಗ  ನಿಯಂತ್ರಣಕ್ಕೆ ಹಲವು ಕೃಷಿಕರು ವಿವಿಧ ಪ್ರಯತ್ನ ಮಾಡಿದ್ದಾರೆ. ಅದರಲ್ಲಿ  ಮರ್ಕಂಜದ ಬಾಲಕೃಷ್ಣ ಅವರು ಸಾವಯವ ಕೃಷಿಯ ಪ್ರಯತ್ನ ಮಾಡಿದ್ದಾರೆ. ಇದರಿಂದ ಹರಡುವಿಕೆ ನಿಧಾನವಾಗಿದೆ ಎನ್ನುತ್ತಾರೆ.

ಅಡಿಕೆ ಹಳದಿ ಎಲೆ ರೋಗ ನಿವಾರಣೆಗೆ ವಿವಿಧ ಪ್ರಯತ್ನ ಕೃಷಿಕರೇ ಮಾಡಿದ್ದಾರೆ. ಕೃಷಿ ವಿಜ್ಞಾನಿಗಳ ರೀತಿಯಲ್ಲಿಯೇ ಹಲವು ಪ್ರಯತ್ನ ಮಾಡಿದವರು ಇದ್ದಾರೆ. ಅದರಲ್ಲಿ  ಸಾವಯವ ಕೃಷಿಯೂ ಒಂದು ವಿಧಾನ.ಸಾವಯವ ಕೃಷಿಯಿಂದ  ರೋಗ ವಿಸ್ತರಣೆಯ ಪ್ರಭಾವ ಕಡಿಮೆಯಾಗಿದೆ ಎಂದು ಹೇಳುತ್ತಾರೆ. ಅಡಿಕೆ ಹಳದಿ ಎಲೆ ರೋಗವು ಇಂತಹ ತೋಟಗಳಿಗೆ ನಿಧಾನವಾಗಿ ಬರುತ್ತದೆ ಮತ್ತು ಹರಡುತ್ತವೆ ಎಂದು ಹೇಳುತ್ತಾರೆ. ಇಂತಹ ಕೃಷಿ ಕೂಡಾ ಇಂದು ಹಳದಿ ಎಲೆ ರೋಗ ಪೀಡಿತ ಪ್ರದೇಶದಲ್ಲಿ ಅಗತ್ಯವಾಗಿದೆ. ರೋಗ ವಿಸ್ತರಣೆಯನ್ನು ಸ್ವಲ್ಪ ನಿಧಾನವಾಗಿಸಬಹುದು ಎಂಬುದು ಸಾವಯವ ಕೃಷಿಕರ ಸಲಹೆಯಾಗಿದೆ.

ಮರ್ಕಂಜದ ಕೃಷಿಕ ಬಾಲಕೃಷ್ಣ ಅವರ ತೋಟದಲ್ಲಿ ಕಳೆದ ಐದು ವರ್ಷದ ಹಿಂದೆ ರೋಗ ಕಂಡುಬಂದಿತ್ತು. ಆಗಲೇ ವಿಸ್ತರಣೆಯಾಗಿತ್ತು, ತಕ್ಷಣವೇ ಸಾವಯವ ಕೃಷಿ ಆರಂಭಿಸಿದರು. ಆ ತೋಟದಲ್ಲಿ ರೋಗ ವಿಸ್ತರಣೆ ಕಡಿಮೆಯಾಗಿದೆ ಎನ್ನುವುದು ಅವರ ಅಭಿಪ್ರಾಯ. ಆದರೆ ರೋಗವೇ ಬರುವುದಿಲ್ಲ ಎನ್ನುವುದಕ್ಕೆ ಸಾಧ್ಯವಿಲ್ಲ ಎನ್ನುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

12 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago