Advertisement
MIRROR FOCUS

ಅಡಿಕೆ ಹಳದಿ ರೋಗ ಸಾವಯವ ಕೃಷಿಯಿಂದ ನಿಯಂತ್ರಣವೇ ? | ಮರ್ಕಂಜದ ಕೃಷಿಕ ಬಾಲಕೃಷ್ಣ ಏನು ಹೇಳುತ್ತಾರೆ ?

Share

ಅಡಿಕೆ ಹಳದಿ ಎಲೆ ರೋಗ  ಈಗ ವೇಗವಾಗಿ ವಿಸ್ತರಣೆಯಾಗುತ್ತಿದೆ. ಸಂಪಾಜೆ ಪ್ರದೇಶದಲ್ಲಿ ಮಾತ್ರಾ ಕಂಡುಬರುತ್ತಿದ್ದ ರೋಗ ಈಗ ಮರ್ಕಂಜ ಸೇರಿದಂತೆ ಹಲವು ಕಡೆಗಳಲ್ಲಿ  ಕಂಡುಬಂದಿದೆ. ಈ ರೋಗ  ನಿಯಂತ್ರಣಕ್ಕೆ ಹಲವು ಕೃಷಿಕರು ವಿವಿಧ ಪ್ರಯತ್ನ ಮಾಡಿದ್ದಾರೆ. ಅದರಲ್ಲಿ  ಮರ್ಕಂಜದ ಬಾಲಕೃಷ್ಣ ಅವರು ಸಾವಯವ ಕೃಷಿಯ ಪ್ರಯತ್ನ ಮಾಡಿದ್ದಾರೆ. ಇದರಿಂದ ಹರಡುವಿಕೆ ನಿಧಾನವಾಗಿದೆ ಎನ್ನುತ್ತಾರೆ.

ಅಡಿಕೆ ಹಳದಿ ಎಲೆ ರೋಗ ನಿವಾರಣೆಗೆ ವಿವಿಧ ಪ್ರಯತ್ನ ಕೃಷಿಕರೇ ಮಾಡಿದ್ದಾರೆ. ಕೃಷಿ ವಿಜ್ಞಾನಿಗಳ ರೀತಿಯಲ್ಲಿಯೇ ಹಲವು ಪ್ರಯತ್ನ ಮಾಡಿದವರು ಇದ್ದಾರೆ. ಅದರಲ್ಲಿ  ಸಾವಯವ ಕೃಷಿಯೂ ಒಂದು ವಿಧಾನ.ಸಾವಯವ ಕೃಷಿಯಿಂದ  ರೋಗ ವಿಸ್ತರಣೆಯ ಪ್ರಭಾವ ಕಡಿಮೆಯಾಗಿದೆ ಎಂದು ಹೇಳುತ್ತಾರೆ. ಅಡಿಕೆ ಹಳದಿ ಎಲೆ ರೋಗವು ಇಂತಹ ತೋಟಗಳಿಗೆ ನಿಧಾನವಾಗಿ ಬರುತ್ತದೆ ಮತ್ತು ಹರಡುತ್ತವೆ ಎಂದು ಹೇಳುತ್ತಾರೆ. ಇಂತಹ ಕೃಷಿ ಕೂಡಾ ಇಂದು ಹಳದಿ ಎಲೆ ರೋಗ ಪೀಡಿತ ಪ್ರದೇಶದಲ್ಲಿ ಅಗತ್ಯವಾಗಿದೆ. ರೋಗ ವಿಸ್ತರಣೆಯನ್ನು ಸ್ವಲ್ಪ ನಿಧಾನವಾಗಿಸಬಹುದು ಎಂಬುದು ಸಾವಯವ ಕೃಷಿಕರ ಸಲಹೆಯಾಗಿದೆ.

ಮರ್ಕಂಜದ ಕೃಷಿಕ ಬಾಲಕೃಷ್ಣ ಅವರ ತೋಟದಲ್ಲಿ ಕಳೆದ ಐದು ವರ್ಷದ ಹಿಂದೆ ರೋಗ ಕಂಡುಬಂದಿತ್ತು. ಆಗಲೇ ವಿಸ್ತರಣೆಯಾಗಿತ್ತು, ತಕ್ಷಣವೇ ಸಾವಯವ ಕೃಷಿ ಆರಂಭಿಸಿದರು. ಆ ತೋಟದಲ್ಲಿ ರೋಗ ವಿಸ್ತರಣೆ ಕಡಿಮೆಯಾಗಿದೆ ಎನ್ನುವುದು ಅವರ ಅಭಿಪ್ರಾಯ. ಆದರೆ ರೋಗವೇ ಬರುವುದಿಲ್ಲ ಎನ್ನುವುದಕ್ಕೆ ಸಾಧ್ಯವಿಲ್ಲ ಎನ್ನುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

7 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

8 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

14 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

1 day ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

1 day ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

2 days ago