Advertisement
MIRROR FOCUS

ಅಡಿಕೆ ಹಳದಿ ರೋಗ ಸಾವಯವ ಕೃಷಿಯಿಂದ ನಿಯಂತ್ರಣವೇ ? | ಮರ್ಕಂಜದ ಕೃಷಿಕ ಬಾಲಕೃಷ್ಣ ಏನು ಹೇಳುತ್ತಾರೆ ?

Share

ಅಡಿಕೆ ಹಳದಿ ಎಲೆ ರೋಗ  ಈಗ ವೇಗವಾಗಿ ವಿಸ್ತರಣೆಯಾಗುತ್ತಿದೆ. ಸಂಪಾಜೆ ಪ್ರದೇಶದಲ್ಲಿ ಮಾತ್ರಾ ಕಂಡುಬರುತ್ತಿದ್ದ ರೋಗ ಈಗ ಮರ್ಕಂಜ ಸೇರಿದಂತೆ ಹಲವು ಕಡೆಗಳಲ್ಲಿ  ಕಂಡುಬಂದಿದೆ. ಈ ರೋಗ  ನಿಯಂತ್ರಣಕ್ಕೆ ಹಲವು ಕೃಷಿಕರು ವಿವಿಧ ಪ್ರಯತ್ನ ಮಾಡಿದ್ದಾರೆ. ಅದರಲ್ಲಿ  ಮರ್ಕಂಜದ ಬಾಲಕೃಷ್ಣ ಅವರು ಸಾವಯವ ಕೃಷಿಯ ಪ್ರಯತ್ನ ಮಾಡಿದ್ದಾರೆ. ಇದರಿಂದ ಹರಡುವಿಕೆ ನಿಧಾನವಾಗಿದೆ ಎನ್ನುತ್ತಾರೆ.

ಅಡಿಕೆ ಹಳದಿ ಎಲೆ ರೋಗ ನಿವಾರಣೆಗೆ ವಿವಿಧ ಪ್ರಯತ್ನ ಕೃಷಿಕರೇ ಮಾಡಿದ್ದಾರೆ. ಕೃಷಿ ವಿಜ್ಞಾನಿಗಳ ರೀತಿಯಲ್ಲಿಯೇ ಹಲವು ಪ್ರಯತ್ನ ಮಾಡಿದವರು ಇದ್ದಾರೆ. ಅದರಲ್ಲಿ  ಸಾವಯವ ಕೃಷಿಯೂ ಒಂದು ವಿಧಾನ.ಸಾವಯವ ಕೃಷಿಯಿಂದ  ರೋಗ ವಿಸ್ತರಣೆಯ ಪ್ರಭಾವ ಕಡಿಮೆಯಾಗಿದೆ ಎಂದು ಹೇಳುತ್ತಾರೆ. ಅಡಿಕೆ ಹಳದಿ ಎಲೆ ರೋಗವು ಇಂತಹ ತೋಟಗಳಿಗೆ ನಿಧಾನವಾಗಿ ಬರುತ್ತದೆ ಮತ್ತು ಹರಡುತ್ತವೆ ಎಂದು ಹೇಳುತ್ತಾರೆ. ಇಂತಹ ಕೃಷಿ ಕೂಡಾ ಇಂದು ಹಳದಿ ಎಲೆ ರೋಗ ಪೀಡಿತ ಪ್ರದೇಶದಲ್ಲಿ ಅಗತ್ಯವಾಗಿದೆ. ರೋಗ ವಿಸ್ತರಣೆಯನ್ನು ಸ್ವಲ್ಪ ನಿಧಾನವಾಗಿಸಬಹುದು ಎಂಬುದು ಸಾವಯವ ಕೃಷಿಕರ ಸಲಹೆಯಾಗಿದೆ.

ಮರ್ಕಂಜದ ಕೃಷಿಕ ಬಾಲಕೃಷ್ಣ ಅವರ ತೋಟದಲ್ಲಿ ಕಳೆದ ಐದು ವರ್ಷದ ಹಿಂದೆ ರೋಗ ಕಂಡುಬಂದಿತ್ತು. ಆಗಲೇ ವಿಸ್ತರಣೆಯಾಗಿತ್ತು, ತಕ್ಷಣವೇ ಸಾವಯವ ಕೃಷಿ ಆರಂಭಿಸಿದರು. ಆ ತೋಟದಲ್ಲಿ ರೋಗ ವಿಸ್ತರಣೆ ಕಡಿಮೆಯಾಗಿದೆ ಎನ್ನುವುದು ಅವರ ಅಭಿಪ್ರಾಯ. ಆದರೆ ರೋಗವೇ ಬರುವುದಿಲ್ಲ ಎನ್ನುವುದಕ್ಕೆ ಸಾಧ್ಯವಿಲ್ಲ ಎನ್ನುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

5 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

5 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

5 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

15 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

16 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

16 hours ago