ಅಡಿಕೆ ಹಳದಿ ಎಲೆ ರೋಗ ಈಗ ವೇಗವಾಗಿ ವಿಸ್ತರಣೆಯಾಗುತ್ತಿದೆ. ಸಂಪಾಜೆ ಪ್ರದೇಶದಲ್ಲಿ ಮಾತ್ರಾ ಕಂಡುಬರುತ್ತಿದ್ದ ರೋಗ ಈಗ ಮರ್ಕಂಜ ಸೇರಿದಂತೆ ಹಲವು ಕಡೆಗಳಲ್ಲಿ ಕಂಡುಬಂದಿದೆ. ಈ ರೋಗ ನಿಯಂತ್ರಣಕ್ಕೆ ಹಲವು ಕೃಷಿಕರು ವಿವಿಧ ಪ್ರಯತ್ನ ಮಾಡಿದ್ದಾರೆ. ಅದರಲ್ಲಿ ಮರ್ಕಂಜದ ಬಾಲಕೃಷ್ಣ ಅವರು ಸಾವಯವ ಕೃಷಿಯ ಪ್ರಯತ್ನ ಮಾಡಿದ್ದಾರೆ. ಇದರಿಂದ ಹರಡುವಿಕೆ ನಿಧಾನವಾಗಿದೆ ಎನ್ನುತ್ತಾರೆ.
ಅಡಿಕೆ ಹಳದಿ ಎಲೆ ರೋಗ ನಿವಾರಣೆಗೆ ವಿವಿಧ ಪ್ರಯತ್ನ ಕೃಷಿಕರೇ ಮಾಡಿದ್ದಾರೆ. ಕೃಷಿ ವಿಜ್ಞಾನಿಗಳ ರೀತಿಯಲ್ಲಿಯೇ ಹಲವು ಪ್ರಯತ್ನ ಮಾಡಿದವರು ಇದ್ದಾರೆ. ಅದರಲ್ಲಿ ಸಾವಯವ ಕೃಷಿಯೂ ಒಂದು ವಿಧಾನ.ಸಾವಯವ ಕೃಷಿಯಿಂದ ರೋಗ ವಿಸ್ತರಣೆಯ ಪ್ರಭಾವ ಕಡಿಮೆಯಾಗಿದೆ ಎಂದು ಹೇಳುತ್ತಾರೆ. ಅಡಿಕೆ ಹಳದಿ ಎಲೆ ರೋಗವು ಇಂತಹ ತೋಟಗಳಿಗೆ ನಿಧಾನವಾಗಿ ಬರುತ್ತದೆ ಮತ್ತು ಹರಡುತ್ತವೆ ಎಂದು ಹೇಳುತ್ತಾರೆ. ಇಂತಹ ಕೃಷಿ ಕೂಡಾ ಇಂದು ಹಳದಿ ಎಲೆ ರೋಗ ಪೀಡಿತ ಪ್ರದೇಶದಲ್ಲಿ ಅಗತ್ಯವಾಗಿದೆ. ರೋಗ ವಿಸ್ತರಣೆಯನ್ನು ಸ್ವಲ್ಪ ನಿಧಾನವಾಗಿಸಬಹುದು ಎಂಬುದು ಸಾವಯವ ಕೃಷಿಕರ ಸಲಹೆಯಾಗಿದೆ.
ಮರ್ಕಂಜದ ಕೃಷಿಕ ಬಾಲಕೃಷ್ಣ ಅವರ ತೋಟದಲ್ಲಿ ಕಳೆದ ಐದು ವರ್ಷದ ಹಿಂದೆ ರೋಗ ಕಂಡುಬಂದಿತ್ತು. ಆಗಲೇ ವಿಸ್ತರಣೆಯಾಗಿತ್ತು, ತಕ್ಷಣವೇ ಸಾವಯವ ಕೃಷಿ ಆರಂಭಿಸಿದರು. ಆ ತೋಟದಲ್ಲಿ ರೋಗ ವಿಸ್ತರಣೆ ಕಡಿಮೆಯಾಗಿದೆ ಎನ್ನುವುದು ಅವರ ಅಭಿಪ್ರಾಯ. ಆದರೆ ರೋಗವೇ ಬರುವುದಿಲ್ಲ ಎನ್ನುವುದಕ್ಕೆ ಸಾಧ್ಯವಿಲ್ಲ ಎನ್ನುತ್ತಾರೆ.
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…