ಅಡಿಕೆ ಮಾರುಕಟ್ಟೆ | ಮತ್ತೆ ಅಡಿಕೆ ಆಮದು ಪತ್ತೆಯಾಯ್ತು | 2.74 ಕೋಟಿ ರೂ. ಮೌಲ್ಯದ ಅಡಿಕೆ ವಶ

September 27, 2020
12:41 PM
ಡಿಕೆ ಧಾರಣೆ ಸದ್ಯ ಸ್ಥಿರವಾಗಿದೆ. ಅಡಿಕೆಗೆ ಬೇಡಿಕೆ ಈಗಲೂ ಇದೆ. ಆದರೆ ಅಡಿಕೆ ಆಮದು ಪ್ರಯತ್ನ ನಡೆಯುತ್ತಲೇ ಇದೆ. ಇದಕ್ಕೆ ಬ್ರೇಕ್‌ ಬೀಳುತ್ತಿದೆ. ಇದೀಗ ಮತ್ತೆ ಅಸ್ಸಾಂ ಮೂಲಕ ದಾಖಲೆ ರಹಿತವಾಗಿ ಬಂದ 72  ಮೆಟ್ರಿಕ್‌ ಟನ್‌ ಅಡಿಕೆಯನ್ನು ಕಸ್ಟಮ್ಸ್ ಇಲಾಖೆ ವಶಪಡಿಸಿಕೊಂಡಿದೆ. ಇದರ ಮೌಲ್ಯ ಸುಮಾರು 2.74 ಕೋಟಿ ರೂಪಾಯಿ ಎಂದು ಅಂದಾಜಿಸಲಾಗಿದೆ.

Advertisement
Advertisement

ಮ್ಯಾನ್ಮಾರ್‌ ನಿಂದ ಅಡಿಕೆಯನ್ನು ದಾಖಲೆ ರಹಿತವಾಗಿ ಸಾಗಾಟ ಮಾಡಲಾಗುತ್ತಿತ್ತು ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದಿದೆ. ಗುಹವಾಟಿಯ ಖಾನಾಪರಾ ಪ್ರದೇಶದಲ್ಲಿ  3 ಲಾರಿಗಳನ್ನು ವಶಪಡಿಕೊಂಡ ಬಳಿಕ ನಡೆಸಿದ ತನಿಖೆಯಿಂದ  ಸುಮಾರು 2.76 ಕೋಟಿ ರೂ ಗಳ ಅಡಿಕೆಯನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ.

ಮಿಜೋರಾಂನಿಂದ  ಅಡಿಕೆಯನ್ನು  ಪಶ್ಚಿಮ ಬಂಗಾಳಕ್ಕೆ ಸಾಗಾಟ ಮಾಡಿ ಅಲ್ಲಿಂದ ನಂತರ ವಿವಿದೆಡೆ ಸರಬರಾಜು ಮಾಡುವ ಉದ್ದೇಶ ಹೊಂದಲಾಗಿತ್ತು. ಮ್ಯಾನ್ಮಾರ್‌ನಿಂದ ಮಿಜೋರಾಂ ಮೂಲಕ ಅಡಿಕೆ ಸಾಗಣೆಯಾಗುತ್ತಿದೆ. ಹೀಗಾಗಿ ಈಗ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು ತೀವ್ರ ನಿಗಾ ಇರಿಸಿ ತನಿಖೆ ಮಾಡುತ್ತಿದ್ದು ಅಡಿಕೆ ಅಕ್ರಮವಾಗಿ ದೇಶದೊಳಗೆ ನುಸುಳದಂತೆ ಕ್ರಮ ಕೈಗೊಂಡಿದ್ದಾರೆ.

ಅಡಿಕೆಗೆ ಬೇಡಿಕೆ ಇದೆ
ಇದುವರೆಗೆ ಅಡಿಕೆ ಅಕ್ರಮವಾಗಿ ಸಾಗಾಟದ ಅನೇಕ ಪ್ರಕರಣಗಳು ದಾಖಲಾಗಿದೆ. ಸೂಕ್ತ ಕ್ರಮಗಳಿಂದಾಗಿ ಅಡಿಕೆ ಧಾರಣೆ ಇಳಿಕೆಯಾಗದಂತೆ  ಅಡಿಕೆ ಬೆಳೆಗಾರರಿಗೆ ತೀರಾ ಪ್ರಯೋಜನವಾಗಿದೆ. ಅಡಿಕೆಗೆ ಈಗಲೂ ಉತ್ತರ ಭಾರತದಲ್ಲಿ  ಬೇಡಿಕೆ ವ್ಯಕ್ತವಾಗುತ್ತಿದೆ. ಆ ಬೇಡಿಕೆಗೆ ತಕ್ಕಂತೆ ಪೂರೈಕೆಯಾಗುತ್ತಿಲ್ಲ. ಹೀಗಾಗಿ ಅಡಿಕೆ ವಿರುದ್ಧ ಅಪಪ್ರಚಾರವೂ ಸಾಕಷ್ಟು ನಡೆಯುತ್ತಿದೆ ಎಂದು ಅಡಿಕೆ ಮಾರುಕಟ್ಟೆ ತಜ್ಞರು ಹೇಳುತ್ತಾರೆ. ಸದ್ಯಕ್ಕೆ ಅಡಿಕೆ ಧಾರಣೆ ಬಗ್ಗೆ ಯಾವುದೇ ಆತಂಕ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ.

 

Advertisement

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ದೇಸೀ ಗೋವು ಸಾಕಾಣಿಕೆಗೆ ಹಳ್ಳಿಯಷ್ಟೇ ಅಲ್ಲ, ನಗರದಲ್ಲೂ ಸಾಧ್ಯ
June 23, 2025
1:18 PM
by: ದ ರೂರಲ್ ಮಿರರ್.ಕಾಂ
ದುಡಿಯುವ ವರ್ಗದಲ್ಲಿ ಮಹಿಳೆಯರ ಸಹಭಾಗಿತ್ವಕ್ಕೆ ಆದ್ಯತೆ | ಮಹಿಳಾ ನೇತೃತ್ವದ ಅಭಿವೃದ್ಧಿಗೆ ಮುನ್ನುಡಿ
June 23, 2025
12:03 PM
by: The Rural Mirror ಸುದ್ದಿಜಾಲ
ಬಸವಸಾಗರ ಜಲಾಶಯದಿಂದ ನದಿಗೆ ಹರಿಸುವ ನೀರಿನ ಪ್ರಮಾಣದಲ್ಲಿ ಇಳಿಕೆ
June 23, 2025
11:36 AM
by: The Rural Mirror ಸುದ್ದಿಜಾಲ
ಫಸಲ್ ವಿಮಾ ಯೋಜನೆ | ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ
June 23, 2025
11:32 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group