Advertisement
ಸುದ್ದಿಗಳು

ಕ್ಯಾನ್ಸರ್‌ ಜೀವಕೋಶ ತಡೆಗೆ ಅಡಿಕೆ ಔಷಧಿ – ಅಡಿಕೆ ಪುಸ್ತಕದಲ್ಲಿ ವಿಶೇಷ ಉಲ್ಲೇಖ | ಅಡಿಕೆ ಬೆಳೆಗಾರರಿಗೆ ಇನ್ನೊಂದು ಬಲ |

Share

ಅಡಿಕೆಯಲ್ಲಿನ ಅರೆಕಾಲಿನ್‌ ಎಂಬ ಅಂಶವು ಕ್ಯಾನ್ಸರ್‌ ಜೀವಕೋಶಗಳ ವಿಸ್ತರಣೆ ತಡೆಯುತ್ತದೆ ಎಂಬ ಅಧ್ಯಯನ ವರದಿ ಇದೀಗ ಗಮನ ಸೆಳೆದಿದೆ. ಅಡಿಕೆ ಪುಸ್ತಕದಲ್ಲಿ ಈ ಅಂಶ ಬಹಿರಂಗವಾಗಿದ್ದು ಅಡಿಕೆ ಬೆಳೆಗಾರರಿಗೆ ಇದೊಂದು ಅಂಶ ಬಲವಾಗಲಿದೆ. ಈವರೆಗೆ ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಗುಮ್ಮ ಆಗಾಗ ಹರಿದಾಡುತ್ತಿತ್ತು.ಅದಕ್ಕೆ ತಾತ್ಕಾಲಿಕ ಉತ್ತರ ದೊರೆತಂತಾಗಿದ್ದು, ಇನ್ನೂ ಹೆಚ್ಚಿನ ಅಧ್ಯಯನ ನಡೆಯುತ್ತಿದೆ.

Advertisement

ಅಮೆರಿಕದ ಅಟ್ಲಾಂಟಾದ ಎಮರಿ ವಿಶ್ವವಿದ್ಯಾಲಯದ ವಿನ್‌ಶಿಪ್ ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌ನಲ್ಲಿ ಇತ್ತೀಚಿನ ಅಧ್ಯಯನದಲ್ಲಿ, ಅರೆಕೋಲಿನ್ ಹೈಡ್ರೋಬ್ರೊಮೈಡ್ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ ಎಂಬ ಅಂಶ ಕಂಡುಬಂದಿದೆ. ಈ ಆಧಾರದಲ್ಲಿ ಅಡಿಕೆ ಹಾನಿಕಾರಕವಲ್ಲ ಎಂಬ ಅಂಶವನ್ನು ದೃಢಪಡಿಸುವ ಅಧ್ಯಯನ ವರದಿ ಇದೀಗ ಬಹಿರಂಗಗೊಂಡಿದೆ.

ಅಡಿಕೆ” ಪುಸ್ತಕದಲ್ಲಿ ಸಿಪಿಸಿಆರ್‌ ಐ ಮಾಜಿ ನಿರ್ದೇಶಕ ಡಾ. ಪಿ ಚೌಡಪ್ಪ ಅವರ ಸಂಪಾದಕತ್ವದಲ್ಲಿ  ಈ ಪುಸ್ತಕ ಹೊರಬರುತ್ತಿದೆ. ಪ್ರಮುಖವಾಗಿ ಈ ಪುಸ್ತಕದಲ್ಲಿ , ಅಡಿಕೆಯಲ್ಲಿನ ಅರೆಕೋಲಿನ್ ಹೈಡ್ರೋಬ್ರೋಮೈಡ್‌ ಅಂಶವು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ ಎಂದು ಹೇಳಿದೆ.  ಈ  ಪುಸ್ತಕದಲ್ಲಿ ಕೃಷಿ ವಿಜ್ಞಾನಿಗಳಾದ ಎಂ. ಅರಿವಳಗನ್, ಸೆಂಥಿಲ್ ಅಮುಧನ್ ಎಂ. ಮತ್ತು ಕೆಬಿ ಹೆಬ್ಬಾರ್ ಅಡಿಕೆಯ ಬಗ್ಗೆ ಬರೆದಿದ್ದಾರೆ.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಚೆಗೆ ಈ ಪುಸ್ತಕವನ್ನು ಬಿಡುಗಡೆ ಮಾಡಿದರು.

ಈ ಪುಸ್ತಕದ ಪ್ರಕಾರ ಅಡಿಕೆಯು ಮೂಲ ರೂಪದಲ್ಲಿ ಅಪಾಯಕಾರಿಯಲ್ಲ. ಅಡಿಕೆಗೆ ಅಲ್ಸರ್, ಗಾಯಗಳು ಮತ್ತು ಕ್ಯಾನ್ಸರ್ ಅನ್ನು ಸಹ ಗುಣಪಡಿಸುವ ಔಷಧೀಯ ಗುಣಗಳನ್ನು ಹೊಂದಿದೆ. ಹೆಚ್ಚಿನ ಜಾನಪದ ಔಷಧಿಗಳ ಚಿಕಿತ್ಸೆ ಹಾಗೂ ಅದರ ಗುಣಗಳು ಈಗ ವೈಜ್ಞಾನಿಕ ಪುರಾವೆಗಳಿಂದ  ಬೆಳಕಿಗೆ ಬಂದಿವೆ ಕೂಡಾ. ಈ ಎಲ್ಲಾ ಗುಣಲಕ್ಷಣಗಳು ಮತ್ತು ಅವುಗಳ ಮೇಲಿನ ಕ್ಲಿನಿಕಲ್ ಪ್ರಯೋಗಗಳಿಗೆ ಕಾರಣವಾಗಿರುವ  ವಿವರವಾದ ಅಧ್ಯಯನಗಳು ದಕ್ಷಿಣ ಮತ್ತು ಆಗ್ನೇಯ ಏಷ್ಯಾದ ಬಹುತೇಕ ದೇಶಗಳಲ್ಲಿ  ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ ಹಾಗೂ ಬಳಕೆಯನ್ನೂ ಮಾಡಲಾಗಿದೆ.  ಆದ್ದರಿಂದ, ಅಡಿಕೆಗಳನ್ನು ಕಾರ್ಸಿನೋಜೆನಿಕ್ ಎಂದು ಅನಗತ್ಯವಾಗಿ ಹೇಳುವ ಬದಲು ಸರಿಯಾದ ವೈಜ್ಞಾನಿಕ ಸಂಶೋಧನೆ ನಡೆಸುವ ಅವಶ್ಯಕತೆಯಿದೆ ಎನ್ನುದು ಉಲ್ಲೇಖ.

ಅಡಿಕೆ ಟಾಸ್ಕ್‌ ಫೋರ್ಸ್ ನ  ಸಮಿತಿಯ ಸದಸ್ಯರೂ ಆಗಿರುವ ಸಿಪಿಸಿಆರ್‌ ಐ ಮಾಜಿ ನಿರ್ದೇಶಕ ಡಾ. ಪಿ ಚೌಡಪ್ಪ ಅವರು, ಅಡಿಕೆಯನ್ನು  ಕ್ಯಾನ್ಸರ್ ಕಾರಕ ಎಂದು ಅನಗತ್ಯ ಹೇಳುವ ಬದಲು ಸರಿಯಾದ ಅಧ್ಯಯನವಾಗಬೇಕಿದೆ ಎಂದು  ಹೇಳುತ್ತಾರೆ. ಇದೀಗ ಅನೇಕ ಅಧ್ಯಯನಗಳ ಪ್ರಕಾರ ಅಡಿಕೆಯ ಮೂಲ ಸ್ವರೂಪ ಆರೋಗ್ಯದ ಮೇಲೆ ಹಾನಿಕಾರಕವಾಗಿಲ್ಲ ಎನ್ನುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಹಲವೆಡೆ ಶನಿವಾರ ಸಂಜೆ ಅಕಾಲಿಕ ಮಳೆಯಾಗಿದ್ದು,…

53 minutes ago

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

7 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

11 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

11 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

12 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

23 hours ago