Advertisement
ಸುದ್ದಿಗಳು

ಕ್ಯಾನ್ಸರ್‌ ಜೀವಕೋಶ ತಡೆಗೆ ಅಡಿಕೆ ಔಷಧಿ – ಅಡಿಕೆ ಪುಸ್ತಕದಲ್ಲಿ ವಿಶೇಷ ಉಲ್ಲೇಖ | ಅಡಿಕೆ ಬೆಳೆಗಾರರಿಗೆ ಇನ್ನೊಂದು ಬಲ |

Share

ಅಡಿಕೆಯಲ್ಲಿನ ಅರೆಕಾಲಿನ್‌ ಎಂಬ ಅಂಶವು ಕ್ಯಾನ್ಸರ್‌ ಜೀವಕೋಶಗಳ ವಿಸ್ತರಣೆ ತಡೆಯುತ್ತದೆ ಎಂಬ ಅಧ್ಯಯನ ವರದಿ ಇದೀಗ ಗಮನ ಸೆಳೆದಿದೆ. ಅಡಿಕೆ ಪುಸ್ತಕದಲ್ಲಿ ಈ ಅಂಶ ಬಹಿರಂಗವಾಗಿದ್ದು ಅಡಿಕೆ ಬೆಳೆಗಾರರಿಗೆ ಇದೊಂದು ಅಂಶ ಬಲವಾಗಲಿದೆ. ಈವರೆಗೆ ಅಡಿಕೆ ಆರೋಗ್ಯಕ್ಕೆ ಹಾನಿಕಾರಕ ಎಂಬ ಗುಮ್ಮ ಆಗಾಗ ಹರಿದಾಡುತ್ತಿತ್ತು.ಅದಕ್ಕೆ ತಾತ್ಕಾಲಿಕ ಉತ್ತರ ದೊರೆತಂತಾಗಿದ್ದು, ಇನ್ನೂ ಹೆಚ್ಚಿನ ಅಧ್ಯಯನ ನಡೆಯುತ್ತಿದೆ.

ಅಮೆರಿಕದ ಅಟ್ಲಾಂಟಾದ ಎಮರಿ ವಿಶ್ವವಿದ್ಯಾಲಯದ ವಿನ್‌ಶಿಪ್ ಕ್ಯಾನ್ಸರ್ ಇನ್‌ಸ್ಟಿಟ್ಯೂಟ್‌ನಲ್ಲಿ ಇತ್ತೀಚಿನ ಅಧ್ಯಯನದಲ್ಲಿ, ಅರೆಕೋಲಿನ್ ಹೈಡ್ರೋಬ್ರೊಮೈಡ್ ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ ಎಂಬ ಅಂಶ ಕಂಡುಬಂದಿದೆ. ಈ ಆಧಾರದಲ್ಲಿ ಅಡಿಕೆ ಹಾನಿಕಾರಕವಲ್ಲ ಎಂಬ ಅಂಶವನ್ನು ದೃಢಪಡಿಸುವ ಅಧ್ಯಯನ ವರದಿ ಇದೀಗ ಬಹಿರಂಗಗೊಂಡಿದೆ.

ಅಡಿಕೆ” ಪುಸ್ತಕದಲ್ಲಿ ಸಿಪಿಸಿಆರ್‌ ಐ ಮಾಜಿ ನಿರ್ದೇಶಕ ಡಾ. ಪಿ ಚೌಡಪ್ಪ ಅವರ ಸಂಪಾದಕತ್ವದಲ್ಲಿ  ಈ ಪುಸ್ತಕ ಹೊರಬರುತ್ತಿದೆ. ಪ್ರಮುಖವಾಗಿ ಈ ಪುಸ್ತಕದಲ್ಲಿ , ಅಡಿಕೆಯಲ್ಲಿನ ಅರೆಕೋಲಿನ್ ಹೈಡ್ರೋಬ್ರೋಮೈಡ್‌ ಅಂಶವು ಕ್ಯಾನ್ಸರ್ ಕೋಶಗಳ ಬೆಳವಣಿಗೆಯನ್ನು ತಡೆಯುತ್ತದೆ ಎಂದು ಹೇಳಿದೆ.  ಈ  ಪುಸ್ತಕದಲ್ಲಿ ಕೃಷಿ ವಿಜ್ಞಾನಿಗಳಾದ ಎಂ. ಅರಿವಳಗನ್, ಸೆಂಥಿಲ್ ಅಮುಧನ್ ಎಂ. ಮತ್ತು ಕೆಬಿ ಹೆಬ್ಬಾರ್ ಅಡಿಕೆಯ ಬಗ್ಗೆ ಬರೆದಿದ್ದಾರೆ.  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈಚೆಗೆ ಈ ಪುಸ್ತಕವನ್ನು ಬಿಡುಗಡೆ ಮಾಡಿದರು.

ಈ ಪುಸ್ತಕದ ಪ್ರಕಾರ ಅಡಿಕೆಯು ಮೂಲ ರೂಪದಲ್ಲಿ ಅಪಾಯಕಾರಿಯಲ್ಲ. ಅಡಿಕೆಗೆ ಅಲ್ಸರ್, ಗಾಯಗಳು ಮತ್ತು ಕ್ಯಾನ್ಸರ್ ಅನ್ನು ಸಹ ಗುಣಪಡಿಸುವ ಔಷಧೀಯ ಗುಣಗಳನ್ನು ಹೊಂದಿದೆ. ಹೆಚ್ಚಿನ ಜಾನಪದ ಔಷಧಿಗಳ ಚಿಕಿತ್ಸೆ ಹಾಗೂ ಅದರ ಗುಣಗಳು ಈಗ ವೈಜ್ಞಾನಿಕ ಪುರಾವೆಗಳಿಂದ  ಬೆಳಕಿಗೆ ಬಂದಿವೆ ಕೂಡಾ. ಈ ಎಲ್ಲಾ ಗುಣಲಕ್ಷಣಗಳು ಮತ್ತು ಅವುಗಳ ಮೇಲಿನ ಕ್ಲಿನಿಕಲ್ ಪ್ರಯೋಗಗಳಿಗೆ ಕಾರಣವಾಗಿರುವ  ವಿವರವಾದ ಅಧ್ಯಯನಗಳು ದಕ್ಷಿಣ ಮತ್ತು ಆಗ್ನೇಯ ಏಷ್ಯಾದ ಬಹುತೇಕ ದೇಶಗಳಲ್ಲಿ  ಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ ಹಾಗೂ ಬಳಕೆಯನ್ನೂ ಮಾಡಲಾಗಿದೆ.  ಆದ್ದರಿಂದ, ಅಡಿಕೆಗಳನ್ನು ಕಾರ್ಸಿನೋಜೆನಿಕ್ ಎಂದು ಅನಗತ್ಯವಾಗಿ ಹೇಳುವ ಬದಲು ಸರಿಯಾದ ವೈಜ್ಞಾನಿಕ ಸಂಶೋಧನೆ ನಡೆಸುವ ಅವಶ್ಯಕತೆಯಿದೆ ಎನ್ನುದು ಉಲ್ಲೇಖ.

ಅಡಿಕೆ ಟಾಸ್ಕ್‌ ಫೋರ್ಸ್ ನ  ಸಮಿತಿಯ ಸದಸ್ಯರೂ ಆಗಿರುವ ಸಿಪಿಸಿಆರ್‌ ಐ ಮಾಜಿ ನಿರ್ದೇಶಕ ಡಾ. ಪಿ ಚೌಡಪ್ಪ ಅವರು, ಅಡಿಕೆಯನ್ನು  ಕ್ಯಾನ್ಸರ್ ಕಾರಕ ಎಂದು ಅನಗತ್ಯ ಹೇಳುವ ಬದಲು ಸರಿಯಾದ ಅಧ್ಯಯನವಾಗಬೇಕಿದೆ ಎಂದು  ಹೇಳುತ್ತಾರೆ. ಇದೀಗ ಅನೇಕ ಅಧ್ಯಯನಗಳ ಪ್ರಕಾರ ಅಡಿಕೆಯ ಮೂಲ ಸ್ವರೂಪ ಆರೋಗ್ಯದ ಮೇಲೆ ಹಾನಿಕಾರಕವಾಗಿಲ್ಲ ಎನ್ನುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

7 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

8 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

14 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

1 day ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

1 day ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

2 days ago