MIRROR FOCUS

ಅಡಿಕೆಗೆ ಇನ್ನೊಂದು ಜಂಪ್‌ | ಮತ್ತೆ ಪತ್ತೆಯಾಯಿತು ಅಡಿಕೆ ಕಳ್ಳಸಾಗಾಣಿಕೆ | 40 ಸಾವಿರ ಕೆಜಿ ಅಡಿಕೆ ವಶಕ್ಕೆ ಪಡೆದ ಅಧಿಕಾರಿಗಳು |

Share

ಅಡಿಕೆ ಮಾರುಕಟ್ಟೆ  ಕಳೆದ ಸುಮಾರು 15  ದಿನಗಳಿಂದ ಸ್ಥಿರವಾಗಿರುವಂತೆಯೇ ಮಾರುಕಟ್ಟೆಯ ಒಳಗೆ ಸಂಚಲನ ಶುರುವಾಗಿದೆ. ಅಡಿಕೆ ಧಾರಣೆಗೆ ಇನ್ನೊಂದು ಜಂಪ್‌ ಸಿಗಲಿದೆ. ಪೂರಕ ವಾತಾವರಣ ಇದ್ದರೂ ಜಂಪ್‌ ಯಾವಾಗ ಎನ್ನುವುದು  ಪ್ರಶ್ನೆಯಾಗಿದೆ. ಮಾರುಕಟ್ಟೆಯಲ್ಲಿನ ಬೇಡಿಕೆ ಈಗ ಮತ್ತೆ ಹೆಚ್ಚಾಗುತ್ತಿದೆ. ಹೀಗಾಗಿ ದೀಪಾವಳಿ ಆಸುಪಾಸಿನಲ್ಲಿ  ಒಂದು ಜಂಪ್‌ ಸಿಗುವ ನಿರೀಕ್ಷೆ ಇದೆ. ಈ ನಡುವೆಯೇ ಬೃಹತ್‌ ಪ್ರಮಾಣದಲ್ಲಿ ಅಡಿಕೆ ಕಳ್ಳಸಾಗಾಣಿಗೆ  ಪತ್ತೆಯಾಗಿದ್ದು ಸುಮಾರು 40  ಸಾವಿರ ಕೆಜಿಯ ಸುಮಾರು 1.56  ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ಶುಕ್ರವಾರ ಅಧಿಕಾರಿಗಳು ಪತ್ತೆ ಮಾಡಿದ್ದಾರೆ.

ಕೊರೋನಾ ನಂತರ ಭಾರತದ ಒಳಗೆ ಯಾವುದೇ ವಸ್ತುಗಳು ಕಳ್ಳಸಾಗಾಣಿಕೆಗೆ ಕಷ್ಟವಾಗಿದೆ. ಹೀಗಾಗಿ ಅಡಿಕೆ ಧಾರಣೆ ಏರಿಕೆಯ ಹಾದಿಯಲ್ಲಿ ಸಾಗುತ್ತಿತ್ತು. ಅದರ ಜೊತೆಗೆ ಈಗ ನೇಪಾಳದ ಮೂಲಕವೂ ಅಡಿಕೆ ಆಮದು ತಡೆಯಾಗಿದೆ. ಹೀಗಾಗಿ ಈಗ ಮತ್ತೆ ಅಡಿಕೆ ಕಳ್ಳಸಾಗಾಣಿಗೆಯು ಭಾರತ -ಮ್ಯಾನ್ಮಾರ್‌ ಗಡಿಯ ಮೂಲಕ ಸಾಗಾಟಕ್ಕೆ ಪ್ರಯತ್ನವಾಗುತ್ತಿದೆ. ಅಸ್ಸಾಂ ಮೂಲಕ ದೇಶದೊಳಕ್ಕೆ ಆಗಮಿಸಿ ಅಲ್ಲಿಂದ ಪೂರೈಕೆ ನಡೆಯುತ್ತಿತ್ತು.

ಇದೀಗ ಮತ್ತೆ ಅಸ್ಸಾಂನಲ್ಲಿ ಗಡಿಭದ್ರತಾ ಪಡೆಯ ಸಿಬಂದಿಗಳು ವಿಶೇಷ ಕಾಳಜಿ ವಹಿಸಿ ಅಡಿಕೆ ಕಳ್ಳಸಾಗಾಣಿಕೆ ತಡೆಹಿಡಿದಿದ್ದಾರೆ. ಮಾಯನ್ಮಾರ್ ಗಡಿ ಸಮೀಪದ ಚಾಂಫೈ ಜಿಲ್ಲೆಯ ಕುವಾಂಗ್‌ಫಾ ಗ್ರಾಮದಲ್ಲಿ ಅಧಿಕಾರಿಗಳ ಜಂಟಿ ಕಾರ್ಯಾಚರಣೆಯಲ್ಲಿ ವಶಪಡಿಸಿಕೊಂಡಿದ್ದಾರೆ. ಕಸ್ಟಮ್ಸ್ ಇಲಾಖೆಯು ಮುಂದಿನ ಕಾನೂನು ಪ್ರಕ್ರಿಯೆಗಳನ್ನು ನಡೆಸುತ್ತಿದೆ.

ಅಡಿಕೆ ಕಳ್ಳಸಾಗಾಣಿಕೆ ನಡೆಯುತ್ತಿರುವುದರಿಂದ ಗಡಿಭದ್ರತಾ ಅಧಿಕಾರಿಗಳು ಹಾಗೂ ಕಸ್ಟಮ್ಸ್‌ ಅಧಿಕಾರಿಗಳು ನಿರಂತರ ತಪಾಸಣೆಯಲ್ಲಿ  ತೊಡಗಿದ್ದಾರೆ.  ಹೀಗಾಗಿ ಭಾರೀ ಪ್ರಮಾಣದ ಅಡಿಕೆ ಸಾಗಾಣಿಕೆ ಮತ್ತೆ ಪತ್ತೆಯಾಗಿದೆ.

ಕಳೆದ ಹಲವು ದಿನಗಳಿಂದ ಅಡಿಕೆ ಖರೀದಿ ಹಾಗೂ ಮಾರಾಟವು ನಿಧಾನಗತಿಯಲ್ಲಿ ಸಾಗುತ್ತಿತ್ತು. ಮಾರುಕಟ್ಟೆಯಲ್ಲಿ ಹಣದ ಕೊರತೆಯ ಕಾರಣದಿಂದ ಧಾರಣೆಯಲ್ಲೂ ಏರುಗತಿ ಇರಲಿಲ್ಲ. ಅದರ ಜೊತೆಗೆ ವ್ಯಾಪಾರಿಗಳಲ್ಲೂ ಹೆಚ್ಚಿನ ಧಾರಣೆ ನೀಡಿ ಖರೀದಿ ಮಾಡಲು ಮಾರುಕಟ್ಟೆಯ ಸ್ಥಿತಿ ಭದ್ರವಾಗಿರಲಿಲ್ಲ. ಖರೀದಿದಾರರ ಸಂಖ್ಯೆಯೂ ಕಡಿಮೆಯಾಗಿತ್ತು.

ವಿಪರೀತ ಧಾರಣೆ ಏರಿಕೆಯ ಕಾರಣದಿಂದ ಅಡಿಕೆ ಖರೀದಿ ಮಾಡುವ ಹಾಗೂ ತಿನ್ನುವ ಮಂದಿಯೂ ಮಂದಗತಿಯಲ್ಲಿತ್ತು. ದೀಪಾವಳಿ ಆಸುಪಾಸಿನಲ್ಲಿ  ಮತ್ತೆ ಧಾರಣೆ ಏರಿಕೆ ನಿರೀಕ್ಷೆ ಸದ್ಯಕ್ಕಿದ್ದು, ಅದಕ್ಕೆ ಪೂರಕವಾಗಿ ಕಳಪೆ ಗುಣಮಟ್ಟದ ಅಥವಾ ವಿದೇಶ ಅಡಿಕೆ ಕಳ್ಳಸಾಗಾಣಿಕೆಗೆ ತಡೆಯಾಗುತ್ತಿದೆ.

ಕ್ಯಾಂಪ್ಕೋ ಅಡಿಕೆ ಮಾರುಕಟ್ಟೆ ಸ್ಥಿರತೆಯ ಕಡೆಗೆ ಹೆಚ್ಚು ಗಮನಹರಿಸಿದೆ. ಬೆಳೆಗಾರರಿಗೆ ಉತ್ತಮ ಧಾರಣೆ ಲಭ್ಯವಾಗಬೇಕು ಎಂದು ಧಾರಣೆಯ ಇಳಿಕೆ ಮಾಡದೆ ಸ್ಥಿರತೆಯನ್ನು ಕಾಯ್ದುಕೊಂಡು ಮಾರುಕಟ್ಟೆಗೆ ಸ್ಥಿರತೆ ನೀಡಿದೆ. 

 

 

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ಮಹೇಶ್ ಪುಚ್ಚಪ್ಪಾಡಿ

ಕೃಷಿಕ ಹಾಗೂ ಕೃಷಿ ಪತ್ರಕರ್ತ | 2007 ರಿಂದ ವಿವಿಧ ಮಾಧ್ಯಮ ಕ್ಷೇತ್ರದಲ್ಲಿ ಕೆಲಸ ಮಾಡಿದ್ದಾರೆ. ಉಷಾಕಿರಣ, ಹೊಸದಿಗಂತ, ವಿಜಯವಾಣಿ ಹಾಗೂ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ವರದಿಗಾರರಾಗಿ, ವಿಭಾಗ ಮುಖ್ಯಸ್ಥರಾಗಿ ಕೆಲಸ ಮಾಡಿದ್ದಾರೆ. ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ಇವರ ಆಸಕ್ತಿಯ ವಿಷಯವಾಗಿದೆ.  

Published by
ಮಹೇಶ್ ಪುಚ್ಚಪ್ಪಾಡಿ

Recent Posts

ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…

5 hours ago

ಸುನಿತಾ ವಿಲಿಯಮ್ಸ್ ಈ ಸಮಾಜಕ್ಕೆ ಸ್ಫೂರ್ತಿ ಏಕೆ…?

ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…

10 hours ago

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…

13 hours ago

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!

ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…

14 hours ago

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…

14 hours ago

ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…

14 hours ago