ಅಡಿಕೆ ಧಾರಣೆ ಏರಿಕೆಯಾಗುತ್ತಿದ್ದಂತೆಯೇ ಅಡಿಕೆ ನಿಷೇಧದ ಗುಮ್ಮ ಪ್ರತೀ ಬಾರಿ ಬರುತ್ತಿದೆ. ಈ ಬಾರಿಯೂ ಮತ್ತೆ ಆ ಸುದ್ದಿ ಪ್ರತ್ಯಕ್ಷವಾಗಿದೆ. ಆದರೆ ಈ ಬಾರಿ ಬಿಜೆಪಿ ಸಂಸದ ಇದರ ರುವಾರಿ…!.
ಅಡಿಕೆ ಧಾರಣೆ ಕಳೆದ ಒಂದು ವರ್ಷದಿಂದ ಏರಿಕೆಯಾಗುತ್ತಲೇ ಇದೆ. ಅಡಿಕೆ ಆಮದಿಗೆ ತಡೆಯಾಗಿರುವುದು ಹಾಗೂ ಭಾರತದಲ್ಲಿ ಅಡಿಕೆ ಬೇಡಿಕೆ ಇರುವುದು ಧಾರಣೆ ಏರಿಕೆಗೆ ಕಾರಣವಾಗಿದೆ. ಧಾರಣೆ ಏರಿಕೆ ಬೆನ್ನಲ್ಲೇ ಅಡಿಕೆ ನಿಷೇಧ ಅಥವಾ ಅಡಿಕೆ ಹಾನಿಕಾರಕದ ಗುಮ್ಮ ಪ್ರತೀ ಬಾರಿಯೂ ಬರುತ್ತಿದೆ. ಈ ಬಾರಿಯೂ ಅಂತಹ ಗುಮ್ಮ ಕಾಣಿಸಿದೆ. ಕಳೆದ ವರ್ಷವೂ ಕಾಣಿಸಿಕೊಂಡಿತ್ತು. ಇದೀಗ ಜಾರ್ಖಂಡ್ ಬಿಜೆಪಿ ಸಂಸದ ನಿಶಿಕಾಂತ್ ಅವರು ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ. ಅಡಿಕೆ ಸೇವನೆ ಹಾನಿಕಾರಕವಾಗಿದ್ದು , ಇದನ್ನು ಜನರ ಸೇವಿಸಿದಂತೆ ನಿಷೇಧ ಮಾಡಬೇಕು ಹಾಗೂ ಪೂಜೆ ಅಥವಾ ಧಾರ್ಮಿಕ ಕಾರ್ಯಗಳಲ್ಲಿ ಮಾತ್ರವೇ ಬಳಕೆ ಮಾಡಬೇಕು ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ ಎಂದು ತಿಳಿದುಬಂದಿದೆ.
ಅಡಿಕೆ ನಿಷೇಧದ ಗುಮ್ಮನ ಬಗ್ಗೆ ಎರಡು ತಿಂಗಳ ಹಿಂದೆ ” ರೂರಲ್ ಮಿರರ್ ” ಅಡಿಕೆ ಹಾನಿಕಾರಕ ಸುದ್ದಿಯು ಮತ್ತೆ ಪ್ರಚಲಿತಕ್ಕೆ ಬರಲಿದ್ದು, ಈ ಬಗ್ಗೆ ಅಂತರಾಷ್ಟ್ರೀಯ ಮಟ್ಟದಲ್ಲೂ ಲಾಬಿಗಳು ನಡೆಯುತ್ತಿರುವ ಬಗ್ಗೆ ವರದಿ ಮಾಡಿತ್ತು. ಇದೀಗ ಭಾರತದಲ್ಲೂ ಅಡಿಕೆ ಹಾನಿಕಾರಕ, ನಿಷೇಧದ ಗುಮ್ಮ ಮತ್ತೆ ಮೇಲೆದ್ದಿದೆ.
ಮೇ 6 ರಿಂದ ಕೊಡಗು ಹಾಗೂ ದಕ್ಷಿಣ ಕರಾವಳಿ, ಚಿಕ್ಕಮಗಳೂರು ಭಾಗಗಳಲ್ಲಿ ಮತ್ತೆ…
ಕೊಕೋ ಧಾರಣೆಯಲ್ಲಿ ಸ್ವಲ್ಪ ಇಳಿಕೆ ಕಂಡುಬಂದಿದೆ.
ಕುಕ್ಕೆ ಸುಬ್ರಹ್ಮಣ್ಯ ಸೇರಿದಂತೆ ಸುಳ್ಯ,ಕಡಬ ತಾಲೂಕಿನ ಘಟ್ಟದ ತಪ್ಪಲಿನ ಪ್ರದೇಶದಲ್ಲಿ ಗುಡುಗು ಸಿಡಿಲು…
04.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು, ದಕ್ಷಿಣ…
03.05.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಬಿದಿರು ಕೃಷಿಯ ಬಗ್ಗೆ ಈಗ ಸಾಕಷ್ಟು ಅಧ್ಯಯನ ನಡೆಯುತ್ತಿದೆ. ಈ ನಡುವೆ ಪುತ್ತೂರು…