Advertisement
ಸುದ್ದಿಗಳು

ಅಡಿಕೆ ಮೇಲಿನ ನಿಷೇಧದ ಗುಮ್ಮ ಪ್ರತ್ಯಕ್ಷ | ಈ ಬಾರಿ ಬಿಜೆಪಿ ಸಂಸದ ಇದರ ರುವಾರಿ…!!

Share

ಅಡಿಕೆ ಧಾರಣೆ ಏರಿಕೆಯಾಗುತ್ತಿದ್ದಂತೆಯೇ ಅಡಿಕೆ ನಿಷೇಧದ ಗುಮ್ಮ ಪ್ರತೀ ಬಾರಿ ಬರುತ್ತಿದೆ. ಈ ಬಾರಿಯೂ ಮತ್ತೆ ಆ ಸುದ್ದಿ ಪ್ರತ್ಯಕ್ಷವಾಗಿದೆ. ಆದರೆ ಈ ಬಾರಿ  ಬಿಜೆಪಿ ಸಂಸದ ಇದರ ರುವಾರಿ…!. 

ಅಡಿಕೆ ಧಾರಣೆ ಕಳೆದ ಒಂದು ವರ್ಷದಿಂದ ಏರಿಕೆಯಾಗುತ್ತಲೇ ಇದೆ. ಅಡಿಕೆ ಆಮದಿಗೆ ತಡೆಯಾಗಿರುವುದು  ಹಾಗೂ ಭಾರತದಲ್ಲಿ  ಅಡಿಕೆ ಬೇಡಿಕೆ ಇರುವುದು  ಧಾರಣೆ ಏರಿಕೆಗೆ ಕಾರಣವಾಗಿದೆ. ಧಾರಣೆ ಏರಿಕೆ ಬೆನ್ನಲ್ಲೇ ಅಡಿಕೆ ನಿಷೇಧ ಅಥವಾ ಅಡಿಕೆ ಹಾನಿಕಾರಕದ ಗುಮ್ಮ ಪ್ರತೀ ಬಾರಿಯೂ ಬರುತ್ತಿದೆ. ಈ ಬಾರಿಯೂ ಅಂತಹ ಗುಮ್ಮ ಕಾಣಿಸಿದೆ. ಕಳೆದ ವರ್ಷವೂ ಕಾಣಿಸಿಕೊಂಡಿತ್ತು. ಇದೀಗ ಜಾರ್ಖಂಡ್‌ ಬಿಜೆಪಿ ಸಂಸದ ನಿಶಿಕಾಂತ್‌ ಅವರು ಪ್ರಧಾನಿಗಳಿಗೆ ಪತ್ರ ಬರೆದಿದ್ದಾರೆ. ಅಡಿಕೆ ಸೇವನೆ ಹಾನಿಕಾರಕವಾಗಿದ್ದು , ಇದನ್ನು ಜನರ ಸೇವಿಸಿದಂತೆ  ನಿಷೇಧ ಮಾಡಬೇಕು ಹಾಗೂ ಪೂಜೆ ಅಥವಾ ಧಾರ್ಮಿಕ ಕಾರ್ಯಗಳಲ್ಲಿ  ಮಾತ್ರವೇ ಬಳಕೆ ಮಾಡಬೇಕು ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ ಎಂದು ತಿಳಿದುಬಂದಿದೆ.

ಅಡಿಕೆ ನಿಷೇಧದ ಗುಮ್ಮ...

ಅಡಿಕೆ ನಿಷೇಧದ ಗುಮ್ಮನ ಬಗ್ಗೆ ಎರಡು ತಿಂಗಳ ಹಿಂದೆ ” ರೂರಲ್‌ ಮಿರರ್‌ ”  ಅಡಿಕೆ ಹಾನಿಕಾರಕ ಸುದ್ದಿಯು ಮತ್ತೆ ಪ್ರಚಲಿತಕ್ಕೆ ಬರಲಿದ್ದು, ಈ ಬಗ್ಗೆ ಅಂತರಾಷ್ಟ್ರೀಯ ಮಟ್ಟದಲ್ಲೂ ಲಾಬಿಗಳು ನಡೆಯುತ್ತಿರುವ ಬಗ್ಗೆ ವರದಿ ಮಾಡಿತ್ತು. ಇದೀಗ ಭಾರತದಲ್ಲೂ ಅಡಿಕೆ ಹಾನಿಕಾರಕ, ನಿಷೇಧದ ಗುಮ್ಮ ಮತ್ತೆ ಮೇಲೆದ್ದಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

8 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

8 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

10 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

13 hours ago