ಅಡಿಕೆಯ ಬಗ್ಗೆ ಸರಿಯಾದ ವೈಜ್ಞಾನಿಕ ಸಂಶೋಧನೆ ನಡೆಸಿ ರೈತರಿಗೆ ಧೈರ್ಯ ತುಂಬಲು ಅಡಿಕೆ ಬೆಳೆಗಾರರ ಸಂಘ ಒತ್ತಾಯ

November 12, 2021
10:44 AM

ಈಚೆಗೆ ಜಾರ್ಖಂಡ್‌ ಸಂಸದ ನಿಶಿಕಾಂತ್‌ ಅವರು  ‘ಅಡಿಕೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಹಾಗೂ ಹಾನಿಕಾರಕ’ ಎಂದು ಹೇಳಿರುವುದು  ಖಂಡಿನೀಯ. ಕಳೆದ ಹಲವು ವರ್ಷಗಳಿಂದ ಇಂತಹ ಹೇಳಿಕೆಗಳು ಆಗಾಗ ಕೇಳಿಬರುತ್ತಿದೆ. ಭಾರತೀಯ ಪರಂಪರೆಯಲ್ಲಿ ಅಡಿಕೆಯು ಪರಂಪರಾಗತವಾಗಿ ಬಳಕೆಯಾಗುತ್ತಿದೆ. ಅನ್ಯಾನ್ಯ ವೈಜ್ಞಾನಿಕ ವರದಿಗಳು ‘ಅಡಿಕೆ ಮಾತ್ರವೇ ಹಾನಿಕಾಕರವಲ್ಲ’ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಈ ವರದಿಯ ಹಿನ್ನೆಲೆಯಲ್ಲಿ ಮತ್ತೊಮ್ಮೆ ‘ವೈಜ್ಞಾನಿಕವಾದ ಸಂಶೋಧನೆ’ ನಡೆಯಬೇಕು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸಿದೆ.

Advertisement
Advertisement
Advertisement

ಭಾರತದಲ್ಲಿ ಸುಮಾರು ಐದರಿಂದ ರಿಂದ ಆರು ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ  ಅಡಿಕೆಯನ್ನು ಬೆಳೆಯಲಾಗುತ್ತಿದೆ.  ಏಳರಿಂದ ಎಂಟು ಲಕ್ಷ ಮೆಟ್ರಿಕ್‌ ಟನ್‌ ಅಡಿಕೆ ಉತ್ಪಾದನೆಯಾಗುತ್ತಿದೆ.  ದೇಶದಲ್ಲಿ  ಸುಮಾರು ಐದು ಲಕ್ಷ ಕೃಷಿಕರು ಅಡಿಕೆಯನ್ನೇ ನಂಬಿ ಬದುಕುತ್ತಿದ್ದಾರೆ. ಇಷ್ಟು ಮಾತ್ರವಲ್ಲ, ಅಡಿಕೆ ಮಾರುಕಟ್ಟೆಯ ಮೂಲಕವೂ ಲಕ್ಷಾಂತರ ಮಂದಿ ಬದುಕು ಸಾಗಿಸುತ್ತಿದ್ದಾರೆ. ದೇಶದಲ್ಲಿ  ಕರ್ನಾಟಕ ಹಾಗೂ ಕೇರಳದಲ್ಲಿ  ಅಡಿಕೆಯನ್ನು ಹೆಚ್ಚಾಗಿ ಬೆಳೆಯುತ್ತಿದ್ದಾರೆ. ಕರ್ನಾಟಕದ ಶೇ 60 ಭಾಗದಲ್ಲಿ ಅಡಿಕೆ ಬೆಳೆಯು ವಿಸ್ತಾರಗೊಂಡಿದೆ. ಅಡಿಕೆಯಿಂದಾಗಿ ಸರಕಾರಕ್ಕೂ ತೆರಿಗೆ ಹಾಗೂ ಇತರ ಮೂಲಗಳಿಂದ ಆದಾಯವೂ ಸಂದಾಯವಾಗುತ್ತಿದೆ.

Advertisement

ಇದೀಗ ‘ಅಡಿಕೆ ಹಾನಿಕಾರಕ’ ಎನ್ನುವ ವರದಿಗಳಿಂದ ಅಡಿಕೆ ಬೆಳೆಗಾರರು ಗೊಂದಲಕ್ಕೀಡಾಗಿದ್ದಾರೆ. ಕೃಷಿ ಬದುಕಿನ ಭವಿಷ್ಯದ ಬಗ್ಗೆ ಆತಂಕಿತರಾಗಿದ್ದಾರೆ.  ಹೀಗಾಗಿ ಸರಕಾರವು ಮಧ್ಯಪ್ರವೇಶ ಮಾಡಿ ಅಡಿಕೆಯ ಬಗ್ಗೆ ಸರಿಯಾದ ವೈಜ್ಞಾನಿಕ ಸಂಶೋಧನೆ ನಡೆಸಿ ರೈತರಿಗೆ ಧೈರ್ಯ ತುಂಬಬೇಕು ಎಂದು ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸುತ್ತದೆ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಅಧ್ಯಕ್ಷ ಅಶೋಕ್‌ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ ತಿಳಿಸಿದ್ದಾರೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬೆಂಗಳೂರಿನಲ್ಲಿ ನೀರಿಗಾಗಿ ಖರ್ಚು…! | ಜಲಮಂಡಳಿಗೆ ಆರ್ಥಿಕ ಸಂಕಷ್ಟ..!
March 29, 2024
3:03 PM
by: ದ ರೂರಲ್ ಮಿರರ್.ಕಾಂ
Karnataka Weather | 28-03-2024 | ಕೆಲವು ಕಡೆ ತುಂತುರು ಮಳೆ | ಮಾ.31 ನಂತರ ಕೆಲವು ಕಡೆ ಸಾಮಾನ್ಯ ಮಳೆ ನಿರೀಕ್ಷೆ |
March 28, 2024
1:19 PM
by: ಸಾಯಿಶೇಖರ್ ಕರಿಕಳ
ಬರ ಹಿನ್ನೆಲೆ | ಮೈಸೂರು ಜಿಲ್ಲೆಯಲ್ಲಿ ಪಂಪ್‌ಸೆಟ್ ಬಳಸಿ ಕೃಷಿಗೆ ನದಿ ನೀರು ಬಳಕೆ ನಿಷೇಧ |
March 27, 2024
10:01 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಆಮದು ಪ್ರಕರಣಗಳಲ್ಲಿ ದೂರು ದಾಖಲಾಗುತ್ತಿಲ್ಲವೇಕೆ…? | ಆರೋಪಿಗಳು ಪತ್ತೆಯಾಗುತ್ತಿಲ್ಲವೇಕೆ…? |
March 27, 2024
9:32 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror