Advertisement
ಸುದ್ದಿಗಳು

ಅಡಿಕೆಯ ಬಗ್ಗೆ ಸರಿಯಾದ ವೈಜ್ಞಾನಿಕ ಸಂಶೋಧನೆ ನಡೆಸಿ ರೈತರಿಗೆ ಧೈರ್ಯ ತುಂಬಲು ಅಡಿಕೆ ಬೆಳೆಗಾರರ ಸಂಘ ಒತ್ತಾಯ

Share

ಈಚೆಗೆ ಜಾರ್ಖಂಡ್‌ ಸಂಸದ ನಿಶಿಕಾಂತ್‌ ಅವರು  ‘ಅಡಿಕೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಹಾಗೂ ಹಾನಿಕಾರಕ’ ಎಂದು ಹೇಳಿರುವುದು  ಖಂಡಿನೀಯ. ಕಳೆದ ಹಲವು ವರ್ಷಗಳಿಂದ ಇಂತಹ ಹೇಳಿಕೆಗಳು ಆಗಾಗ ಕೇಳಿಬರುತ್ತಿದೆ. ಭಾರತೀಯ ಪರಂಪರೆಯಲ್ಲಿ ಅಡಿಕೆಯು ಪರಂಪರಾಗತವಾಗಿ ಬಳಕೆಯಾಗುತ್ತಿದೆ. ಅನ್ಯಾನ್ಯ ವೈಜ್ಞಾನಿಕ ವರದಿಗಳು ‘ಅಡಿಕೆ ಮಾತ್ರವೇ ಹಾನಿಕಾಕರವಲ್ಲ’ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಈ ವರದಿಯ ಹಿನ್ನೆಲೆಯಲ್ಲಿ ಮತ್ತೊಮ್ಮೆ ‘ವೈಜ್ಞಾನಿಕವಾದ ಸಂಶೋಧನೆ’ ನಡೆಯಬೇಕು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸಿದೆ.

Advertisement
Advertisement
Advertisement
Advertisement
Advertisement

ಭಾರತದಲ್ಲಿ ಸುಮಾರು ಐದರಿಂದ ರಿಂದ ಆರು ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ  ಅಡಿಕೆಯನ್ನು ಬೆಳೆಯಲಾಗುತ್ತಿದೆ.  ಏಳರಿಂದ ಎಂಟು ಲಕ್ಷ ಮೆಟ್ರಿಕ್‌ ಟನ್‌ ಅಡಿಕೆ ಉತ್ಪಾದನೆಯಾಗುತ್ತಿದೆ.  ದೇಶದಲ್ಲಿ  ಸುಮಾರು ಐದು ಲಕ್ಷ ಕೃಷಿಕರು ಅಡಿಕೆಯನ್ನೇ ನಂಬಿ ಬದುಕುತ್ತಿದ್ದಾರೆ. ಇಷ್ಟು ಮಾತ್ರವಲ್ಲ, ಅಡಿಕೆ ಮಾರುಕಟ್ಟೆಯ ಮೂಲಕವೂ ಲಕ್ಷಾಂತರ ಮಂದಿ ಬದುಕು ಸಾಗಿಸುತ್ತಿದ್ದಾರೆ. ದೇಶದಲ್ಲಿ  ಕರ್ನಾಟಕ ಹಾಗೂ ಕೇರಳದಲ್ಲಿ  ಅಡಿಕೆಯನ್ನು ಹೆಚ್ಚಾಗಿ ಬೆಳೆಯುತ್ತಿದ್ದಾರೆ. ಕರ್ನಾಟಕದ ಶೇ 60 ಭಾಗದಲ್ಲಿ ಅಡಿಕೆ ಬೆಳೆಯು ವಿಸ್ತಾರಗೊಂಡಿದೆ. ಅಡಿಕೆಯಿಂದಾಗಿ ಸರಕಾರಕ್ಕೂ ತೆರಿಗೆ ಹಾಗೂ ಇತರ ಮೂಲಗಳಿಂದ ಆದಾಯವೂ ಸಂದಾಯವಾಗುತ್ತಿದೆ.

Advertisement

ಇದೀಗ ‘ಅಡಿಕೆ ಹಾನಿಕಾರಕ’ ಎನ್ನುವ ವರದಿಗಳಿಂದ ಅಡಿಕೆ ಬೆಳೆಗಾರರು ಗೊಂದಲಕ್ಕೀಡಾಗಿದ್ದಾರೆ. ಕೃಷಿ ಬದುಕಿನ ಭವಿಷ್ಯದ ಬಗ್ಗೆ ಆತಂಕಿತರಾಗಿದ್ದಾರೆ.  ಹೀಗಾಗಿ ಸರಕಾರವು ಮಧ್ಯಪ್ರವೇಶ ಮಾಡಿ ಅಡಿಕೆಯ ಬಗ್ಗೆ ಸರಿಯಾದ ವೈಜ್ಞಾನಿಕ ಸಂಶೋಧನೆ ನಡೆಸಿ ರೈತರಿಗೆ ಧೈರ್ಯ ತುಂಬಬೇಕು ಎಂದು ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸುತ್ತದೆ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಅಧ್ಯಕ್ಷ ಅಶೋಕ್‌ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಸ್ಸಾಂನಲ್ಲಿ ವಶಪಡಿಸಿಕೊಂಡ 60,000 ಕೆಜಿಗೂ ಹೆಚ್ಚು ಅಡಿಕೆಯ ಒಡೆಯರು ಯಾರು…? | ಅಧಿಕಾರಿಗಳಿಗೆ ತಲೆನೋವಾದ ಅಡಿಕೆ…! |

ಅಸ್ಸಾಂನ ಕ್ಯಾಚರ್ ಜಿಲ್ಲೆಯ ಲಖಿಪುರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳಲ್ಲಿ ವಶಪಡಿಸಿಕೊಂಡ ಸುಮಾರು…

6 hours ago

ಹೊಸರುಚಿ | ಗುಜ್ಜೆ ಕಟ್ಲೇಟ್

ಗುಜ್ಜೆ ಕಟ್ಲೇಟ್ ಮಾಡುವ ವಿಧಾನದ ಬಗ್ಗೆ ಗೃಹಿಣಿ ದಿವ್ಯಮಹೇಶ್‌ ಅವರು ಇಲ್ಲಿ ವಿವರ…

7 hours ago

ಕುಂಭಮೇಳ | ಪ್ರಯಾಗ ತಲಪುವಾಗ ಸಂತಸವೇ ಸಂತಸ…

ಪ್ರಯಾಗ್‌ ರಾಜ್‌ ತಲಪುವ ವೇಳೆ ಆಗುತ್ತಿರುವ ಸಂತಸದ ಬಗ್ಗೆ ಸುರೇಶ್ಚಂದ್ರ ಅವರು ಬರೆದಿದ್ದಾರೆ…

7 hours ago

ಮನೆಯಲ್ಲಿ ಮಕ್ಕಳಿಗೆ ಸ್ಟ್ರಾಂಗ್ ಫಾದರ್ ಮತ್ತು ಕಲ್ಚರ್ಡ್ ಮದರ್ ಇರಬೇಕು

ಶಿಕ್ಷಣವೆಂದರೆ ಅದು ಹಣ ಕೊಟ್ಟು ಪಡೆಯುವ ವಸ್ತುವಿನಂತೆ ಬಿಕರಿಯಾಗುತ್ತಿದೆ. ಈ ದೃಷ್ಠಿಯಿಂದ ಶಿಕ್ಷಣ…

8 hours ago

ಮಾರ್ಚ್ ಆರಂಭದಲ್ಲೇ ರಾಜ್ಯದ ತಾಪಮಾನ ಭಾರೀ ಪ್ರಮಾಣದಲ್ಲಿ ಹೆಚ್ಚಳ

ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರಕನ್ನಡ ಜಿಲ್ಲೆಗಳಲ್ಲಿ…

2 days ago