ಸುದ್ದಿಗಳು

ಅಡಿಕೆಯ ಬಗ್ಗೆ ಸರಿಯಾದ ವೈಜ್ಞಾನಿಕ ಸಂಶೋಧನೆ ನಡೆಸಿ ರೈತರಿಗೆ ಧೈರ್ಯ ತುಂಬಲು ಅಡಿಕೆ ಬೆಳೆಗಾರರ ಸಂಘ ಒತ್ತಾಯ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಈಚೆಗೆ ಜಾರ್ಖಂಡ್‌ ಸಂಸದ ನಿಶಿಕಾಂತ್‌ ಅವರು  ‘ಅಡಿಕೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಹಾಗೂ ಹಾನಿಕಾರಕ’ ಎಂದು ಹೇಳಿರುವುದು  ಖಂಡಿನೀಯ. ಕಳೆದ ಹಲವು ವರ್ಷಗಳಿಂದ ಇಂತಹ ಹೇಳಿಕೆಗಳು ಆಗಾಗ ಕೇಳಿಬರುತ್ತಿದೆ. ಭಾರತೀಯ ಪರಂಪರೆಯಲ್ಲಿ ಅಡಿಕೆಯು ಪರಂಪರಾಗತವಾಗಿ ಬಳಕೆಯಾಗುತ್ತಿದೆ. ಅನ್ಯಾನ್ಯ ವೈಜ್ಞಾನಿಕ ವರದಿಗಳು ‘ಅಡಿಕೆ ಮಾತ್ರವೇ ಹಾನಿಕಾಕರವಲ್ಲ’ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಈ ವರದಿಯ ಹಿನ್ನೆಲೆಯಲ್ಲಿ ಮತ್ತೊಮ್ಮೆ ‘ವೈಜ್ಞಾನಿಕವಾದ ಸಂಶೋಧನೆ’ ನಡೆಯಬೇಕು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸಿದೆ.

Advertisement

ಭಾರತದಲ್ಲಿ ಸುಮಾರು ಐದರಿಂದ ರಿಂದ ಆರು ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ  ಅಡಿಕೆಯನ್ನು ಬೆಳೆಯಲಾಗುತ್ತಿದೆ.  ಏಳರಿಂದ ಎಂಟು ಲಕ್ಷ ಮೆಟ್ರಿಕ್‌ ಟನ್‌ ಅಡಿಕೆ ಉತ್ಪಾದನೆಯಾಗುತ್ತಿದೆ.  ದೇಶದಲ್ಲಿ  ಸುಮಾರು ಐದು ಲಕ್ಷ ಕೃಷಿಕರು ಅಡಿಕೆಯನ್ನೇ ನಂಬಿ ಬದುಕುತ್ತಿದ್ದಾರೆ. ಇಷ್ಟು ಮಾತ್ರವಲ್ಲ, ಅಡಿಕೆ ಮಾರುಕಟ್ಟೆಯ ಮೂಲಕವೂ ಲಕ್ಷಾಂತರ ಮಂದಿ ಬದುಕು ಸಾಗಿಸುತ್ತಿದ್ದಾರೆ. ದೇಶದಲ್ಲಿ  ಕರ್ನಾಟಕ ಹಾಗೂ ಕೇರಳದಲ್ಲಿ  ಅಡಿಕೆಯನ್ನು ಹೆಚ್ಚಾಗಿ ಬೆಳೆಯುತ್ತಿದ್ದಾರೆ. ಕರ್ನಾಟಕದ ಶೇ 60 ಭಾಗದಲ್ಲಿ ಅಡಿಕೆ ಬೆಳೆಯು ವಿಸ್ತಾರಗೊಂಡಿದೆ. ಅಡಿಕೆಯಿಂದಾಗಿ ಸರಕಾರಕ್ಕೂ ತೆರಿಗೆ ಹಾಗೂ ಇತರ ಮೂಲಗಳಿಂದ ಆದಾಯವೂ ಸಂದಾಯವಾಗುತ್ತಿದೆ.

ಇದೀಗ ‘ಅಡಿಕೆ ಹಾನಿಕಾರಕ’ ಎನ್ನುವ ವರದಿಗಳಿಂದ ಅಡಿಕೆ ಬೆಳೆಗಾರರು ಗೊಂದಲಕ್ಕೀಡಾಗಿದ್ದಾರೆ. ಕೃಷಿ ಬದುಕಿನ ಭವಿಷ್ಯದ ಬಗ್ಗೆ ಆತಂಕಿತರಾಗಿದ್ದಾರೆ.  ಹೀಗಾಗಿ ಸರಕಾರವು ಮಧ್ಯಪ್ರವೇಶ ಮಾಡಿ ಅಡಿಕೆಯ ಬಗ್ಗೆ ಸರಿಯಾದ ವೈಜ್ಞಾನಿಕ ಸಂಶೋಧನೆ ನಡೆಸಿ ರೈತರಿಗೆ ಧೈರ್ಯ ತುಂಬಬೇಕು ಎಂದು ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸುತ್ತದೆ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಅಧ್ಯಕ್ಷ ಅಶೋಕ್‌ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ ತಿಳಿಸಿದ್ದಾರೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸರ್ಪಸಂಸ್ಕಾರವು ಈ ಶಾಪದಿಂದ ಮುಕ್ತಿಯನ್ನು ಒದಗಿಸುವ ಮಾರ್ಗ

ವಿವಾಹದ ವಿಳಂಬ, ಸಂತಾನದ ಕೊರತೆ, ಮತ್ತು ಆರ್ಥಿಕ ಅಡೆತಡೆಗಳಿಗೆ ಕಾರಣವಾಗಬಹುದು. ಸರ್ಪಸಂಸ್ಕಾರವು ಈ…

2 hours ago

ಹವಾಮಾನ ವರದಿ | 31-07-2025 | ಇನ್ನೊಂದು ವಾಯುಭಾರ ಕುಸಿತದ ಲಕ್ಷಣ |

ಆಗಸ್ಟ್ 2ನೇ ವಾರದಲ್ಲಿ ತಮಿಳುನಾಡು ಕರಾವಳಿಯ ಸಮೀಪ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ…

21 hours ago

ಆಧುನಿಕ ಯುಗದಲ್ಲಿ ತಂತ್ರಜ್ಞ ದಲ್ಲಾಳಿಗಳು

ಅಮಾಯಕ ನಾಗರಿಕರನ್ನು ಬಲಿಗೆ ಹಾಕುವ ಕಾನೂನು ಡಿಜಿಟಲ್ ಸಿಗ್ನೇಜರಿದ್ದು ಮಾತ್ರವಲ್ಲ, ಇನ್ನು ಅನೇಕ…

1 day ago

ಹಾವೇರಿಯಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ ಮಾರಾಟ ಜಾಲ ಸಕ್ರಿಯ | ರಾಜ್ಯದ 639 ರೈತರಿಗೆ ವಂಚನೆ |

ಯೂರಿಯಾ ಗೊಬ್ಬರ ಅಭಾವದ ನಡುವೆಯೇ ರಾಜ್ಯದಲ್ಲಿ ಕಳಪೆ ಗೊಬ್ಬರ ಹಾಗೂ ಕಳಪೆ ಬೀಜಗಳ…

2 days ago

ಕಾಡಾನೆಗಳ ನಿಯಂತ್ರಣಕ್ಕೆ ಕೇಂದ್ರ ಅರಣ್ಯ ಸಚಿವರಿಗೆ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಮನವಿ

ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು ಕಾಡಾನೆಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ…

2 days ago

ಕೊಡಗು ಜಿಲ್ಲೆಯಲ್ಲಿ ಭಾರಿ ಗಾಳಿ ಮಳೆ | 800 ಕ್ಕೂ ಅಧಿಕ ವಿದ್ಯುತ್‌ ಕಂಬಗಳಿಗೆ ಹಾನಿ – ವಿದ್ಯುತ್ ಸಂಪರ್ಕ ಅಸ್ತವ್ಯಸ್ತ

ಕೊಡಗು ಜಿಲ್ಲೆಯಲ್ಲಿ ಕಳೆದ ಐದಾರು ದಿನಗಳಿಂದ ಸುರಿದ ಭಾರಿ ಗಾಳಿ ಮಳೆಯಿಂದಾಗಿ ಸುಮಾರು…

2 days ago