Advertisement
ಸುದ್ದಿಗಳು

ಅಡಿಕೆಯ ಬಗ್ಗೆ ಸರಿಯಾದ ವೈಜ್ಞಾನಿಕ ಸಂಶೋಧನೆ ನಡೆಸಿ ರೈತರಿಗೆ ಧೈರ್ಯ ತುಂಬಲು ಅಡಿಕೆ ಬೆಳೆಗಾರರ ಸಂಘ ಒತ್ತಾಯ

Share

ಈಚೆಗೆ ಜಾರ್ಖಂಡ್‌ ಸಂಸದ ನಿಶಿಕಾಂತ್‌ ಅವರು  ‘ಅಡಿಕೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಹಾಗೂ ಹಾನಿಕಾರಕ’ ಎಂದು ಹೇಳಿರುವುದು  ಖಂಡಿನೀಯ. ಕಳೆದ ಹಲವು ವರ್ಷಗಳಿಂದ ಇಂತಹ ಹೇಳಿಕೆಗಳು ಆಗಾಗ ಕೇಳಿಬರುತ್ತಿದೆ. ಭಾರತೀಯ ಪರಂಪರೆಯಲ್ಲಿ ಅಡಿಕೆಯು ಪರಂಪರಾಗತವಾಗಿ ಬಳಕೆಯಾಗುತ್ತಿದೆ. ಅನ್ಯಾನ್ಯ ವೈಜ್ಞಾನಿಕ ವರದಿಗಳು ‘ಅಡಿಕೆ ಮಾತ್ರವೇ ಹಾನಿಕಾಕರವಲ್ಲ’ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಈ ವರದಿಯ ಹಿನ್ನೆಲೆಯಲ್ಲಿ ಮತ್ತೊಮ್ಮೆ ‘ವೈಜ್ಞಾನಿಕವಾದ ಸಂಶೋಧನೆ’ ನಡೆಯಬೇಕು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸಿದೆ.

ಭಾರತದಲ್ಲಿ ಸುಮಾರು ಐದರಿಂದ ರಿಂದ ಆರು ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ  ಅಡಿಕೆಯನ್ನು ಬೆಳೆಯಲಾಗುತ್ತಿದೆ.  ಏಳರಿಂದ ಎಂಟು ಲಕ್ಷ ಮೆಟ್ರಿಕ್‌ ಟನ್‌ ಅಡಿಕೆ ಉತ್ಪಾದನೆಯಾಗುತ್ತಿದೆ.  ದೇಶದಲ್ಲಿ  ಸುಮಾರು ಐದು ಲಕ್ಷ ಕೃಷಿಕರು ಅಡಿಕೆಯನ್ನೇ ನಂಬಿ ಬದುಕುತ್ತಿದ್ದಾರೆ. ಇಷ್ಟು ಮಾತ್ರವಲ್ಲ, ಅಡಿಕೆ ಮಾರುಕಟ್ಟೆಯ ಮೂಲಕವೂ ಲಕ್ಷಾಂತರ ಮಂದಿ ಬದುಕು ಸಾಗಿಸುತ್ತಿದ್ದಾರೆ. ದೇಶದಲ್ಲಿ  ಕರ್ನಾಟಕ ಹಾಗೂ ಕೇರಳದಲ್ಲಿ  ಅಡಿಕೆಯನ್ನು ಹೆಚ್ಚಾಗಿ ಬೆಳೆಯುತ್ತಿದ್ದಾರೆ. ಕರ್ನಾಟಕದ ಶೇ 60 ಭಾಗದಲ್ಲಿ ಅಡಿಕೆ ಬೆಳೆಯು ವಿಸ್ತಾರಗೊಂಡಿದೆ. ಅಡಿಕೆಯಿಂದಾಗಿ ಸರಕಾರಕ್ಕೂ ತೆರಿಗೆ ಹಾಗೂ ಇತರ ಮೂಲಗಳಿಂದ ಆದಾಯವೂ ಸಂದಾಯವಾಗುತ್ತಿದೆ.

ಇದೀಗ ‘ಅಡಿಕೆ ಹಾನಿಕಾರಕ’ ಎನ್ನುವ ವರದಿಗಳಿಂದ ಅಡಿಕೆ ಬೆಳೆಗಾರರು ಗೊಂದಲಕ್ಕೀಡಾಗಿದ್ದಾರೆ. ಕೃಷಿ ಬದುಕಿನ ಭವಿಷ್ಯದ ಬಗ್ಗೆ ಆತಂಕಿತರಾಗಿದ್ದಾರೆ.  ಹೀಗಾಗಿ ಸರಕಾರವು ಮಧ್ಯಪ್ರವೇಶ ಮಾಡಿ ಅಡಿಕೆಯ ಬಗ್ಗೆ ಸರಿಯಾದ ವೈಜ್ಞಾನಿಕ ಸಂಶೋಧನೆ ನಡೆಸಿ ರೈತರಿಗೆ ಧೈರ್ಯ ತುಂಬಬೇಕು ಎಂದು ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸುತ್ತದೆ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಅಧ್ಯಕ್ಷ ಅಶೋಕ್‌ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

2050 ರ ವೇಳೆಗೆ ಭೂಕುಸಿತದ ಅಪಾಯ ಮತ್ತಷ್ಟು ಹೆಚ್ಚಳ : ಮಳೆ ತೀವ್ರತೆ, ನಗರೀಕರಣವೇ ಪ್ರಮುಖ ಕಾರಣ – ಅಧ್ಯಯನ

2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…

12 minutes ago

ಅಕಾಲದ ಹಸಿವು, ಅಸಮಯದ ನಿದ್ದೆ ದೇಹದ ಯಂತ್ರ ಕೆಟ್ಟಿರುವ ಸಂಕೇತ : ರಾಘವೇಶ್ವರ ಶ್ರೀ

ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…

2 hours ago

ಮತ್ತೆ ಚುರುಕುಗೊಂಡ ಮಳೆ | ಸುಳ್ಯ ಮಲೆನಾಡು ಭಾಗದಲ್ಲಿ ಬೆಳಗ್ಗಿನಿಂದ ಧಾರಾಕಾರ ಮಳೆ

ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…

2 hours ago

ದೇಶದ ಅಡಿಕೆ ಉತ್ಪಾದನೆಯಲ್ಲಿ ಕರ್ನಾಟಕದ ಮೊದಲು – 75.47% ಉತ್ಪಾದನೆ, 71.56% ವಿಸ್ತೀರ್ಣದಲ್ಲಿ ಅಡಿಕೆ ಬೆಳೆ

ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…

11 hours ago

ಕಳಪೆ ವಿದೇಶಿ ಅಡಿಕೆ ಆಮದು ನಿಯಂತ್ರಿಸಿ – ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ

ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…

13 hours ago

ಹವಾಮಾನ ವರದಿ | 04-08-2026 | ರಾಜ್ಯದಲ್ಲಿ ಆಗಸ್ಟ್‌ 12 ರವರೆಗೆ ಮಳೆ ಸಾಧ್ಯತೆ – ಮುಂಗಾರು ದುರ್ಬಲವಾಗುವ ಲಕ್ಷಣ

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್‌ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…

21 hours ago