Advertisement
ಸುದ್ದಿಗಳು

ಅಡಿಕೆಯ ಬಗ್ಗೆ ಸರಿಯಾದ ವೈಜ್ಞಾನಿಕ ಸಂಶೋಧನೆ ನಡೆಸಿ ರೈತರಿಗೆ ಧೈರ್ಯ ತುಂಬಲು ಅಡಿಕೆ ಬೆಳೆಗಾರರ ಸಂಘ ಒತ್ತಾಯ

Share

ಈಚೆಗೆ ಜಾರ್ಖಂಡ್‌ ಸಂಸದ ನಿಶಿಕಾಂತ್‌ ಅವರು  ‘ಅಡಿಕೆ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ ಹಾಗೂ ಹಾನಿಕಾರಕ’ ಎಂದು ಹೇಳಿರುವುದು  ಖಂಡಿನೀಯ. ಕಳೆದ ಹಲವು ವರ್ಷಗಳಿಂದ ಇಂತಹ ಹೇಳಿಕೆಗಳು ಆಗಾಗ ಕೇಳಿಬರುತ್ತಿದೆ. ಭಾರತೀಯ ಪರಂಪರೆಯಲ್ಲಿ ಅಡಿಕೆಯು ಪರಂಪರಾಗತವಾಗಿ ಬಳಕೆಯಾಗುತ್ತಿದೆ. ಅನ್ಯಾನ್ಯ ವೈಜ್ಞಾನಿಕ ವರದಿಗಳು ‘ಅಡಿಕೆ ಮಾತ್ರವೇ ಹಾನಿಕಾಕರವಲ್ಲ’ ಎಂಬುದನ್ನು ಸ್ಪಷ್ಟಪಡಿಸಿದ್ದಾರೆ. ಈ ವರದಿಯ ಹಿನ್ನೆಲೆಯಲ್ಲಿ ಮತ್ತೊಮ್ಮೆ ‘ವೈಜ್ಞಾನಿಕವಾದ ಸಂಶೋಧನೆ’ ನಡೆಯಬೇಕು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸಿದೆ.

ಭಾರತದಲ್ಲಿ ಸುಮಾರು ಐದರಿಂದ ರಿಂದ ಆರು ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ  ಅಡಿಕೆಯನ್ನು ಬೆಳೆಯಲಾಗುತ್ತಿದೆ.  ಏಳರಿಂದ ಎಂಟು ಲಕ್ಷ ಮೆಟ್ರಿಕ್‌ ಟನ್‌ ಅಡಿಕೆ ಉತ್ಪಾದನೆಯಾಗುತ್ತಿದೆ.  ದೇಶದಲ್ಲಿ  ಸುಮಾರು ಐದು ಲಕ್ಷ ಕೃಷಿಕರು ಅಡಿಕೆಯನ್ನೇ ನಂಬಿ ಬದುಕುತ್ತಿದ್ದಾರೆ. ಇಷ್ಟು ಮಾತ್ರವಲ್ಲ, ಅಡಿಕೆ ಮಾರುಕಟ್ಟೆಯ ಮೂಲಕವೂ ಲಕ್ಷಾಂತರ ಮಂದಿ ಬದುಕು ಸಾಗಿಸುತ್ತಿದ್ದಾರೆ. ದೇಶದಲ್ಲಿ  ಕರ್ನಾಟಕ ಹಾಗೂ ಕೇರಳದಲ್ಲಿ  ಅಡಿಕೆಯನ್ನು ಹೆಚ್ಚಾಗಿ ಬೆಳೆಯುತ್ತಿದ್ದಾರೆ. ಕರ್ನಾಟಕದ ಶೇ 60 ಭಾಗದಲ್ಲಿ ಅಡಿಕೆ ಬೆಳೆಯು ವಿಸ್ತಾರಗೊಂಡಿದೆ. ಅಡಿಕೆಯಿಂದಾಗಿ ಸರಕಾರಕ್ಕೂ ತೆರಿಗೆ ಹಾಗೂ ಇತರ ಮೂಲಗಳಿಂದ ಆದಾಯವೂ ಸಂದಾಯವಾಗುತ್ತಿದೆ.

ಇದೀಗ ‘ಅಡಿಕೆ ಹಾನಿಕಾರಕ’ ಎನ್ನುವ ವರದಿಗಳಿಂದ ಅಡಿಕೆ ಬೆಳೆಗಾರರು ಗೊಂದಲಕ್ಕೀಡಾಗಿದ್ದಾರೆ. ಕೃಷಿ ಬದುಕಿನ ಭವಿಷ್ಯದ ಬಗ್ಗೆ ಆತಂಕಿತರಾಗಿದ್ದಾರೆ.  ಹೀಗಾಗಿ ಸರಕಾರವು ಮಧ್ಯಪ್ರವೇಶ ಮಾಡಿ ಅಡಿಕೆಯ ಬಗ್ಗೆ ಸರಿಯಾದ ವೈಜ್ಞಾನಿಕ ಸಂಶೋಧನೆ ನಡೆಸಿ ರೈತರಿಗೆ ಧೈರ್ಯ ತುಂಬಬೇಕು ಎಂದು ಅಡಿಕೆ ಬೆಳೆಗಾರರ ಸಂಘವು ಒತ್ತಾಯಿಸುತ್ತದೆ ಎಂದು ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘ ಅಧ್ಯಕ್ಷ ಅಶೋಕ್‌ ಕಿನಿಲ ಹಾಗೂ ಕಾರ್ಯದರ್ಶಿ ಮಹೇಶ್‌ ಪುಚ್ಚಪ್ಪಾಡಿ ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಬೇಸಿಗೆಯಲ್ಲಿ ನಿಮ್ಮ ಕಿಡ್ನಿಯನ್ನು ಕಾಪಾಡಿ..! ಮೂತ್ರಪಿಂಡದ ಕಲ್ಲು ಸಮಸ್ಯೆ ಏಕೆ ಹೆಚ್ಚುತ್ತಿದೆ?

ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…

4 days ago

ಮಳೆಗಾಲ ಆರಂಭ- ಜೂನ್‌ 1ರಿಂದ ರಸ್ತೆ, ಗುಡ್ಡ, ಮಣ್ಣು ಅಗೆತ ಕಾಮಗಾರಿಗೆ ನಿರ್ಬಂಧ – ನಗರಪಾಲಿಕೆ ಎಚ್ಚರಿಕೆ

ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗೆ ರಸ್ತೆ, ಗುಡ್ಡ…

4 days ago

ಅಸ್ಸಾಂನಲ್ಲಿ ಭಾರೀ ಅಕ್ರಮ ಅಡಿಕೆ ವಶ : ಡಿಆರ್‌ಐ ದಾಳಿ, 60 ಸಾವಿರ ಕೆಜಿ ವಿದೇಶಿ ಅಡಿಕೆ ಜಪ್ತಿ

ಈಶಾನ್ಯ ಭಾರತದಲ್ಲಿ ಡಿಆರ್‌ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…

4 days ago

“ಒಂದು ದಿನ ಅಡಿಕೆ ಮಾರುಕಟ್ಟೆಗೆ ‘ಏಲಿಯನ್ಸ್’ ಬಂದರೆ?” ರೈತನ ಭವಿಷ್ಯದ ಬಗ್ಗೆ ಎಚ್ಚರಿಸುವ ಕಲ್ಪಿತ ಕಥೆ

ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…

5 days ago