Advertisement
MIRROR FOCUS

ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | ಅಸ್ಸಾಂನಲ್ಲಿ ಈ ವರ್ಷ 163 ಪ್ರಕರಣಗಳು ದಾಖಲು | ಅಡಿಕೆ ಕಳ್ಳಸಾಗಾಣಿಕೆಗೆ ಸತತ ತಡೆ |

Share

ಅಸ್ಸಾಂ ಪೊಲೀಸರು ಈ ವರ್ಷದಲ್ಲಿ ಅಸ್ಸಾಂ ಭಾಗದಲ್ಲಿ  ನಡೆದ ಅಪರಾಧ ಪ್ರಕರಣಗಳ ವರದಿ ನೀಡಿದ್ದರು. ಇದರಲ್ಲಿ ಅಡಿಕೆ ಕಳ್ಳ ಸಾಗಾಣಿಕೆಗೆ ಸೇರಿದ 163 ಪ್ರಕರಣಗಳು ದಾಖಲಾದ ಬಗ್ಗೆ ವರದಿ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ 182 ಮಂದಿಯನ್ನು ಬಂಧಿಸಿ 146 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.ಎಲ್ಲಾ ಕಳ್ಳ ಸಾಗಾಣಿಕೆಗಳು ಮ್ಯಾನ್ಮಾರ್‌ ಮೂಲಕ ನಡೆದಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ. 

ಅಸ್ಸಾಂ ರಾಜ್ಯದಲ್ಲಿ ಈ ವರ್ಷ ಅಪರಾಧ ಪ್ರಕರಣಗಳು ಕಡಿಮೆಯಾಗಿದೆ. 11 ತಿಂಗಳಲ್ಲಿ  ಅಪರಾಧ ಪ್ರಕರಣಗಳಲ್ಲಿ ತೀವ್ರ ಇಳಿಕೆಯಾಗಿದೆ ಎಂದು ಅಸ್ಸಾಂ ಪೊಲೀಸರು ಹೇಳಿದ್ದಾರೆ. ಪ್ರತಿ ತಿಂಗಳು ದಾಖಲಾಗುವ ಸರಾಸರಿ ಪ್ರಕರಣಗಳ ಸಂಖ್ಯೆ ಕಳೆದ ವರ್ಷ 11,103 ರಿಂದ ಈ ವರ್ಷ 6,247 ಕ್ಕೆ ಇಳಿದಿದೆ ಎಂದು ಅಸ್ಸಾಂ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿದೆ.

ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಸಮ್ಮಿಶ್ರ ಸರ್ಕಾರವು ಆಡಳಿತ ನಡೆಸುತ್ತಿದ್ದು ಎಲ್ಲಾ ಅಪರಾಧಗಳಿಗೆ ಕಡಿವಾಣ, ಕಳ್ಳಸಾಗಾಣಿಕೆಗಳ ತಡೆಗೆ ಸತತ ಪ್ರಯತ್ನ ನಡೆಸುತ್ತಿದೆ. ಈ ಕಾರಣದಿಂದ ಅಡಿಕೆ ಕಳ್ಳ ಸಾಗಾಣಿಕೆ ಕೂಡಾ ಕಳೆದ ಹಲವು ಸಮಯಗಳಿಂದ ಬ್ರೇಕ್‌ ಬಿದ್ದಿದೆ. ಹಾಗಿದ್ದರೂ ಇಲಾಖೆಗಳ, ಪೊಲೀಸರ ಕಣ್ಣು ತಪ್ಪಿಸಿ ಕಳ್ಳ ಸಾಗಾಣಿಕೆ ನಡೆಯುತ್ತಿತ್ತು, ಇದು ಕೂಡಾ ಈಚೆಗೆ ತಡೆಯಾಗುತ್ತಿದೆ.

ಕಳೆದ ವರ್ಷ ಮೇ ತಿಂಗಳಿನಿಂದ ಅಸ್ಸಾಂ ಪೊಲೀಸರು ಎನ್‌ಡಿಪಿಎಸ್ ಕಾಯ್ದೆಯಡಿ 2,834 ಪ್ರಕರಣಗಳನ್ನು ದಾಖಲಿಸಿದ್ದಾರೆ, 4,838 ಕ್ಕೂ ಹೆಚ್ಚು ಮಾದಕವಸ್ತು ಕಳ್ಳಸಾಗಣೆದಾರರನ್ನು ಬಂಧಿಸಿದ್ದಾರೆ ಮತ್ತು 548.53 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. 141 ಮಾನವ ಕಳ್ಳಸಾಗಣೆ ಪ್ರಕರಣಗಳನ್ನು ದಾಖಲಿಸಿದ್ದಾರೆ, 104 ಕ್ಕೂ ಹೆಚ್ಚು ಮಾನವ ಕಳ್ಳಸಾಗಣೆದಾರರನ್ನು ಬಂಧಿಸಿದ್ದಾರೆ ಮತ್ತು ಸುಮಾರು 250 ಜನರನ್ನು ರಕ್ಷಿಸಿದ್ದಾರೆ. ಇದೇ ಅವಧಿಯಲ್ಲಿ ಮ್ಯಾನ್ಮಾರ್‌ನಿಂದ ಅಡಿಕೆ ಸಾಗಾಟದ 163 ಪ್ರಕರಣಗಳು ದಾಖಲಾಗಿದ್ದು, 182 ಮಂದಿಯನ್ನು ಬಂಧಿಸಿ 146 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು! ಮಂಗಳೂರಿನಲ್ಲಿ ಕಠಿಣ ಎಚ್ಚರಿಕೆ

ಶಾಲಾ–ಕಾಲೇಜುಗಳ ಬಳಿ ಧೂಮಪಾನ ವಸ್ತು ಮಾರಾಟ ಮಾಡಿದರೆ ಲೈಸನ್ಸ್ ರದ್ದು ಮಾಡಲು ಪೊಲೀಸ್…

2 hours ago

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆ | ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಆರೋಗ್ಯಾಧಿಕಾರಿ ಎಚ್ಚರಿಕೆ

ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…

1 day ago

ಕೃಷಿಕರ ಜೀವನಾಡಿ ‘ಕ್ಯಾಂಪ್ಕೊ’ ವಿಟ್ಲ ಶಾಖೆಗೆ ನೂತನ ಕಟ್ಟಡ | ಮಾರ್ಚ್ 27ರಂದು ಶಂಕುಸ್ಥಾಪನೆ

ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…

1 day ago

ಕೃಷಿಗೆ ಹವಾಮಾನ ಅಪಾಯ ಹೆಚ್ಚಳ | ರೈತರಿಗೆ ಕಠಿಣ ಕಾಲ ಬರುವ ಸೂಚನೆ ? ದೇಶದ 310 ಜಿಲ್ಲೆಗಳು ಅಪಾಯ ವಲಯದಲ್ಲಿ..!

ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…

2 days ago

ಹವಾಮಾನ ವರದಿ | 25.03.2026 | ಕರಾವಳಿಯಲ್ಲಿ ಇಂದು ಸಂಜೆ ಮಳೆ ಸಾಧ್ಯತೆ | ಏಪ್ರಿಲ್‌ 5ರವರೆಗೆ ಬೇಸಿಗೆ ಮಳೆ ಸಕ್ರಿಯ!

26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…

3 days ago