MIRROR FOCUS

ಅಡಿಕೆ ಕಳ್ಳಸಾಗಾಣಿಕೆ ಪ್ರಕರಣ | ಅಸ್ಸಾಂನಲ್ಲಿ ಈ ವರ್ಷ 163 ಪ್ರಕರಣಗಳು ದಾಖಲು | ಅಡಿಕೆ ಕಳ್ಳಸಾಗಾಣಿಕೆಗೆ ಸತತ ತಡೆ |

Share

ಅಸ್ಸಾಂ ಪೊಲೀಸರು ಈ ವರ್ಷದಲ್ಲಿ ಅಸ್ಸಾಂ ಭಾಗದಲ್ಲಿ  ನಡೆದ ಅಪರಾಧ ಪ್ರಕರಣಗಳ ವರದಿ ನೀಡಿದ್ದರು. ಇದರಲ್ಲಿ ಅಡಿಕೆ ಕಳ್ಳ ಸಾಗಾಣಿಕೆಗೆ ಸೇರಿದ 163 ಪ್ರಕರಣಗಳು ದಾಖಲಾದ ಬಗ್ಗೆ ವರದಿ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ 182 ಮಂದಿಯನ್ನು ಬಂಧಿಸಿ 146 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.ಎಲ್ಲಾ ಕಳ್ಳ ಸಾಗಾಣಿಕೆಗಳು ಮ್ಯಾನ್ಮಾರ್‌ ಮೂಲಕ ನಡೆದಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ. 

ಅಸ್ಸಾಂ ರಾಜ್ಯದಲ್ಲಿ ಈ ವರ್ಷ ಅಪರಾಧ ಪ್ರಕರಣಗಳು ಕಡಿಮೆಯಾಗಿದೆ. 11 ತಿಂಗಳಲ್ಲಿ  ಅಪರಾಧ ಪ್ರಕರಣಗಳಲ್ಲಿ ತೀವ್ರ ಇಳಿಕೆಯಾಗಿದೆ ಎಂದು ಅಸ್ಸಾಂ ಪೊಲೀಸರು ಹೇಳಿದ್ದಾರೆ. ಪ್ರತಿ ತಿಂಗಳು ದಾಖಲಾಗುವ ಸರಾಸರಿ ಪ್ರಕರಣಗಳ ಸಂಖ್ಯೆ ಕಳೆದ ವರ್ಷ 11,103 ರಿಂದ ಈ ವರ್ಷ 6,247 ಕ್ಕೆ ಇಳಿದಿದೆ ಎಂದು ಅಸ್ಸಾಂ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿದೆ.

ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಸಮ್ಮಿಶ್ರ ಸರ್ಕಾರವು ಆಡಳಿತ ನಡೆಸುತ್ತಿದ್ದು ಎಲ್ಲಾ ಅಪರಾಧಗಳಿಗೆ ಕಡಿವಾಣ, ಕಳ್ಳಸಾಗಾಣಿಕೆಗಳ ತಡೆಗೆ ಸತತ ಪ್ರಯತ್ನ ನಡೆಸುತ್ತಿದೆ. ಈ ಕಾರಣದಿಂದ ಅಡಿಕೆ ಕಳ್ಳ ಸಾಗಾಣಿಕೆ ಕೂಡಾ ಕಳೆದ ಹಲವು ಸಮಯಗಳಿಂದ ಬ್ರೇಕ್‌ ಬಿದ್ದಿದೆ. ಹಾಗಿದ್ದರೂ ಇಲಾಖೆಗಳ, ಪೊಲೀಸರ ಕಣ್ಣು ತಪ್ಪಿಸಿ ಕಳ್ಳ ಸಾಗಾಣಿಕೆ ನಡೆಯುತ್ತಿತ್ತು, ಇದು ಕೂಡಾ ಈಚೆಗೆ ತಡೆಯಾಗುತ್ತಿದೆ.

ಕಳೆದ ವರ್ಷ ಮೇ ತಿಂಗಳಿನಿಂದ ಅಸ್ಸಾಂ ಪೊಲೀಸರು ಎನ್‌ಡಿಪಿಎಸ್ ಕಾಯ್ದೆಯಡಿ 2,834 ಪ್ರಕರಣಗಳನ್ನು ದಾಖಲಿಸಿದ್ದಾರೆ, 4,838 ಕ್ಕೂ ಹೆಚ್ಚು ಮಾದಕವಸ್ತು ಕಳ್ಳಸಾಗಣೆದಾರರನ್ನು ಬಂಧಿಸಿದ್ದಾರೆ ಮತ್ತು 548.53 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. 141 ಮಾನವ ಕಳ್ಳಸಾಗಣೆ ಪ್ರಕರಣಗಳನ್ನು ದಾಖಲಿಸಿದ್ದಾರೆ, 104 ಕ್ಕೂ ಹೆಚ್ಚು ಮಾನವ ಕಳ್ಳಸಾಗಣೆದಾರರನ್ನು ಬಂಧಿಸಿದ್ದಾರೆ ಮತ್ತು ಸುಮಾರು 250 ಜನರನ್ನು ರಕ್ಷಿಸಿದ್ದಾರೆ. ಇದೇ ಅವಧಿಯಲ್ಲಿ ಮ್ಯಾನ್ಮಾರ್‌ನಿಂದ ಅಡಿಕೆ ಸಾಗಾಟದ 163 ಪ್ರಕರಣಗಳು ದಾಖಲಾಗಿದ್ದು, 182 ಮಂದಿಯನ್ನು ಬಂಧಿಸಿ 146 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.

 

ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣ |

ರಾಜ್ಯದ ದಕ್ಷಿಣ ಕರಾವಳಿ, ಮಲೆನಾಡು ಭಾಗಗಳಲ್ಲಿ ಬೇಸಿಗೆ ಮಳೆಯು ಮುಂದುವರಿಯುವ ಲಕ್ಷಣಗಳಿವೆ. ಉತ್ತರ…

17 hours ago

ಅಂತರಂಗ | ಸ್ವಾರ್ಥರಹಿತ ಬೇಡಿಕೆಗಳಿಗೆ ರಾಜಕೀಯದಲ್ಲಿ ಮಾನ್ಯತೆಯಿಲ್ಲ…!

ರಾಜಕೀಯ ಎನ್ನುವುದು ಕೃಷಿ ಹಾಗೂ ಅಡಿಕೆ ಬೆಳೆಗಾರರ ವಿಚಾರದಲ್ಲಿ ಕೂಡಾ ಹೇಗೆ ಇರುತ್ತದೆ,…

20 hours ago

ಬದುಕು ಪುರಾಣ | ಎಲ್ಲರೊಳಗೂ ‘ಕುಂಭಕರ್ಣ’ನಿದ್ದಾನೆ!

ಮನುಷ್ಯನಿಗೆ ಆಹಾರ, ನಿದ್ರೆಗಳು ಸಹಜ. ವಯೋವೃದ್ಧರಿಗೆ ಬೋಜನದ ನಂತರದ ನಿದ್ರೆಯಿಂದ ಮೈಮನಗಳಿಗೆ ಸ್ಫೂರ್ತಿ.…

20 hours ago

ದಾವಣಗೆರೆ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ | ಬಾಡಿಗೆ ಆಧಾರದಲ್ಲಿ ಖಾಸಗಿ ಕೊಳವೆಬಾವಿ

ದಾವಣಗೆರೆ ಜಿಲ್ಲೆಯ 6 ತಾಲೂಕುಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಬಹುದಾದ 197…

20 hours ago

ಯಾದಗಿರಿ ಜಿಲ್ಲೆಗೆ ತಾಪಮಾನ ಎಚ್ಚರಿಕೆ | ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ತಾಪಮಾನ ದಾಖಲಾಗುವ ಸಾಧ್ಯತೆ

ಯಾದಗಿರಿ ಜಿಲ್ಲೆಯಲ್ಲಿ ಮುಂದಿನ ಮೂರು ತಿಂಗಳಿನಲ್ಲಿ ಗರಿಷ್ಠ 45 ಡಿಗ್ರಿ ಸೆಲ್ಸಿಯಸ್ ತಾಪಮಾನ…

21 hours ago

ಏಪ್ರಿಲ್ 30 ರವರೆಗೆ ಜೋಗ ಜಲಪಾತಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ

ವಿಶ್ವವಿಖ್ಯಾತ ಜೋಗ ಜಲಪಾತ ಪ್ರದೇಶದ ವ್ಯಾಪ್ತಿಯಲ್ಲಿ ಪ್ರವಾಸಿಗರಿಗೆ ಮೂಲಸೌಲಭ್ಯ ಒದಗಿಸಲು ಸಮಗ್ರ ಅಭಿವೃದ್ಧಿ…

21 hours ago