ಅಸ್ಸಾಂ ಪೊಲೀಸರು ಈ ವರ್ಷದಲ್ಲಿ ಅಸ್ಸಾಂ ಭಾಗದಲ್ಲಿ ನಡೆದ ಅಪರಾಧ ಪ್ರಕರಣಗಳ ವರದಿ ನೀಡಿದ್ದರು. ಇದರಲ್ಲಿ ಅಡಿಕೆ ಕಳ್ಳ ಸಾಗಾಣಿಕೆಗೆ ಸೇರಿದ 163 ಪ್ರಕರಣಗಳು ದಾಖಲಾದ ಬಗ್ಗೆ ವರದಿ ಮಾಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ 182 ಮಂದಿಯನ್ನು ಬಂಧಿಸಿ 146 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.ಎಲ್ಲಾ ಕಳ್ಳ ಸಾಗಾಣಿಕೆಗಳು ಮ್ಯಾನ್ಮಾರ್ ಮೂಲಕ ನಡೆದಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದಾರೆ.
ಅಸ್ಸಾಂ ರಾಜ್ಯದಲ್ಲಿ ಈ ವರ್ಷ ಅಪರಾಧ ಪ್ರಕರಣಗಳು ಕಡಿಮೆಯಾಗಿದೆ. 11 ತಿಂಗಳಲ್ಲಿ ಅಪರಾಧ ಪ್ರಕರಣಗಳಲ್ಲಿ ತೀವ್ರ ಇಳಿಕೆಯಾಗಿದೆ ಎಂದು ಅಸ್ಸಾಂ ಪೊಲೀಸರು ಹೇಳಿದ್ದಾರೆ. ಪ್ರತಿ ತಿಂಗಳು ದಾಖಲಾಗುವ ಸರಾಸರಿ ಪ್ರಕರಣಗಳ ಸಂಖ್ಯೆ ಕಳೆದ ವರ್ಷ 11,103 ರಿಂದ ಈ ವರ್ಷ 6,247 ಕ್ಕೆ ಇಳಿದಿದೆ ಎಂದು ಅಸ್ಸಾಂ ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ ಎಂದು ಸುದ್ದಿಸಂಸ್ಥೆಗಳು ವರದಿ ಮಾಡಿದೆ.
ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಸಮ್ಮಿಶ್ರ ಸರ್ಕಾರವು ಆಡಳಿತ ನಡೆಸುತ್ತಿದ್ದು ಎಲ್ಲಾ ಅಪರಾಧಗಳಿಗೆ ಕಡಿವಾಣ, ಕಳ್ಳಸಾಗಾಣಿಕೆಗಳ ತಡೆಗೆ ಸತತ ಪ್ರಯತ್ನ ನಡೆಸುತ್ತಿದೆ. ಈ ಕಾರಣದಿಂದ ಅಡಿಕೆ ಕಳ್ಳ ಸಾಗಾಣಿಕೆ ಕೂಡಾ ಕಳೆದ ಹಲವು ಸಮಯಗಳಿಂದ ಬ್ರೇಕ್ ಬಿದ್ದಿದೆ. ಹಾಗಿದ್ದರೂ ಇಲಾಖೆಗಳ, ಪೊಲೀಸರ ಕಣ್ಣು ತಪ್ಪಿಸಿ ಕಳ್ಳ ಸಾಗಾಣಿಕೆ ನಡೆಯುತ್ತಿತ್ತು, ಇದು ಕೂಡಾ ಈಚೆಗೆ ತಡೆಯಾಗುತ್ತಿದೆ.
ಕಳೆದ ವರ್ಷ ಮೇ ತಿಂಗಳಿನಿಂದ ಅಸ್ಸಾಂ ಪೊಲೀಸರು ಎನ್ಡಿಪಿಎಸ್ ಕಾಯ್ದೆಯಡಿ 2,834 ಪ್ರಕರಣಗಳನ್ನು ದಾಖಲಿಸಿದ್ದಾರೆ, 4,838 ಕ್ಕೂ ಹೆಚ್ಚು ಮಾದಕವಸ್ತು ಕಳ್ಳಸಾಗಣೆದಾರರನ್ನು ಬಂಧಿಸಿದ್ದಾರೆ ಮತ್ತು 548.53 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. 141 ಮಾನವ ಕಳ್ಳಸಾಗಣೆ ಪ್ರಕರಣಗಳನ್ನು ದಾಖಲಿಸಿದ್ದಾರೆ, 104 ಕ್ಕೂ ಹೆಚ್ಚು ಮಾನವ ಕಳ್ಳಸಾಗಣೆದಾರರನ್ನು ಬಂಧಿಸಿದ್ದಾರೆ ಮತ್ತು ಸುಮಾರು 250 ಜನರನ್ನು ರಕ್ಷಿಸಿದ್ದಾರೆ. ಇದೇ ಅವಧಿಯಲ್ಲಿ ಮ್ಯಾನ್ಮಾರ್ನಿಂದ ಅಡಿಕೆ ಸಾಗಾಟದ 163 ಪ್ರಕರಣಗಳು ದಾಖಲಾಗಿದ್ದು, 182 ಮಂದಿಯನ್ನು ಬಂಧಿಸಿ 146 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…