ಮ್ಯಾನ್ಮಾರ್ನಿಂದ ಇಂಡೋ-ಮ್ಯಾನ್ಮಾರ್ ಗಡಿಯ ಮೂಲಕ ಮಿಜೋರಾಂ ಗೆ ಕಳ್ಳಸಾಗಣೆ ಮಾಡಲಾದ ಅಡಿಕೆಯನ್ನು ಕಂಟೈನರ್ ಟ್ರಕ್ ಮೂಲಕ ಪಶ್ಚಿಮ ಬಂಗಾಳದ ವಿವಿದೆಡೆಗೆ ಅಡಿಕೆಯನ್ನು ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದು ಬಂದಿದೆ.ಮಿಜೋರಾಂ ಗೆ ಬಂದ ಅಡಿಕೆಯನ್ನು ಕಂಟೈನರ್ ಟ್ರಕ್ ಸಾಗಾಟ ಮಾಡುವ ವೇಳೆ ಅಸ್ಸಾಂನ ಗುವಾಹಟಿಯ ಖಾನಾಪುರದಲ್ಲಿ ಕಸ್ಟಮ್ಟ್ ಇಲಾಖೆಯ ಅಧಿಕಾರಿಗಳು ವಶಕ್ಕೆ ಪಡೆದು ತನಿಖೆ ನಡೆಸಿದಾಗ ಸುಮಾರು 2.55 ಕೋಟಿ ರೂ.ಮೌಲ್ಯದ ಅಡಿಕೆ ಪತ್ತೆಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿ 3 ಜನರನ್ನು ವಶಕ್ಕೆ ಪಡೆದಿದ್ದಾರೆ. ತನಿಖೆ ನಡೆಸುತ್ತಿದ್ದಾರೆ.
ಅಡಿಕೆಗೆ ಕಳೆದ ಕೆಲವು ಸಮಯಗಳಿಂದ ಮತ್ತೆ ಬೇಡಿಕೆ ವ್ಯಕ್ತವಾಗಿತ್ತು. ಆದರೆ ಪೂರೈಕೆ ಸರಿಯಾಗದ ಕಾರಣದಿಂದ ವಿದೇಶಿ ಅಡಿಕೆಯನ್ನು ಕಳ್ಳದಾರಿಯ ಮೂಲಕ ಸಾಗಾಟ ಮಾಡಲು ಸತತ ಪ್ರಯತ್ನ ಮಾಡಲಾಗುತ್ತಿದೆ. ಈಗಲೂ ಉತ್ತಮ ಧಾರಣೆ ಅಡಿಕೆ ಲಭ್ಯವಾಗುತ್ತಿದೆ. ಇದೀಗ ಧಾರಣೆಯೂ ಏರಿಕೆಯಾಗಿದೆ. ಹೊಸ ಅಡಿಕೆ ಧಾರಣೆ 270 ರೂಪಾಯಿಗಿಂತ ಅಧಿಕವಾಗಿದ್ದು ನವರಾತ್ರಿವರೆಗೆ ಈ ಏರಿಕೆ ಇರಲಿದೆ. ನಂತರ 15 ದಿನಗಳ ವರೆಗೆ ಸ್ಥಿರತೆ ಇದ್ದು ಬಳಿಕ ಧಾರಣೆ ಏರಿಕೆಯಾಗಬಹುದು ಎಂಬುದು ಈಗಿನ ಮಾರುಕಟ್ಟೆ ನಿರೀಕ್ಷೆ.
ಪಿಎಂ ಕಿಸಾನ್ ಯೋಜನೆಯ 22ನೇ ಕಂತಿನ ಹಣವನ್ನು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ.…
ನವದೆಹಲಿಯಲ್ಲಿ ಮಹಿಳಾ ಕೃಷಿಕರ ಪಾತ್ರ ಬಲಪಡಿಸಲು ಜಾಗತಿಕ ಸಮ್ಮೇಳನ GCWAS-2026 ಆರಂಭವಾಗಿದೆ. ನೀತಿ,…
ದೇಶದಲ್ಲಿ ಉತ್ಪಾದನೆಯಾಗುವ ಗೇರುಹಣ್ಣಿನ ಕೇವಲ 1% ಮಾತ್ರ ಮೌಲ್ಯವರ್ಧನೆಗೆ ಬಳಸಲಾಗುತ್ತಿರುವ ಹಿನ್ನೆಲೆ ಪುತ್ತೂರಿನಲ್ಲಿ…
ದಕ್ಷಿಣ ಕನ್ನಡದಲ್ಲಿ ಶೇ.48ಕ್ಕೂ ಹೆಚ್ಚು ಕರಾವಳಿ ಕಡಲ್ಕೊರೆತಕ್ಕೆ ಒಳಗಾಗುತ್ತಿರುವ ಹಿನ್ನೆಲೆಯಲ್ಲಿ ಸಂಸದ ಲೋಕಸಭೆಯಲ್ಲಿ…
ಅಡಿಕೆ ತೋಟಗಳಲ್ಲಿ ಉಪಬೆಳೆಯಾಗಿ ಬೆಳೆಯುತ್ತಿರುವ ಕೊಕ್ಕೋಗೆ ಬೆಲೆ ಕುಸಿತ ದೊಡ್ಡ ಸವಾಲಾಗಿದೆ. ಮೌಲ್ಯವರ್ಧನೆ…
ರಾಜ್ಯದಲ್ಲಿ ಹೆಚ್ಚಿದ ಬಿಸಿಲಿನ ತಾಪ ಮುಂದುವರಿದರೂ ಮಾರ್ಚ್ 14 ಅಥವಾ 15ರಿಂದ ಹಲವೆಡೆ…