ಮತ್ತೆ ಅಕ್ರಮವಾಗಿ ಭಾರತಕ್ಕೆ ಅಡಿಕೆ ಆಮದು ಪತ್ತೆ | ವಶಕ್ಕೆ ಪಡೆದ ಗಡಿ ಭದ್ರತಾಪಡೆಯ ಅಧಿಕಾರಿಗಳು | 1.26 ಕೋಟಿ ರೂ ಮೌಲ್ಯದ ಅಡಿಕೆ ವಶ |

March 11, 2021
5:01 PM

ಅಸ್ಸಾಂ(ಸುದ್ದಿಮೂಲ) : ಅಸ್ಸಾಂ ಗಡಿಭಾಗದಲ್ಲಿ  ಭಾರತದ ಒಳಕ್ಕೆ ಅಕ್ರಮವಾಗಿ ಸಾಗಾಟವಾಗುತ್ತಿದ್ದ 1.25 ಕೋಟಿ ರೂಪಾಯಿ ಮೌಲ್ಯದ ಸುಮಾರು 563 ಚೀಲ ಅಡಿಕೆಯನ್ನು  ಅಸ್ಸಾಂ ಗಡಿಭದ್ರತಾ ಪಡೆ ವಶಕ್ಕೆ ಪಡೆದು ಸಂಬಂಧಿತ ಇಲಾಖೆಗೆ ಹಸ್ತಾಂತರಿಸಿದೆ.

ಕಳಪೆ ಗುಣಮಟ್ಟದ ಅಡಿಕೆ ಕಳೆದ ಕೆಲವು ಸಮಯಗಳಿಂದ ಅಸ್ಸಾಂ ಗಡಿಯ ಮೂಲಕ ಭಾರತದೊಳಕ್ಕೆ ಬಂದು ಪಶ್ಚಿಮ ಬಂಗಾಳದ ದಾರಿಯಲ್ಲಿ ಭಾರತದ ವಿವಿದೆಡೆಗೆ ಸರಬರಾಜು ಆಗುತ್ತಿತ್ತು. ಈ ಅಕ್ರಮ ಸಾಗಾಟವನ್ನು ಅಸ್ಸಾಂ ಗಡಿ ಭದ್ರತಾ ಪಡೆ ಮಾಹಿತಿ ಲಭ್ಯವಾದ ತಕ್ಷಣವೇ ಕಾರ್ಯಾಚರಣೆ ನಡೆಸಿ ವಶಕ್ಕೆ ತೆಗೆದುಕೊಳ್ಳುವ ಕೆಲಸ ಮಾಡುತ್ತಲೇ ಇದೆ. ಬುಧವಾರ ಕೂಡಾ ಅಕ್ರಮ ಅಡಿಕೆ ಸಾಗಾಟದ ಮಾಹಿತಿ ಪಡೆದು ಅಸ್ಸಾಂ ಗಡಿ ಭದ್ರತಾ ಪಡೆ ಹಾಗೂ ಸ್ಟಮ್ ಪ್ರಿವೆಂಟಿವ್ ಫೋರ್ಸ್ ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಚಂಪೈ ಜಿಲ್ಲೆಯಲ್ಲಿ ಅಡಿಕೆ ವಶಕ್ಕೆ ಪಡೆದಿದ್ದಾರೆ.

ಮುಂದೆ ವಿವಿಧ ರಾಜ್ಯಗಳ ಚುನಾವಣೆ ಇರುವುದರಿಂದ ದೇಶದ ಗಡಿ ಭದ್ರತೆ ಇನ್ನಷ್ಟು ಹೆಚ್ಚಾಗಲಿದೆ. ಹೀಗಾಗಿ ಅಡಿಕೆ ಸೇರಿದಂತೆ ಇತರ ವಸ್ತುಗಳ ಅಕ್ರಮ ಪ್ರವೇಶಕ್ಕೆ ತಡೆ ಬೀಳಲಿದೆ. ಹೀಗಾಗಿ ಅಡಿಕೆ ಧಾರಣೆಯು ಕರ್ನಾಟಕದಲ್ಲಿ ಏರಿಕೆಯ ಹಾದಿ ಹಿಡಿಯುವ ಸಾಧ್ಯತೆ ನಿಚ್ಚಳವಾಗಿದೆ.

 

 

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ವೈಜ್ಞಾನಿಕ ಕೃಷಿಗೆ ಕೇಂದ್ರದ ಒತ್ತು | ರಾಜ್ಯವಾರು ಕೃಷಿ-ಹವಾಮಾನ ಮಾರ್ಗಸೂಚಿ ಸಿದ್ಧಕ್ಕೆ ವೇಗ
May 17, 2026
8:03 PM
by: ಮಿರರ್‌ ಡೆಸ್ಕ್
ಭಾರತದ ಕೃಷಿಯಲ್ಲಿ ಮೈಕ್ರೋಪ್ಲಾಸ್ಟಿಕ್ ಹಾವಳಿ..! ಮಣ್ಣಿನೊಳಗೆ ‘ಪ್ಲಾಸ್ಟಿಕ್ ವಿಷ’! ರೈತರ ಭವಿಷ್ಯಕ್ಕೆ ಮೈಕ್ರೋಪ್ಲಾಸ್ಟಿಕ್ ದೊಡ್ಡ ಎಚ್ಚರಿಕೆ
May 17, 2026
2:30 PM
by: ದ ರೂರಲ್ ಮಿರರ್.ಕಾಂ
ಭಾರತ–ಆಸ್ಟ್ರೇಲಿಯಾ ಅಗ್ರಿಟೆಕ್ ಮೈತ್ರಿ..! ಹವಾಮಾನ ಸವಾಲು ಎದುರಿಸಲು ಸ್ಮಾರ್ಟ್ ಕೃಷಿ ತಂತ್ರಜ್ಞಾನಕ್ಕೆ ಒತ್ತು
May 17, 2026
7:28 AM
by: ದ ರೂರಲ್ ಮಿರರ್.ಕಾಂ
“ಕೋಟಿ ವೃಕ್ಷ ಅಭಿಯಾನ”ದ ಪರಿಣಾಮವೇ? ವಿಜಯಪುರದಲ್ಲಿ ತಾಪಮಾನ 40°C ದಾಟದಿರುವುದು ಆಶಾದಾಯಕ: ಸಚಿವ ಎಂ.ಬಿ. ಪಾಟೀಲ್
May 16, 2026
10:28 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror