MIRROR FOCUS

ಅಡಿಕೆ ಕಳ್ಳಸಾಗಾಟಕ್ಕೆ ಸತತ ಪ್ರಯತ್ನ | ಅಸ್ಸಾಂ ಗಡಿಯಲ್ಲಿ ಹದ್ದಿನ ಕಣ್ಣು | ಮತ್ತೆ ವಶವಾಯ್ತು 235 ಚೀಲ ಅಡಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಅಡಿಕೆ ಕಳ್ಳ ಸಾಗಾಟಕ್ಕೆ ಸತತ ಪ್ರಯತ್ನ ನಡೆಯುತ್ತಿದೆ. ಅಸ್ಸಾಂ ಗಡಿ ಭಾಗದಲ್ಲಿ ಮಾತ್ರಾ ಅಡಿಕೆ ಕಳ್ಳ ಸಾಗಾಟಕ್ಕೆ ಸುಲಭದಲ್ಲಿ ಸಾಧ್ಯವಾಗುತ್ತಿಲ್ಲ. ಇದೀಗ ಮತ್ತೆ 235 ಚೀಲದ ಸುಮಾರು 52,64,000 ರೂಪಾಯಿ ಮೌಲ್ಯದ ಅಡಿಕೆಯನ್ನು ಅಸ್ಸಾಂ ಗಡಿ ಭದ್ರತಾ ಪಡೆಯ ಸಿಬಂದಿಗಳು ವಶಕ್ಕೆ ಪಡೆದಿದ್ದಾರೆ.

Advertisement
Advertisement

ಅಸ್ಸಾಂನ ಮಿಜೋರಾಂನ ಚಂಪೈ ಜಿಲ್ಲೆಯಿಂದ ದಾಸ್ತಾನು ಇರಿಸಿದ್ದ 235  ಚೀಲದ ಸುಮಾರು 52,64,000 ರೂಪಾಯಿ ಮೌಲ್ಯದ ಅಡಿಕೆಯನ್ನು ಮಂಗಳವಾರ ಅಸ್ಸಾಂ ಗಡಿ ಭದ್ರತಾ ಪಡೆಯ ಸಿಬಂದಿಗಳು ವಶಕ್ಕೆ ಪಡೆದಿದ್ದಾರೆ. ಇಷ್ಟೇ ಅಲ್ಲ, ಈ ಗಡಿ ಭಾಗದ ಮೂಲಕ ಅಕ್ರಮವಾಗಿ ಮರ ಸಾಗಾಟ, ಹೆರಾಯಿನ್‌ ಸೇರಿದಂತೆ ಮಾದಕ ವಸ್ತುಗಳ ಸಾಗಾಟವಾಗುತ್ತಿರುವ ಕಾರಣದಿಂದ ಅಸ್ಸಾಂ ಗಡಿಯಲ್ಲಿ ಗಡಿಭದ್ರತಾ ಸಿಬಂದಿಗಳು ಹದ್ದಿನ ಕಣ್ಣು ಇರಿಸಿದ್ದಾರೆ. ಹೀಗಾಗಿ ಅಡಿಕೆ ಕೂಡಾ ಅಕ್ರಮವಾಗಿ ಸಾಗಾಟವಾಗಲು ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳನ್ನು ತಪ್ಪಿಸಿ ಸಣ್ಣ ಪ್ರಮಾಣದಲ್ಲಿ ಅಡಿಕೆ ಅಸ್ಸಾಂ ಮೂಲಕ ಭಾರತದೊಳಕ್ಕೆ ಪ್ರವೇಶ ಮಾಡಿದರೂ ಭಾರೀ ಪ್ರಮಾಣದಲ್ಲಿ ಅಡಿಕೆ ಭಾರತದೊಳಕ್ಕೆ ಈಗ ಪ್ರವೇಶಕ್ಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಭಾರತದ ಅಡಿಕೆ ಧಾರಣೆ ಮೇಲೆ ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ.

ಕಳೆದ ಕೆಲವು ದಿನಗಳಲ್ಲಿ ಅಸ್ಸಾಂ ಗಡಿ ಭದ್ರತಾ ಪಡೆಯುವ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಕಳ್ಳಸಾಗಣೆ ಮಾಡಲು ಉದ್ದೇಶಿಸಿರುವ ವಿವಿಧ ಸರಕುಗಳನ್ನು ವಶಪಡಿಸಿಕೊಂಡಿದೆ. ಅದರಲ್ಲಿ ಅಡಿಕೆಯೂ ಸೇರಿದೆ. ಈಚೆಗೆ  ಕಳ್ಳಸಾಗಣೆ ಚಟುವಟಿಕೆಗಳು ಅಸ್ಸಂ ರಾಜ್ಯದಲ್ಲಿ ಗಮನಾರ್ಹ ಏರಿಕೆ ಕಂಡಿದೆ. ಈ ಕಾರಣದಿಂದ ಅಧಿಕಾರಿಗಳು ಆಗಾಗ ಧಾಳಿ ಮಾಡುತ್ತಿದ್ದಾರೆ. ಇದೇ ವೇಳೆ ವಿವಿಧ ಇಲಾಖೆಗಳ ಜಂಟಿ ಕಾರ್ಯಾಚರಣೆಯಲ್ಲಿ 324 ಗ್ರಾಂ ಹೆರಾಯಿನ್  ವಶಪಡಿಸಿಕೊಂಡಿದೆ. ಇದುವರೆಗೆ ವಶಪಡಿಸಿಕೊಂಡ ವಸ್ತುವಿನ ಅಂದಾಜು  ಮೌಲ್ಯ 1,45,80,000 ರೂಪಾಯಿ ಎಂದು ಇಲಾಖೆ ಹೇಳಿದೆ.

ಅಸ್ಸಾಂ ಮೂಲಕ ಭಾರತದೊಳಕ್ಕೆ ಅಡಿಕೆ ಪ್ರವೇಶ ಕಷ್ಟವಾಗುತ್ತಿದೆ. ಆದರೆ ಅಡಿಕೆ ಬೇಡಿಕೆ ಹೆಚ್ಚಿದೆ. ಹಾಗಿದ್ದರೂ ಅಡಿಕೆ ಧಾರಣೆ ಏಕೆ ಏರುತ್ತಿಲ್ಲ ಎಂಬ ಪ್ರಶ್ನೆ ಸಹಜವಾಗಿಯೇ ಇದೆ. ಸದ್ಯ ಮಾರ್ಚ್‌ ಅಂತ್ಯದ ತಿಂಗಳಾದ್ದರಿಂದ ಹಣದ ಓಡಾಟವಾಗುತ್ತಿಲ್ಲ. ಈ ಕಾರಣದಿಂದ ಅಡಿಕೆ ಬೇಡಿಕೆ ಇದ್ದರೂ ಹಣದ ಕೊರತೆ ಮಾರುಕಟ್ಟೆ ವಲಯಕ್ಕೆ ಕಾಡಿದೆ. ಎಪ್ರಿಲ್‌ ಆರಂಭದ ನಂತರ ಧಾರಣೆ ಏರಿಕೆಯಾಗುತ್ತದೆ. ಈ ಬಾರಿ ಹಂತ ಹಂತವಾಗಿಯೇ ಅಡಿಕೆ ಮಾರುಕಟ್ಟೆ ಏರಿಕೆಯತ್ತ ಹಾಗೂ ವಿಪರೀತವಾಗಿ ಅಡಿಕೆ ಧಾರಣೆ ಏರಿಕೆಯಾಗದಂತೆ , ಸ್ಥಿರತೆ ಕಡೆಗೆ ಹೆಚ್ಚು ಗಮನ ನೀಡಲು ಮಾರುಕಟ್ಟೆ ವಲಯ ಚಿಂತನೆ ನಡೆಸಿದೆ. ಆದರೆ ಖಾಸಗಿ ವ್ಯಾಪಾರಿಗಳು ದಿಢೀರನೆ ಅಡಿಕೆ ಮಾರುಕಟ್ಟೆ ಏರಿಕೆ ಅಥವಾ ಇಳಿಕೆ ಮಾಡಿದರೆ ಬೆಳೆಗಾರರು ಒಮ್ಮೆಲೇ ಅಡಿಕೆಯನ್ನು ಮಾರುಕಟ್ಟೆಗೆ ತಂದರೆ ಸಮಸ್ಯೆಯಾಗಲಿದೆ ಎನ್ನುವುದು  ಮಾರುಕಟ್ಟೆ ತಜ್ಞರ ಅಭಿಮತ.ʼ

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂದಿನ 4-5 ದಿನಗಳಲ್ಲಿ ದೇಶದ ವಾಯುವ್ಯ ಭಾಗಗಳಲ್ಲಿ ತೀವ್ರ ತಾಪಮಾನ | ದಕ್ಷಿಣದಲ್ಲಿ ಉತ್ತಮ ಮಳೆ |

ಜೂನ್‌ 12 ರಿಂದ 15 ರವರೆಗೆ ಕರ್ನಾಟಕದಲ್ಲಿ  ಮತ್ತು ಜೂನ್ 13 ರಿಂದ…

3 hours ago

ಈರುಳ್ಳಿ ಮತ್ತು ಕೆಂಪುಮೆಣಸಿನಕಾಯಿ ಬೆಳೆಗಳಿಗೆ ವಿಮಾ ಸೌಲಭ್ಯ ಅಧಿಸೂಚನೆ

ಗದಗ ಜಿಲ್ಲೆಯಲ್ಲಿ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ತೋಟಗಾರಿಕೆ ಬೆಳೆಗಳಾದ…

3 hours ago

11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ತಗ್ಗಿದೆ – ಸಚಿವ ಪ್ರಹ್ಲಾದ್ ಜೋಶಿ

ಕಳೆದ 11 ವರ್ಷಗಳಲ್ಲಿ ಭಾರತದ ಕಡು ಬಡವರ ಸಂಖ್ಯೆ ಶೇಕಡ 21.1 ರಿಂದ…

3 hours ago

25 ಗ್ರೀನ್‌ಫೀಲ್ಡ್ ಎಕ್ಸ್‌ಪ್ರೆಸ್ ಹೆದ್ದಾರಿಗಳ ನಿರ್ಮಾಣ -ಸಚಿವ ನಿತಿನ್‌ ಗಡ್ಕರಿ

ಬಂದರು ಸಂಪರ್ಕಕ್ಕಾಗಿ ಮತ್ತು ಧಾರ್ಮಿಕ ಪ್ರವಾಸೋದ್ಯಮಕ್ಕಾಗಿ 3 ಸಾವಿರ ಕಿಲೋ ಮೀಟರ್‌ಗಿಂತ  ಹೆಚ್ಚಿನ…

3 hours ago

ಧನ, ಧಾನ್ಯ, ಸಂಪತ್ತಿಗಾಗಿ ಇಂತಹ ಕೆಲಸಗಳನ್ನು ಮಾಡಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

3 hours ago

ಪ್ರೋಟಾನ್ ಥೆರಪಿ ಮೂಲಕ ಕ್ಯಾನ್ಸರ್ ಗೆ ಚಿಕಿತ್ಸೆ | ಕಿದ್ವಾಯಿ ಆಸ್ಪತ್ರೆಯಲ್ಲಿ ಸೌಲಭ್ಯ ಜಾರಿಗೆ ಪ್ರಸ್ತಾವನೆ

ಅತ್ಯಾಧುನಿಕವಾದ ಪ್ರೋಟಾನ್ ರೇಡಿಯೋ ಥೆರಪಿ ಮೂಲಕ ಕ್ಯಾನ್ಸರ್ ಶುಶ್ರೂಷೆಗೆ ಅಗತ್ಯ ಆರ್ಥಿಕ ನೆರವು…

13 hours ago