ಅಡಿಕೆ ಕಳ್ಳ ಸಾಗಾಟಕ್ಕೆ ಸತತ ಪ್ರಯತ್ನ ನಡೆಯುತ್ತಿದೆ. ಅಸ್ಸಾಂ ಗಡಿ ಭಾಗದಲ್ಲಿ ಮಾತ್ರಾ ಅಡಿಕೆ ಕಳ್ಳ ಸಾಗಾಟಕ್ಕೆ ಸುಲಭದಲ್ಲಿ ಸಾಧ್ಯವಾಗುತ್ತಿಲ್ಲ. ಇದೀಗ ಮತ್ತೆ 235 ಚೀಲದ ಸುಮಾರು 52,64,000 ರೂಪಾಯಿ ಮೌಲ್ಯದ ಅಡಿಕೆಯನ್ನು ಅಸ್ಸಾಂ ಗಡಿ ಭದ್ರತಾ ಪಡೆಯ ಸಿಬಂದಿಗಳು ವಶಕ್ಕೆ ಪಡೆದಿದ್ದಾರೆ.
ಅಸ್ಸಾಂನ ಮಿಜೋರಾಂನ ಚಂಪೈ ಜಿಲ್ಲೆಯಿಂದ ದಾಸ್ತಾನು ಇರಿಸಿದ್ದ 235 ಚೀಲದ ಸುಮಾರು 52,64,000 ರೂಪಾಯಿ ಮೌಲ್ಯದ ಅಡಿಕೆಯನ್ನು ಮಂಗಳವಾರ ಅಸ್ಸಾಂ ಗಡಿ ಭದ್ರತಾ ಪಡೆಯ ಸಿಬಂದಿಗಳು ವಶಕ್ಕೆ ಪಡೆದಿದ್ದಾರೆ. ಇಷ್ಟೇ ಅಲ್ಲ, ಈ ಗಡಿ ಭಾಗದ ಮೂಲಕ ಅಕ್ರಮವಾಗಿ ಮರ ಸಾಗಾಟ, ಹೆರಾಯಿನ್ ಸೇರಿದಂತೆ ಮಾದಕ ವಸ್ತುಗಳ ಸಾಗಾಟವಾಗುತ್ತಿರುವ ಕಾರಣದಿಂದ ಅಸ್ಸಾಂ ಗಡಿಯಲ್ಲಿ ಗಡಿಭದ್ರತಾ ಸಿಬಂದಿಗಳು ಹದ್ದಿನ ಕಣ್ಣು ಇರಿಸಿದ್ದಾರೆ. ಹೀಗಾಗಿ ಅಡಿಕೆ ಕೂಡಾ ಅಕ್ರಮವಾಗಿ ಸಾಗಾಟವಾಗಲು ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳನ್ನು ತಪ್ಪಿಸಿ ಸಣ್ಣ ಪ್ರಮಾಣದಲ್ಲಿ ಅಡಿಕೆ ಅಸ್ಸಾಂ ಮೂಲಕ ಭಾರತದೊಳಕ್ಕೆ ಪ್ರವೇಶ ಮಾಡಿದರೂ ಭಾರೀ ಪ್ರಮಾಣದಲ್ಲಿ ಅಡಿಕೆ ಭಾರತದೊಳಕ್ಕೆ ಈಗ ಪ್ರವೇಶಕ್ಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಭಾರತದ ಅಡಿಕೆ ಧಾರಣೆ ಮೇಲೆ ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ.
ಕಳೆದ ಕೆಲವು ದಿನಗಳಲ್ಲಿ ಅಸ್ಸಾಂ ಗಡಿ ಭದ್ರತಾ ಪಡೆಯುವ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಕಳ್ಳಸಾಗಣೆ ಮಾಡಲು ಉದ್ದೇಶಿಸಿರುವ ವಿವಿಧ ಸರಕುಗಳನ್ನು ವಶಪಡಿಸಿಕೊಂಡಿದೆ. ಅದರಲ್ಲಿ ಅಡಿಕೆಯೂ ಸೇರಿದೆ. ಈಚೆಗೆ ಕಳ್ಳಸಾಗಣೆ ಚಟುವಟಿಕೆಗಳು ಅಸ್ಸಂ ರಾಜ್ಯದಲ್ಲಿ ಗಮನಾರ್ಹ ಏರಿಕೆ ಕಂಡಿದೆ. ಈ ಕಾರಣದಿಂದ ಅಧಿಕಾರಿಗಳು ಆಗಾಗ ಧಾಳಿ ಮಾಡುತ್ತಿದ್ದಾರೆ. ಇದೇ ವೇಳೆ ವಿವಿಧ ಇಲಾಖೆಗಳ ಜಂಟಿ ಕಾರ್ಯಾಚರಣೆಯಲ್ಲಿ 324 ಗ್ರಾಂ ಹೆರಾಯಿನ್ ವಶಪಡಿಸಿಕೊಂಡಿದೆ. ಇದುವರೆಗೆ ವಶಪಡಿಸಿಕೊಂಡ ವಸ್ತುವಿನ ಅಂದಾಜು ಮೌಲ್ಯ 1,45,80,000 ರೂಪಾಯಿ ಎಂದು ಇಲಾಖೆ ಹೇಳಿದೆ.
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…