Advertisement
MIRROR FOCUS

ಅಡಿಕೆ ಕಳ್ಳಸಾಗಾಟಕ್ಕೆ ಸತತ ಪ್ರಯತ್ನ | ಅಸ್ಸಾಂ ಗಡಿಯಲ್ಲಿ ಹದ್ದಿನ ಕಣ್ಣು | ಮತ್ತೆ ವಶವಾಯ್ತು 235 ಚೀಲ ಅಡಿಕೆ |

Share

ಅಡಿಕೆ ಕಳ್ಳ ಸಾಗಾಟಕ್ಕೆ ಸತತ ಪ್ರಯತ್ನ ನಡೆಯುತ್ತಿದೆ. ಅಸ್ಸಾಂ ಗಡಿ ಭಾಗದಲ್ಲಿ ಮಾತ್ರಾ ಅಡಿಕೆ ಕಳ್ಳ ಸಾಗಾಟಕ್ಕೆ ಸುಲಭದಲ್ಲಿ ಸಾಧ್ಯವಾಗುತ್ತಿಲ್ಲ. ಇದೀಗ ಮತ್ತೆ 235 ಚೀಲದ ಸುಮಾರು 52,64,000 ರೂಪಾಯಿ ಮೌಲ್ಯದ ಅಡಿಕೆಯನ್ನು ಅಸ್ಸಾಂ ಗಡಿ ಭದ್ರತಾ ಪಡೆಯ ಸಿಬಂದಿಗಳು ವಶಕ್ಕೆ ಪಡೆದಿದ್ದಾರೆ.

ಅಸ್ಸಾಂನ ಮಿಜೋರಾಂನ ಚಂಪೈ ಜಿಲ್ಲೆಯಿಂದ ದಾಸ್ತಾನು ಇರಿಸಿದ್ದ 235  ಚೀಲದ ಸುಮಾರು 52,64,000 ರೂಪಾಯಿ ಮೌಲ್ಯದ ಅಡಿಕೆಯನ್ನು ಮಂಗಳವಾರ ಅಸ್ಸಾಂ ಗಡಿ ಭದ್ರತಾ ಪಡೆಯ ಸಿಬಂದಿಗಳು ವಶಕ್ಕೆ ಪಡೆದಿದ್ದಾರೆ. ಇಷ್ಟೇ ಅಲ್ಲ, ಈ ಗಡಿ ಭಾಗದ ಮೂಲಕ ಅಕ್ರಮವಾಗಿ ಮರ ಸಾಗಾಟ, ಹೆರಾಯಿನ್‌ ಸೇರಿದಂತೆ ಮಾದಕ ವಸ್ತುಗಳ ಸಾಗಾಟವಾಗುತ್ತಿರುವ ಕಾರಣದಿಂದ ಅಸ್ಸಾಂ ಗಡಿಯಲ್ಲಿ ಗಡಿಭದ್ರತಾ ಸಿಬಂದಿಗಳು ಹದ್ದಿನ ಕಣ್ಣು ಇರಿಸಿದ್ದಾರೆ. ಹೀಗಾಗಿ ಅಡಿಕೆ ಕೂಡಾ ಅಕ್ರಮವಾಗಿ ಸಾಗಾಟವಾಗಲು ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳನ್ನು ತಪ್ಪಿಸಿ ಸಣ್ಣ ಪ್ರಮಾಣದಲ್ಲಿ ಅಡಿಕೆ ಅಸ್ಸಾಂ ಮೂಲಕ ಭಾರತದೊಳಕ್ಕೆ ಪ್ರವೇಶ ಮಾಡಿದರೂ ಭಾರೀ ಪ್ರಮಾಣದಲ್ಲಿ ಅಡಿಕೆ ಭಾರತದೊಳಕ್ಕೆ ಈಗ ಪ್ರವೇಶಕ್ಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಭಾರತದ ಅಡಿಕೆ ಧಾರಣೆ ಮೇಲೆ ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ.

ಕಳೆದ ಕೆಲವು ದಿನಗಳಲ್ಲಿ ಅಸ್ಸಾಂ ಗಡಿ ಭದ್ರತಾ ಪಡೆಯುವ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಕಳ್ಳಸಾಗಣೆ ಮಾಡಲು ಉದ್ದೇಶಿಸಿರುವ ವಿವಿಧ ಸರಕುಗಳನ್ನು ವಶಪಡಿಸಿಕೊಂಡಿದೆ. ಅದರಲ್ಲಿ ಅಡಿಕೆಯೂ ಸೇರಿದೆ. ಈಚೆಗೆ  ಕಳ್ಳಸಾಗಣೆ ಚಟುವಟಿಕೆಗಳು ಅಸ್ಸಂ ರಾಜ್ಯದಲ್ಲಿ ಗಮನಾರ್ಹ ಏರಿಕೆ ಕಂಡಿದೆ. ಈ ಕಾರಣದಿಂದ ಅಧಿಕಾರಿಗಳು ಆಗಾಗ ಧಾಳಿ ಮಾಡುತ್ತಿದ್ದಾರೆ. ಇದೇ ವೇಳೆ ವಿವಿಧ ಇಲಾಖೆಗಳ ಜಂಟಿ ಕಾರ್ಯಾಚರಣೆಯಲ್ಲಿ 324 ಗ್ರಾಂ ಹೆರಾಯಿನ್  ವಶಪಡಿಸಿಕೊಂಡಿದೆ. ಇದುವರೆಗೆ ವಶಪಡಿಸಿಕೊಂಡ ವಸ್ತುವಿನ ಅಂದಾಜು  ಮೌಲ್ಯ 1,45,80,000 ರೂಪಾಯಿ ಎಂದು ಇಲಾಖೆ ಹೇಳಿದೆ.

ಅಸ್ಸಾಂ ಮೂಲಕ ಭಾರತದೊಳಕ್ಕೆ ಅಡಿಕೆ ಪ್ರವೇಶ ಕಷ್ಟವಾಗುತ್ತಿದೆ. ಆದರೆ ಅಡಿಕೆ ಬೇಡಿಕೆ ಹೆಚ್ಚಿದೆ. ಹಾಗಿದ್ದರೂ ಅಡಿಕೆ ಧಾರಣೆ ಏಕೆ ಏರುತ್ತಿಲ್ಲ ಎಂಬ ಪ್ರಶ್ನೆ ಸಹಜವಾಗಿಯೇ ಇದೆ. ಸದ್ಯ ಮಾರ್ಚ್‌ ಅಂತ್ಯದ ತಿಂಗಳಾದ್ದರಿಂದ ಹಣದ ಓಡಾಟವಾಗುತ್ತಿಲ್ಲ. ಈ ಕಾರಣದಿಂದ ಅಡಿಕೆ ಬೇಡಿಕೆ ಇದ್ದರೂ ಹಣದ ಕೊರತೆ ಮಾರುಕಟ್ಟೆ ವಲಯಕ್ಕೆ ಕಾಡಿದೆ. ಎಪ್ರಿಲ್‌ ಆರಂಭದ ನಂತರ ಧಾರಣೆ ಏರಿಕೆಯಾಗುತ್ತದೆ. ಈ ಬಾರಿ ಹಂತ ಹಂತವಾಗಿಯೇ ಅಡಿಕೆ ಮಾರುಕಟ್ಟೆ ಏರಿಕೆಯತ್ತ ಹಾಗೂ ವಿಪರೀತವಾಗಿ ಅಡಿಕೆ ಧಾರಣೆ ಏರಿಕೆಯಾಗದಂತೆ , ಸ್ಥಿರತೆ ಕಡೆಗೆ ಹೆಚ್ಚು ಗಮನ ನೀಡಲು ಮಾರುಕಟ್ಟೆ ವಲಯ ಚಿಂತನೆ ನಡೆಸಿದೆ. ಆದರೆ ಖಾಸಗಿ ವ್ಯಾಪಾರಿಗಳು ದಿಢೀರನೆ ಅಡಿಕೆ ಮಾರುಕಟ್ಟೆ ಏರಿಕೆ ಅಥವಾ ಇಳಿಕೆ ಮಾಡಿದರೆ ಬೆಳೆಗಾರರು ಒಮ್ಮೆಲೇ ಅಡಿಕೆಯನ್ನು ಮಾರುಕಟ್ಟೆಗೆ ತಂದರೆ ಸಮಸ್ಯೆಯಾಗಲಿದೆ ಎನ್ನುವುದು  ಮಾರುಕಟ್ಟೆ ತಜ್ಞರ ಅಭಿಮತ.ʼ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮುಂಗಾರು ಅಬ್ಬರ | ಕರ್ನಾಟಕ ಸೇರಿ ದೇಶದ ಹಲವೆಡೆ ಭಾರೀ ಮಳೆ – ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕೇರಳದಲ್ಲಿ ರೆಡ್ ಅಲರ್ಟ್

ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…

9 hours ago

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

21 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

23 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

1 day ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

2 days ago