Advertisement
MIRROR FOCUS

ಅಡಿಕೆ ಕಳ್ಳಸಾಗಾಟಕ್ಕೆ ಸತತ ಪ್ರಯತ್ನ | ಅಸ್ಸಾಂ ಗಡಿಯಲ್ಲಿ ಹದ್ದಿನ ಕಣ್ಣು | ಮತ್ತೆ ವಶವಾಯ್ತು 235 ಚೀಲ ಅಡಿಕೆ |

Share

ಅಡಿಕೆ ಕಳ್ಳ ಸಾಗಾಟಕ್ಕೆ ಸತತ ಪ್ರಯತ್ನ ನಡೆಯುತ್ತಿದೆ. ಅಸ್ಸಾಂ ಗಡಿ ಭಾಗದಲ್ಲಿ ಮಾತ್ರಾ ಅಡಿಕೆ ಕಳ್ಳ ಸಾಗಾಟಕ್ಕೆ ಸುಲಭದಲ್ಲಿ ಸಾಧ್ಯವಾಗುತ್ತಿಲ್ಲ. ಇದೀಗ ಮತ್ತೆ 235 ಚೀಲದ ಸುಮಾರು 52,64,000 ರೂಪಾಯಿ ಮೌಲ್ಯದ ಅಡಿಕೆಯನ್ನು ಅಸ್ಸಾಂ ಗಡಿ ಭದ್ರತಾ ಪಡೆಯ ಸಿಬಂದಿಗಳು ವಶಕ್ಕೆ ಪಡೆದಿದ್ದಾರೆ.

ಅಸ್ಸಾಂನ ಮಿಜೋರಾಂನ ಚಂಪೈ ಜಿಲ್ಲೆಯಿಂದ ದಾಸ್ತಾನು ಇರಿಸಿದ್ದ 235  ಚೀಲದ ಸುಮಾರು 52,64,000 ರೂಪಾಯಿ ಮೌಲ್ಯದ ಅಡಿಕೆಯನ್ನು ಮಂಗಳವಾರ ಅಸ್ಸಾಂ ಗಡಿ ಭದ್ರತಾ ಪಡೆಯ ಸಿಬಂದಿಗಳು ವಶಕ್ಕೆ ಪಡೆದಿದ್ದಾರೆ. ಇಷ್ಟೇ ಅಲ್ಲ, ಈ ಗಡಿ ಭಾಗದ ಮೂಲಕ ಅಕ್ರಮವಾಗಿ ಮರ ಸಾಗಾಟ, ಹೆರಾಯಿನ್‌ ಸೇರಿದಂತೆ ಮಾದಕ ವಸ್ತುಗಳ ಸಾಗಾಟವಾಗುತ್ತಿರುವ ಕಾರಣದಿಂದ ಅಸ್ಸಾಂ ಗಡಿಯಲ್ಲಿ ಗಡಿಭದ್ರತಾ ಸಿಬಂದಿಗಳು ಹದ್ದಿನ ಕಣ್ಣು ಇರಿಸಿದ್ದಾರೆ. ಹೀಗಾಗಿ ಅಡಿಕೆ ಕೂಡಾ ಅಕ್ರಮವಾಗಿ ಸಾಗಾಟವಾಗಲು ಸಾಧ್ಯವಾಗುತ್ತಿಲ್ಲ. ಅಧಿಕಾರಿಗಳನ್ನು ತಪ್ಪಿಸಿ ಸಣ್ಣ ಪ್ರಮಾಣದಲ್ಲಿ ಅಡಿಕೆ ಅಸ್ಸಾಂ ಮೂಲಕ ಭಾರತದೊಳಕ್ಕೆ ಪ್ರವೇಶ ಮಾಡಿದರೂ ಭಾರೀ ಪ್ರಮಾಣದಲ್ಲಿ ಅಡಿಕೆ ಭಾರತದೊಳಕ್ಕೆ ಈಗ ಪ್ರವೇಶಕ್ಕೆ ಸಾಧ್ಯವಾಗುತ್ತಿಲ್ಲ. ಹೀಗಾಗಿ ಭಾರತದ ಅಡಿಕೆ ಧಾರಣೆ ಮೇಲೆ ಸದ್ಯಕ್ಕೆ ಯಾವುದೇ ತೊಂದರೆ ಇಲ್ಲ.

ಕಳೆದ ಕೆಲವು ದಿನಗಳಲ್ಲಿ ಅಸ್ಸಾಂ ಗಡಿ ಭದ್ರತಾ ಪಡೆಯುವ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಕಳ್ಳಸಾಗಣೆ ಮಾಡಲು ಉದ್ದೇಶಿಸಿರುವ ವಿವಿಧ ಸರಕುಗಳನ್ನು ವಶಪಡಿಸಿಕೊಂಡಿದೆ. ಅದರಲ್ಲಿ ಅಡಿಕೆಯೂ ಸೇರಿದೆ. ಈಚೆಗೆ  ಕಳ್ಳಸಾಗಣೆ ಚಟುವಟಿಕೆಗಳು ಅಸ್ಸಂ ರಾಜ್ಯದಲ್ಲಿ ಗಮನಾರ್ಹ ಏರಿಕೆ ಕಂಡಿದೆ. ಈ ಕಾರಣದಿಂದ ಅಧಿಕಾರಿಗಳು ಆಗಾಗ ಧಾಳಿ ಮಾಡುತ್ತಿದ್ದಾರೆ. ಇದೇ ವೇಳೆ ವಿವಿಧ ಇಲಾಖೆಗಳ ಜಂಟಿ ಕಾರ್ಯಾಚರಣೆಯಲ್ಲಿ 324 ಗ್ರಾಂ ಹೆರಾಯಿನ್  ವಶಪಡಿಸಿಕೊಂಡಿದೆ. ಇದುವರೆಗೆ ವಶಪಡಿಸಿಕೊಂಡ ವಸ್ತುವಿನ ಅಂದಾಜು  ಮೌಲ್ಯ 1,45,80,000 ರೂಪಾಯಿ ಎಂದು ಇಲಾಖೆ ಹೇಳಿದೆ.

ಅಸ್ಸಾಂ ಮೂಲಕ ಭಾರತದೊಳಕ್ಕೆ ಅಡಿಕೆ ಪ್ರವೇಶ ಕಷ್ಟವಾಗುತ್ತಿದೆ. ಆದರೆ ಅಡಿಕೆ ಬೇಡಿಕೆ ಹೆಚ್ಚಿದೆ. ಹಾಗಿದ್ದರೂ ಅಡಿಕೆ ಧಾರಣೆ ಏಕೆ ಏರುತ್ತಿಲ್ಲ ಎಂಬ ಪ್ರಶ್ನೆ ಸಹಜವಾಗಿಯೇ ಇದೆ. ಸದ್ಯ ಮಾರ್ಚ್‌ ಅಂತ್ಯದ ತಿಂಗಳಾದ್ದರಿಂದ ಹಣದ ಓಡಾಟವಾಗುತ್ತಿಲ್ಲ. ಈ ಕಾರಣದಿಂದ ಅಡಿಕೆ ಬೇಡಿಕೆ ಇದ್ದರೂ ಹಣದ ಕೊರತೆ ಮಾರುಕಟ್ಟೆ ವಲಯಕ್ಕೆ ಕಾಡಿದೆ. ಎಪ್ರಿಲ್‌ ಆರಂಭದ ನಂತರ ಧಾರಣೆ ಏರಿಕೆಯಾಗುತ್ತದೆ. ಈ ಬಾರಿ ಹಂತ ಹಂತವಾಗಿಯೇ ಅಡಿಕೆ ಮಾರುಕಟ್ಟೆ ಏರಿಕೆಯತ್ತ ಹಾಗೂ ವಿಪರೀತವಾಗಿ ಅಡಿಕೆ ಧಾರಣೆ ಏರಿಕೆಯಾಗದಂತೆ , ಸ್ಥಿರತೆ ಕಡೆಗೆ ಹೆಚ್ಚು ಗಮನ ನೀಡಲು ಮಾರುಕಟ್ಟೆ ವಲಯ ಚಿಂತನೆ ನಡೆಸಿದೆ. ಆದರೆ ಖಾಸಗಿ ವ್ಯಾಪಾರಿಗಳು ದಿಢೀರನೆ ಅಡಿಕೆ ಮಾರುಕಟ್ಟೆ ಏರಿಕೆ ಅಥವಾ ಇಳಿಕೆ ಮಾಡಿದರೆ ಬೆಳೆಗಾರರು ಒಮ್ಮೆಲೇ ಅಡಿಕೆಯನ್ನು ಮಾರುಕಟ್ಟೆಗೆ ತಂದರೆ ಸಮಸ್ಯೆಯಾಗಲಿದೆ ಎನ್ನುವುದು  ಮಾರುಕಟ್ಟೆ ತಜ್ಞರ ಅಭಿಮತ.ʼ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

9 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

17 hours ago

ತೆಂಗು ಬೆಳೆಗೆ ವಿಮೆ : ಕೇಂದ್ರದ ಮಹತ್ವದ ಉತ್ತರ

ತೆಂಗು ಬೆಳೆಯನ್ನು PMFBY ಅಥವಾ RWBCIS ಅಡಿಯಲ್ಲಿ ವಿಮಾ ವ್ಯಾಪ್ತಿಗೆ ತರುವ ಅಧಿಕಾರ…

18 hours ago

ಹವಾಮಾನ ವರದಿ | 11-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ದಿನಗಳಲ್ಲಿ ಏನು ಬದಲಾವಣೆ ?

ಕರಾವಳಿ ಜಿಲ್ಲೆಗಳಲ್ಲಿ ಮಳೆಯ ನಡುವೆ ಹೆಚ್ಚಿನ ಬಿಡುವಿನ ಅವಧಿಯೊಂದಿಗೆ ಬಿಸಿಲು–ಮೋಡದ ವಾತಾವರಣ ಮುಂದುವರಿಯಲಿದ್ದು,…

19 hours ago

ಬಿ.ಎಸ್‌ಸಿ. ಕೃಷಿ ನಂತರ ಏನು ? ಉದ್ಯೋಗ, ಉದ್ಯಮ ಮತ್ತು ಉನ್ನತ ಶಿಕ್ಷಣದ ಅತ್ಯುತ್ತಮ ಅವಕಾಶಗಳು ಇಲ್ಲಿವೆ

ಬಿ.ಎಸ್‌ಸಿ. ಕೃಷಿ ಪದವೀಧರರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಕಂಪನಿಗಳು, ಬ್ಯಾಂಕಿಂಗ್, ಸಂಶೋಧನೆ ಮತ್ತು…

1 day ago

ಅಡಿಕೆ–ಕಾಳುಮೆಣಸು ಬೆಳೆ ವಿಮೆ: ರೈತರ ನೋಂದಣಿಗೆ ಆ.17 ಅಂತಿಮ ದಿನ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2026-27ನೇ ಸಾಲಿನ ಹವಾಮಾನ ಆಧಾರಿತ ಬೆಳೆವಿಮೆ ಯೋಜನೆಯಡಿ ಅಡಿಕೆ…

1 day ago