Exclusive - Mirror Hunt

MIRROR EXCLUSIVE | ಅಡಿಕೆ ಬೆಳೆಗೆ ಇನ್ನೊಂದು ರೋಗ | ಮರ್ಕಂಜದಲ್ಲಿ ಕಂಡು ಬಂದಿದೆ ಅಡಿಕೆ ಮರದ ಎಲೆ ಚುಕ್ಕೆ ರೋಗ | ಸಿಪಿಸಿಆರ್‌ಐ ವಿಜ್ಞಾನಿಗಳ ತಂಡ ಭೇಟಿ |

Share
ಅಡಿಕೆ ಬೆಳೆಗಾರರಿಗೆ ಇನ್ನೊಂದು ಆತಂಕ ಎದುರಾಗಿದೆ. ಅಡಿಕೆ ಹಳದಿ ಎಲೆ ರೋಗ , ಅಡಿಕೆ ಬೇರು ಹುಳದ ಜೊತೆಗೆ ಇದೀಗ ಎಲೆಚುಕ್ಕೆ ರೋಗವೂ ಕಂಡುಬಂದಿದೆ. ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದ ಯತೀಶ್‌ ಎಂಬವರ ತೋಟದಲ್ಲಿ ಈ ರೋಗ ಕಂಡುಬಂದಿದ್ದು ಸಿಪಿಸಿಆರ್‌ಐ ವಿಜ್ಞಾನಿಗಳ ತಂಡ ಭೇಟಿ ನೀಡಿ ಪರಿಶೀಲನೆ ಮಾಡಿದೆ. ರೋಗದ ನಿಯಂತ್ರಣಕ್ಕಾಗಿ ಪರಿಹಾರ ಮಾರ್ಗಗಳನ್ನೂ ಸೂಚಿಸಿದ್ದಾರೆ.
ಹಳದಿ, ಬೇರು ಹುಳ, ಸೇರಿದಂತೆ ಹಲವಾರು ರೋಗ ಬಾಧೆಯಿಂದ ಕಂಗೆಟ್ಟಿರುವ ಅಡಿಕೆ ಕೃಷಿಗೆ ಮತ್ತೊಂದು ರೋಗ ಬಾಧೆ ಕಂಡು ಬಂದಿದ್ದು ಆತಂಕ ಸೃಷ್ಠಿಸಿದೆ. ಸುಳ್ಯ ತಾಲೂಕಿನ ಮರ್ಕಂಜ ಗ್ರಾಮದಲ್ಲಿ ಕೆಲವು ಅಡಿಕೆ ತೋಟಗಳಲ್ಲಿ ಈ ರೋಗ ಬಾಧೆ ಕಂಡು ಬಂದಿದೆ. ಅಡಿಕೆ ಸೋಗೆಯ ಕೆಳಭಾಗದಲ್ಲಿ ಸಣ್ಣ ಚುಕ್ಕೆಗಳು ಕಾಣಿಸಿ ಕೊಳ್ಳುತ್ತವೆ.ನಿಧಾನವಾಗಿ ಅವುಗಳ ಗಾತ್ರ ವಿಸ್ತರಿಸಲ್ಪಡುತ್ತದೆ.ನಂತರ ಅದು ಒಣಗಿ ತೂತುಗಳು ಉಂಟಾಗುತ್ತವೆ.ಅಂತಹ ಚುಕ್ಕೆ ,ತೂತುಗಳ ಸಂಖ್ಯೆ ತೀರಾ ಹೆಚ್ಚಾದಾಗ ಸೋಗೆ ಒಣಗಿದಂತೆ ಕಾಣಿಸುತ್ತದೆ.ಅಡಿಕೆ ಮರದ ಕೆಳಭಾಗದ ಸೋಗೆ ಮೊದಲು ಕಾಟಕ್ಕೆ ಈಡಾಗುವುದು.ನಂತರ ಅದರ ಮೇಲಿನ ಸೋಗೆ.ಹೀಗೆ ವಿಸ್ತರಿಸಲ್ಪಡುತ್ತಾ ಹೋಗುತ್ತದೆ.ಯಾವುದೇ ಪರಿಹಾರ ಕ್ರಮ ಕೈಗೊಳ್ಳದೇ ಇದ್ದರೆ ಮರ ಸಾಯಲೂ ಬಹುದು ಎಂಬ ಆತಂಕ ಉಂಟಾಗಿದೆ.ಆಕ್ರಮಣಕಾರಿ ಸ್ವಭಾವದ ಶಿಲೀಂದ್ರ ಕಾಟ ಇದು.ಪಸರಿಸುವುದು ಅತಿ ಶೀಘ್ರವಾಗಿ .ಒಂದು ಕಡೆ ಕಾಣಿಸಿದರೆ ಸುತ್ತಮುತ್ತಲೆಲ್ಲ ಸುಪ್ತವಾಗಿರುವ ಸಾಧ್ಯತೆ ಇದೆ.
ಮರ್ಕಂಜ ಗ್ರಾಮದ ಯತೀಶ ಕಂಜಿಪಿಲಿ ಅವರ ತೋಟದಲ್ಲಿ ಈ ಸಮಸ್ಯೆ ಕಂಡುಬಂದಿತ್ತು, ಹೀಗಾಗಿ ಅವರು ಸಾಮಾಜಿಕ ಜಾಲತಾಣದ ಕೃಷಿ ಗುಂಪುಗಳಲ್ಲಿ  ಈ ಬಗ್ಗೆ ಮಾಹಿತಿ ನೀಡಿದ್ದರು. ಈ ಸಂದರ್ಭ ವಿವಿಧ ಅಭಿಪ್ರಾಯಗಳು ಬಂದಿದ್ದವು. ಯತೀಶ ಕಂಜಿಪಿಲಿಯವರ ಈ ತೋಟ ಸುಮಾರು ಆರು ವರ್ಷ ವಯಸ್ಸಿನದ್ದು. ಗಿಡ ನೆಟ್ಟ ಆರಂಭದಲ್ಲಿ ಕೆಲವು ವರ್ಷ ಅಲಸಂಡೆಯನ್ನು ಉಪಬೆಳೆಯಾಗಿ‌ ಬೆಳೆದಿದ್ದರು.ಉತ್ತಮ ಫಸಲೂ ಸಿಕ್ಕಿತ್ತಂತೆ.ಇದೀಗ ತೋಟದ ಅಡಿಕೆ ಗಿಡ ಗಮನಿಸುವಾಗ ಸಾರಜನಕ ಹೆಚ್ಚಳದ ಲಕ್ಷಣ ,ಕಾಂಡ ಒಡೆಯುವಿಕೆ , ಕಾಣಿಸುತ್ತಿತ್ತು. ತಮ್ಮ ತೋಟದ ಈ ಸಮಸ್ಯೆ ಬಗ್ಗೆ  ಸಿಪಿಸಿಐಆರ್‌ ವಿಜ್ಞಾನಿಗಳ ಗಮನಕ್ಕೂ ತಂದಿದ್ದರು. ಈ ವಿಷಯ ತಿಳಿದು ಕೃಷಿಕರು ನೀಡಿರುವ ಮಾಹಿತಿಯ ಹಿನ್ನಲೆಯಲ್ಲಿ ಸಿಪಿಸಿಆರ್ ಐ ವಿಜ್ಞಾನಿಗಳಾದ ಸಸ್ಯ ರೋಗ ಶಾಸ್ತ್ರಜ್ಞ ಡಾ.ಥವಾಪ್ರಕಾಶ್‌ ಪಾಂಡ್ಯನ್‌, ತೋಟಗಾರಿಕೆ ವಿಜ್ಞಾನಿ ಡಾ.ಭವಿಷ್ಯ ,ಕೀಟ ಶಾಸ್ತ್ರಜ್ಞ  ಡಾ.ಶಿವಾಜಿ ತುಬೆ ಅವರ ತಂಡ ಮರ್ಕಂಜದ ವಿವಿಧ ತೋಟಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರೋಗದಿಂದ ತೋಟದೊಳಗೆ ತುದಿ ಸತ್ತು ಹೋದ ಅಡಿಕೆ ಗಿಡಗಳನ್ನು ವಿಜ್ಞಾನಿಗಳ ತಂಡ ತುಂಡರಿಸಿದಾಗ  ಒಳಗಡೆ ಒಂದು ಸತ್ತು‌ ,ಕೊಳೆಯುತ್ತಿದ್ದ ಕೆಂಪು ಮೂತಿ ದುಂಬಿ ಮತ್ತು ಇನ್ನೊಂದು ಅದರ ಲಾರ್ವಾ ಪ್ರತ್ಯಕ್ಷವಾಗಿದೆ.
ಆದ್ದರಿಂದ ಒಂದೆಡೆ ಈ ರೋಗ ಕಾಣಿಸಿಕೊಂಡರೆ ಇಡೀ ತೋಟ,ಜೊತೆಗೆ ಸುತ್ತ ಮುತ್ತಲಿನವರೂ ಈ ರೋಗದ ನಿಯಂತ್ರಣಕ್ಕಾಗಿ ಕ್ರಮ ಕೈಗೊಳ್ಳುವುದು ಒಳ್ಳೆಯದು ಎಂಬ ಅಭಿಪ್ರಾಯಕ್ಕೆ ಬರಲಾಗಿದೆ.
ಆರಂಭಿಕ ಹಂತದಲ್ಲಿ ನಿಯಂತ್ರಣಕ್ಕಾಗಿ ಬೋರ್ಡೋ ದ್ರಾವಣವನ್ನು ಅಡಿಕೆ ಸೋಗೆಯ ಕೆಳಭಾಗಕ್ಕೆ ಸಿಂಪರಣೆ ಮಾಡಬೇಕು.ತೀವ್ರವಾಗಿ ಒಣಗಿದ ಸೋಗೆಗಳನ್ನು ಕತ್ತರಿಸಬೇಕು.ರೋಗ ತೀವ್ರತೆ ಹೆಚ್ಚಿರುವ ತೋಟಗಳಿಗೆ ಬೋರ್ಡೋ ಮಿಶ್ರಣವನ್ನು ಗೊನೆಗಳಿಗೆ ಸಿಂಪರಣೆ ಮಾಡುವಾಗ ಎಲೆಗಳಿಗೂ ಸಿಂಪರಣೆ ಮಾಡುವುದು ಒಳಿತು.ರೋಗ ತೀವ್ರತೆ ಹೆಚ್ಚಿರುವ ತೋಟಗಳಲ್ಲು ಸೋಗೆಗಳ ಕೆಳಭಾಗಕ್ಕೆ Hexaconazole (1ml/l) ಸಿಂಪಡಿಸ ಬಹುದು ಎಂದು ವಿಜ್ಞಾನಿಗಳ ತಂಡ ಸಲಹೆ ನೀಡಿದ್ದಾರೆ.
ಅಡಿಕೆ ಕೃಷಿಕರು  ಹಳದಿ ರೋಗ, ಬೇರು ಹುಳದ ಸಮಸ್ಯೆಯಿಂದ ಬಳಲುತ್ತಿರುವಾಗ ಇದೀಗ ಕಂಡುಬಂದಿರುವ ಈ ಸಮಸ್ಯೆಯ ಕಡೆಗೆ ಕೃಷಿಕರು ಗಮನಹರಿಸಬೇಕಿದೆ ಎಂದು ಕೃಷಿಕ ರಮೇಶ್‌ ದೇಲಂಪಾಡಿ ಅವರು  ಹೇಳುತ್ತಾರೆ.
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 17-03-2025 | ಕೆಲವೆಡೆ ತುಂತುರು ಮಳೆ ನಿರೀಕ್ಷೆ | ಮಾರ್ಚ್ ಕೊನೆಯ ವಾರದಲ್ಲಿ ಮಳೆ ಆರಂಭವಾಗುವ ಲಕ್ಷಣ |

ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣದ ಮುನ್ಸೂಚನೆ ಇದೆ. ಮಾರ್ಚ್…

18 hours ago

ಸುನಿತಾ ವಿಲಿಯಮ್ಸ್ ಈ ಸಮಾಜಕ್ಕೆ ಸ್ಫೂರ್ತಿ ಏಕೆ…?

ಸಣ್ಣಪುಟ್ಟ ಸಮಸ್ಯೆಗಳಿಗೆ, ಮುಂದೆ ಆಗಬಹುದಾದ ಅನೇಕ ಸಾಧ್ಯತೆಗಳ ಊಹಾತ್ಮಕ ಘಟನೆಗಳಿಗೆ, ಇನ್ನೂ ಅನೇಕ…

23 hours ago

ಗಗನಯಾನಿ ಸುನಿತಾ ವಿಲಿಯಮ್ಸ್‌ಗೆ 9 ತಿಂಗಳ ಬಾಹ್ಯಾಕಾಶ ವಾಸ | ಭೂಮಿಗೆ ಕರೆತರುವ ಪ್ರಯತ್ನಕ್ಕೆ ಚಾಲನೆ | ನಾಸಾ ಹೇಳಿಕೆ |

ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಕಳೆದ ಒಂಬತ್ತು ತಿಂಗಳಿಗೂ ಹೆಚ್ಚು ಕಾಲ ಸಿಲುಕಿಕೊಂಡಿದ್ದ ಭಾರತೀಯ…

1 day ago

ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಪೋಷಕರನ್ನು ಬಿಟ್ಟು ಮಕ್ಕಳು ನಾಪತ್ತೆ…!

ಆಸ್ತಿಯನ್ನು ತಮ್ಮ ಹೆಸರಿಗೆ ಬರೆಯಿಸಿಕೊಂಡ ನಂತರ, ಪೋಷಕರನ್ನು ಚಿಕಿತ್ಸೆ ನೆಪದಲ್ಲಿ ಆಸ್ಪತ್ರೆಯಲ್ಲಿ ಬಿಟ್ಟು…

1 day ago

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್

ದೇಶದಲ್ಲಿ 90 ಸಾವಿರ ಸರ್ಕಾರಿ ಶಾಲೆಗಳು ಬಂದ್ ಆಗಿವೆ. ಬಿಹಾರ ಮತ್ತು ಉತ್ತರ…

1 day ago

ರಾಜ್ಯದಲ್ಲಿ ಶೀಘ್ರ 5 ಸಾವಿರ ಶಿಕ್ಷಕರ ನೇಮಕ

ಕಲ್ಯಾಣ ಕರ್ನಾಟಕ ಭಾಗದಲ್ಲಿ 1800 ಶಿಕ್ಷಕರು ಸೇರಿದಂತೆ ಒಟ್ಟಾರೆ ರಾಜ್ಯದಲ್ಲಿ 5 ಸಾವಿರ…

1 day ago