ಕಡಬದ ಇಡಾಳದ ಅಡಿಕೆ ತೋಟದಲ್ಲಿ ಅಡಿಕೆ ಸುಳಿಕೊಳೆ ರೋಗ ಪತ್ತೆ | ಸಿ ಪಿ ಸಿ ಆರ್‌ ಐ ವಿಜ್ಞಾನಿಗಳ ತಂಡ ಭೇಟಿ | ಬೆಳೆಗಾರರಿಗೆ ಮುನ್ನೆಚ್ಚರಿಕಾ ಕ್ರಮದ ಮಾಹಿತಿ ನೀಡಿದ ವಿಜ್ಞಾನಿಗಳು |

September 7, 2021
11:17 PM
ಕಡಬ ತಾಲೂಕಿನ ಪೆರಾಬೆ ಗ್ರಾಮ ಇಡಾಳದ ಅಡಿಕೆ ಬೆಳೆಗಾರ ಸುರೇಶ ಅವರ ತೋಟದಲ್ಲಿ  ಮಹಾಳಿ (ಕಾಯಿ ಕೊಳೆರೋಗ), ಚೆಂಡೆ ಕೊಳೆರೋಗ ಮತ್ತು ಸುಳಿ ಕೊಳೆರೋಗ ಪತ್ತೆಯಾಗಿದ್ದು ಸಿ.ಪಿ.ಸಿ.ಆರ್.ಐ ವಿಟ್ಲದ ವಿಜ್ಞಾನಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಮಾರ್ಗಗಳನ್ನು ಸೂಚಿಸಿದರು. ಅಡಿಕೆ ಬೆಳೆಗಾರರು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಕಡಬ ತಾಲೂಕಿನ ಪೆರಾಬೆ ಗ್ರಾಮ ಇಡಾಳದ ಅಡಿಕೆ ಬೆಳೆಗಾರ ಸುರೇಶ ಅವರ ತೋಟದಲ್ಲಿ ಅಡಿಕೆ ಮರಗಳು ಸಿರಿ ಕೊಳೆತು ಕಳೆದ ಕೆಲವು ಸಮಯಗಳಿಂದ ಸಾಯುತ್ತಿದ್ದವು. ಅಡಿಕೆ ಮರ ಹಳದಿ ಬಣ್ಣಕ್ಕೆ ತಿರುಗಿ ಬಳಿಕ ಮರದಮ ಕೊಬೆ ಮುರಿದು ಮರ ಬೀಳುತ್ತಿತ್ತು. ಈ ಸಮಸ್ಯೆ ಬಗ್ಗೆ ಸಿ.ಪಿ.ಸಿ.ಆರ್.ಐ ವಿಟ್ಲದ ವಿಜ್ಞಾನಿಗಳಿಗೆ ಮಾಹಿತಿ ನೀಡಲಾಗಿತ್ತು. ಮಂಗಳವಾರ ವಿಟ್ಲದ ವಿಜ್ಞಾನಿಗಳಾದ ಡಾ. ಥವಪ್ರಕಾಸ ಪಾಂಡಿಯನ್, ಡಾ. ನಾಗರಾಜ, ಎನ್.ಆರ್. ಮತ್ತು ಡಾ. ಭವಿಷ್ಯ ಇವರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಅಧಿಕ ಇಳುವರಿ ನೀಡುತ್ತಿರುವ ಸುಮಂಗಳ ಮತ್ತು ಮೋಹಿತನಗರ್ ತಳಿಗಳಲ್ಲಿ ಮಹಾಳಿ (ಕಾಯಿ ಕೊಳೆರೋಗ), ಚೆಂಡೆ ಕೊಳೆರೋಗ ಮತ್ತು ಸುಳಿ ಕೊಳೆರೋಗವನ್ನು ಗಮನಿಸಲಾಯಿತು. ಅಲ್ಲದೆ, ಪೋಷಕಾಂಶಗಳ ಅಸಮತೋಲನ ಉಂಟಾಗಿ ಸೂಕ್ಷ್ಮ ಪೋಷಕಾಂಶವಾದ ಸತುವಿನ ಕೊರತೆಯನ್ನು ವಿಜ್ಞಾನಿಗಳ ತಂಡ ಗಮನಿಸಿದರು.
ಅಡಿಕೆಗೆ ಬಾಧಿಸುವ ಕೊಳೆರೋಗವನ್ನು ಉಂಟುಮಾಡುವ ಫೈಟೋಪ್ತೋರ ಮೀಡೀ ಎನ್ನುವ ಶಿಲೀಂಧ್ರವು ಚಂಡೆಕೊಳೆ ಮತ್ತು ಸುಳಿಕೊಳೆರೋಗವನ್ನು ಕೂಡ ಉಂಟುಮಾಡುತ್ತದೆ. ಸಾಮಾನ್ಯವಾಗಿ ಇವು ಆಗಸ್ಟ್ ನಂತರದಲ್ಲಿ ಕಂಡುಬಂದರೂ, ಸುರೇಶ್‌ ಅವರ ತೋಟದಲ್ಲಿ ಜೂಲೈ ತಿಂಗಳ ಕೊನೆಯಲ್ಲಿ ಕಂಡುಬಂದಿದ್ದು ವಿಶೇಷವಾಗಿದೆ. ಚಂಡೆಕೊಳೆ ರೋಗದಲ್ಲಿ ಮೊದಲು ಕುಬೆಯ ಕೆಳ ಭಾಗದ ಎಲೆಗಳು ಹಳದಿಯಾಗುತ್ತದೆ, ನಂತರ ಕ್ರಮೇಣ ಮೇಲ್ಭಾಗದ ಎಲೆಗಲೂ ಹಳದಿಯಾಗಿ ಬಾಗುತ್ತವೆ. ಕೊನೆಗೆ, ಹೊಸ ಎಲೆ ಮತ್ತು ತಿರಿ ಕೂಡ ಹಳದಿಯಾಗಿ ಪೂರ್ತಿ ಚೆಂಡೆಯೇ ಮುರಿದು ಬೀಳಬಹುದು.  ಸುಳಿ ಕೊಳೆರೋಗದಲ್ಲಿ ಮೊದಲು ಸುಳಿ ಹಳದಿಯಾಗಿ ನಂತರ ಒಣಗಿ, ಬಾಗುತ್ತದೆ. ಮೆಲ್ಲನೆ ಎಳೆದಾಗ ಸುಳಿಯು ಹೊರಬರುವುದಲ್ಲದೆ ಕೆಟ್ಟ ವಾಸನೆಯಿಂದ ಕೂಡಿರುತ್ತದೆ. ಸುಳಿಗೆ ತೊಂದರೆಯಾದ ನಂತರ ಬೆಳವಣಿಗೆಯಾಗದೆ ಮರವು ಸತ್ತು ಹೋಗುತ್ತದೆ.
ಸುಳಿಯು ಹಳದಿಯಾದರೆ ಅಥವಾ ಚಂಡೆಯ (ಕುಬೆ) ಕೆಳಭಾಗದ ಎಲೆಗಳು ಹಳದಿಯಾದರೆ ಮುಂದಿನ ಸುತ್ತಿನ ಬೋರ್ಡೋ ಮಿಶ್ರಣವನ್ನು ಗೊನೆಗೆ ಸಿಂಪರಣೆ ಮಾಡುವಾಗ ಕುಬೆಗೆ ಕೂಡ ತಪ್ಪದೆ ಸಿಂಪರಣೆ ಮಾಡಬೇಕು. ಈ ರೀತಿ ರೋಗ ಬಂದು ಸತ್ತು ಹೋದ ಮರಗಳನ್ನು ತೆಗೆದು ತೋಟದಿಂದ ಹೊರ ಹಾಕುವುದು ಒಳ್ಳೆಯದು. ಕಾಂಡವು ಪೊಟಾಷ್ ಆಗರವಾದುದರಿಂದ ಸಾಧ್ಯವಾದರೆ ಸುಟ್ಟು, ಬೂದಿಯನ್ನು ಅಡಿಕೆ ಮರಗಳಿಗೆ ಹಾಕಬಹುದು. ಮುಂದಿನ ವರ್ಷಗಳಲ್ಲಿ ಬೋರ್ಡೋ ಮಿಶ್ರಣವನ್ನು ಗೊನೆಗಳಿಗೆ ಸಿಂಪರಣೆ ಮಾಡುವಾಗ ಕನಿಷ್ಟ ಎರಡು ಸುತ್ತಿನ ಸಿಂಪರಣೆಯನ್ನು ಕುಬೆಗೆ ಕೂಡ ನೀಡುವುದು ಮುಖ್ಯ. ಕನಿಷ್ಠ, ರೋಗ ಬಂದ ಮರದ ಸುತ್ತ ಮುತ್ತಲಿನ ಮರಗಳ ಕುಬೆಗೆ ಬೋರ್ಡೋ ಮಿಶ್ರಣವನ್ನು ಸಿಂಪರಣೆ ಮಾಡುವುದು ಹಾಗೂ ರೋಗ ಬಂದು ಸತ್ತ ಮರಗಳನ್ನು ನಿರ್ಮೂಲನೆ ಮಾಡುವುದು ಮುಖ್ಯವೆಂದು ರೋಗಶಾಸ್ತ್ರಜ್ಞ ಡಾ. ಥವಪ್ರಕಾಸ್ ಪಾಂಡಿಯನ್ ತಿಳಿಸಿದರು.
ಸಂಕೀರ್ಣ ರಸಗೊಬ್ಬರದ ಬಳಕೆ ಹೆಚ್ಚಾಗಿ ಸೂಕ್ಷ್ಮಾ ಪೋಷಕಾಂಶವಾದ ಸತುವಿನ ಕೊರತೆಯ ಲಕ್ಷಣವಾದ ಚೆಂಡೆ ಬಾಗುವಿಕೆ, ಒರೆಗೆಣ್ಣು ಮತ್ತು ಮುಂಡುತಿರಿಗೆ ಸಂಕೀರ್ಣ ರಸಗೊಬ್ಬರದ ಬಳಕೆ ಬದಲು ನೇರ ಗೊಬ್ಬರಗಳಾದ  ಯೂರಿಯ, ರಾಕ್ ಫಾಸ್ಫೇಟ್ ಮತ್ತು ಪೊಟಾಷ್ ಬಳಕೆ  ಮಾಡುವಂತೆ ಡಾ. ನಾಗರಾಜ, ಎನ್.ಆರ್ ತಿಳಿಸಿದರು. ಕುರಿಗೊಬ್ಬರ   ಬಳಸುವುದಾದರೆ ಕಾಂಪೋಸ್ಟ್ ಮಾಡಿ ಬಳಸಿ. ಜೊತೆಗೆ 200ಗ್ರಾಂ ರಾಕ್ ಫಾಸ್ಫೇಟ್, 220ಗ್ರಾಂ ಯೂರಿಯ ಮತ್ತು 350ಗ್ರಾಂ ಪೊಟಾಷ್ ಬಳಸುವಂತೆ ವಿಜ್ಞಾನಿಗಳು ಸೂಚಿಸಿದರು. ಯೂರಿಯ ಮತ್ತು ಪೊಟಾಷ್ ಗೊಬ್ಬರವನ್ನು ಆದಷ್ಟು ಹೆಚ್ಚು ಕಂತುಗಳಲ್ಲಿ ಹಾಕುವುದು (3-4), ಹಾಗೂ ಸತುವಿನ ಸಲ್ಫೇಟ್ (10ಗ್ರಾಂ) ಮತ್ತು ಬೊರಾಕ್ಸ್ (5ಗ್ರಾಂ) ಗೊಬ್ಬರಗಳನ್ನು ಡಿಸೆಂಬರ್ ತಿಂಗಳಲ್ಲಿ ಬಳಕೆ ಮಾಡುವಂತೆ ಡಾ. ಭವಿಷ್ಯ ತಿಳಿಸಿದರು.
ರೋಗಗಳಿಗೆ ತಕ್ಷಣ ಪರಿಹಾರ
ರೋಗ ಲಕ್ಷಣ ಇರುವ ಮರಗಳಿಗೆ ತಕ್ಷಣ Metalaxyl ಹಾಗೂ Mancozeb(2g/Ltr) ಸಿಂಪಡಣೆ ಮಾಡುವುದು ಹಾಗೂ ಅಡಿಕೆ ಗೊನೆಗೆ ಮುಂದಿನ ಸುತ್ತಿನ ಬೋರ್ಡೋ ಸಿಂಪಡಣೆ ವೇಳೆ ಕುಬೆಗೆ ಕೂಡಾ ಔಷಧಿ ಸಿಂಪಡಣೆ ಮಾಡುವುದು ಉತ್ತಮ  – ಡಾ.ಭವಿಷ್ಯ, ವಿಜ್ಞಾನಿ

Advertisement
Advertisement
Advertisement

Advertisement

Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ
May 22, 2025
10:27 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್
May 22, 2025
9:50 PM
by: The Rural Mirror ಸುದ್ದಿಜಾಲ
ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ
May 22, 2025
9:45 PM
by: ದ ರೂರಲ್ ಮಿರರ್.ಕಾಂ
ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ

ಪ್ರಮುಖ ಸುದ್ದಿ

MIRROR FOCUS

ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ
May 22, 2025
10:27 PM
by: ದ ರೂರಲ್ ಮಿರರ್.ಕಾಂ
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ
May 22, 2025
10:27 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್
May 22, 2025
9:50 PM
by: The Rural Mirror ಸುದ್ದಿಜಾಲ
ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ
May 22, 2025
9:45 PM
by: ದ ರೂರಲ್ ಮಿರರ್.ಕಾಂ
ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ
May 22, 2025
9:39 PM
by: The Rural Mirror ಸುದ್ದಿಜಾಲ

Editorial pick

ಕನಿಷ್ಠ ಬೆಂಬಲ ಬೆಲೆಯಲ್ಲಿ ಸೂರ್ಯಕಾಂತಿ ಖರೀದಿ ಪ್ರಕ್ರಿಯೆ ಶೀಘ್ರ ಆರಂಭ
May 16, 2025
9:38 PM
by: The Rural Mirror ಸುದ್ದಿಜಾಲ
ಕದನ ವಿರಾಮ ಘೋಷಣೆ | ಭಾರತ ಮತ್ತು ಪಾಕಿಸ್ತಾನ ಗಡಿಯಾಚೆಗಿನ ದಾಳಿಯನ್ನು ಕೊನೆಗೊಳಿಸಲು ಒಪ್ಪಿಕೊಂಡಿವೆ
May 10, 2025
7:42 PM
by: The Rural Mirror ಸುದ್ದಿಜಾಲ
ಸಹಜ ಸಾವನ್ನಪ್ಪುವ ಕಾಡುಪ್ರಾಣಿಗಳನ್ನು ಸುಡುವಂತಿಲ್ಲ | ಪ್ರಕೃತಿ ಚಕ್ರ ಕಾಪಾಡಲು ಸಹಕಾರಿ | ರಾಜ್ಯ ಸರ್ಕಾರದಿಂದ ಸುತ್ತೋಲೆ
May 5, 2025
10:56 PM
by: ದ ರೂರಲ್ ಮಿರರ್.ಕಾಂ

ವಿಡಿಯೋ

ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ
ಭಾವತೀರ ಯಾನ ತಂಡದ ಸಂದರ್ಶನ
March 2, 2025
7:41 AM
by: ದ ರೂರಲ್ ಮಿರರ್.ಕಾಂ
ವಳಲಂಬೆ ಜಾತ್ರೆ
March 2, 2025
7:39 AM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಸಂಪಾಜೆಯಲ್ಲಿ ಮಹಿಳಾ ಗ್ರಾಮಸಭೆ | ವಿವಿಧ ಮಾಹಿತಿ -ತರಬೇತಿ
May 22, 2025
10:48 PM
by: The Rural Mirror ಸುದ್ದಿಜಾಲ
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಲಭ್ಯ
May 22, 2025
10:27 PM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನಲ್ಲಿ ಕಸ ವಿಲೇವಾರಿಗೆ 4,790 ಕೋಟಿ ಮೊತ್ತದಲ್ಲಿ 33 ಪ್ಯಾಕೇಜ್
May 22, 2025
9:50 PM
by: The Rural Mirror ಸುದ್ದಿಜಾಲ
ರಾಜ್ಯದ ಜೇನಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ
May 22, 2025
9:45 PM
by: ದ ರೂರಲ್ ಮಿರರ್.ಕಾಂ
ಬಿಬಿಎಂಪಿ ವ್ಯಾಪ್ತಿಯಲ್ಲಿ ಇತ್ತೀಚಿಗೆ ಸುರಿದ ಮಳೆಗೆ 63 ಕೆರೆಗಳು ಭರ್ತಿ
May 22, 2025
9:39 PM
by: The Rural Mirror ಸುದ್ದಿಜಾಲ
ವಿದ್ಯುತ್ ಮೇಲಿನ ಬಡ್ಡಿ ಮನ್ನಾ ಮಾಡಲು ನಿರ್ಧಾರ | ಸಂಪುಟ ಅನುಮೋದನೆ
May 22, 2025
9:33 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಮಾರುಕಟ್ಟೆ ಏನಾಯ್ತು..? | ವಿಘ್ನೇಶ್ವರ ಭಟ್‌ ವರ್ಮುಡಿ ಅವರ ವಿಶ್ಲೇಷಣೆ …
May 22, 2025
8:43 PM
by: The Rural Mirror ಸುದ್ದಿಜಾಲ
ದೇಸಿ ತಳಿಗಳ ಸಂರಕ್ಷಣೆ ಮತ್ತು ಉತ್ತೇಜನ ಕಾರ್ಯಕ್ರಮ
May 22, 2025
8:02 PM
by: The Rural Mirror ಸುದ್ದಿಜಾಲ
ಹವಾಮಾನ ವರದಿ | 22-05-2025 | ಮೇ ಕೊನೆಯ ತನಕವೂ ಉತ್ತಮ ಮಳೆ ಸಾಧ್ಯತೆ | ಇನ್ನೊಮ್ಮೆ ವಾಯುಭಾರ ಕುಸಿತದ ಲಕ್ಷಣ |
May 22, 2025
2:37 PM
by: ಸಾಯಿಶೇಖರ್ ಕರಿಕಳ
ಅಕಾಲಿಕ ಮಳೆ | ಮಾವು ಇಳುವರಿ ಕುಸಿತ | ಬೆಲೆ ಕುಸಿತ | ರೈತರಿಗೆ ನಿರಾಸೆ |
May 22, 2025
7:33 AM
by: The Rural Mirror ಸುದ್ದಿಜಾಲ

ವಿಶೇಷ ವರದಿ

ಹಾಳೆತಟ್ಟೆಯ ಬಳಿಕ ಈಗ ಮಾವಿನಹಣ್ಣು | ಭಾರತದ 15 ಮಾವಿನ ಹಣ್ಣು ಶಿಪ್‌ಮೆಂಟ್‌ಗಳನ್ನು ತಿರಸ್ಕರಿಸಿದ ಅಮೇರಿಕಾ |
May 21, 2025
7:45 AM
by: The Rural Mirror ಸುದ್ದಿಜಾಲ
ಯುದ್ಧ ಆದರೆ ಕೃಷಿ ಉತ್ಪನ್ನಗಳ ಧಾರಣೆ ಏನಾಗಬಹುದು?
May 6, 2025
7:44 AM
by: ಡಾ|ವಿಘ್ನೇಶ್ವರ ಭಟ್‌ ವರ್ಮುಡಿ
ಅಡಿಕೆ ಬೆಳೆಗೆ ಉತ್ತಮ ಧಾರಣೆಯ ಸಂತಸದಲ್ಲಿ ಚಾಮರಾಜನಗರ ರೈತರು | ಚಾಲಿ ಅಡಿಕೆ ಧಾರಣೆ ಏರಿಕೆಯ ನಿರೀಕ್ಷೆಯಲ್ಲಿ ಮಲೆನಾಡು ಭಾಗದ ಬೆಳೆಗಾರರು | ಧಾರಣೆ ಏರಿಕೆಯ ಬಗ್ಗೆ ತಜ್ಞರ ಅಭಿಪ್ರಾಯ |
May 3, 2025
7:01 AM
by: ದ ರೂರಲ್ ಮಿರರ್.ಕಾಂ
ಕಣ್ಣಿಗೆ ಬಟ್ಟೆ ಕಟ್ಟಿ 6 ನಿಮಿಷದಲ್ಲಿ 112 ವಸ್ತುಗಳನ್ನು ಗುರುತಿಸಿದ ಬಾಲಕಿ | ಇಂಡಿಯಾ ಬುಕ್ ಆಫ್ ರೆಕಾರ್ಡ್ ಗೆ ಸೇರ್ಪಡೆ |
April 27, 2025
11:17 AM
by: The Rural Mirror ಸುದ್ದಿಜಾಲ

OPINION

ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ
May 22, 2025
7:17 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಶಾಲೆ ಆರಂಭ | ಯೋಜಿತ ಮತ್ತು ಪರಿಣಾಮಕಾರಿ ಆರಂಭದ ಅಗತ್ಯ
May 22, 2025
7:17 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ಅಡಿಕೆ ಹಾಳೆ ಉದ್ದಿಮೆ-ಮಾರುಕಟ್ಟೆ ಮತ್ತು ಪರಿಣಾಮ
May 18, 2025
8:00 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ
ವಾರಣಾಸಿ ಎಂಬ ದ್ವಂದ್ವಗಳ ನಗರ
May 16, 2025
1:02 PM
by: ರಮೇಶ್‌ ದೇಲಂಪಾಡಿ
ಪುಟ್ಟ ಚಿಟ್ಟೆ | ಭಾವ ತಟ್ಟಿದ ದಿಟ್ಟೆ
May 16, 2025
12:40 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group