Advertisement
ಕೃಷಿ

ಕಡಬದ ಇಡಾಳದ ಅಡಿಕೆ ತೋಟದಲ್ಲಿ ಅಡಿಕೆ ಸುಳಿಕೊಳೆ ರೋಗ ಪತ್ತೆ | ಸಿ ಪಿ ಸಿ ಆರ್‌ ಐ ವಿಜ್ಞಾನಿಗಳ ತಂಡ ಭೇಟಿ | ಬೆಳೆಗಾರರಿಗೆ ಮುನ್ನೆಚ್ಚರಿಕಾ ಕ್ರಮದ ಮಾಹಿತಿ ನೀಡಿದ ವಿಜ್ಞಾನಿಗಳು |

Share
ಕಡಬ ತಾಲೂಕಿನ ಪೆರಾಬೆ ಗ್ರಾಮ ಇಡಾಳದ ಅಡಿಕೆ ಬೆಳೆಗಾರ ಸುರೇಶ ಅವರ ತೋಟದಲ್ಲಿ  ಮಹಾಳಿ (ಕಾಯಿ ಕೊಳೆರೋಗ), ಚೆಂಡೆ ಕೊಳೆರೋಗ ಮತ್ತು ಸುಳಿ ಕೊಳೆರೋಗ ಪತ್ತೆಯಾಗಿದ್ದು ಸಿ.ಪಿ.ಸಿ.ಆರ್.ಐ ವಿಟ್ಲದ ವಿಜ್ಞಾನಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಮಾರ್ಗಗಳನ್ನು ಸೂಚಿಸಿದರು. ಅಡಿಕೆ ಬೆಳೆಗಾರರು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಕಡಬ ತಾಲೂಕಿನ ಪೆರಾಬೆ ಗ್ರಾಮ ಇಡಾಳದ ಅಡಿಕೆ ಬೆಳೆಗಾರ ಸುರೇಶ ಅವರ ತೋಟದಲ್ಲಿ ಅಡಿಕೆ ಮರಗಳು ಸಿರಿ ಕೊಳೆತು ಕಳೆದ ಕೆಲವು ಸಮಯಗಳಿಂದ ಸಾಯುತ್ತಿದ್ದವು. ಅಡಿಕೆ ಮರ ಹಳದಿ ಬಣ್ಣಕ್ಕೆ ತಿರುಗಿ ಬಳಿಕ ಮರದಮ ಕೊಬೆ ಮುರಿದು ಮರ ಬೀಳುತ್ತಿತ್ತು. ಈ ಸಮಸ್ಯೆ ಬಗ್ಗೆ ಸಿ.ಪಿ.ಸಿ.ಆರ್.ಐ ವಿಟ್ಲದ ವಿಜ್ಞಾನಿಗಳಿಗೆ ಮಾಹಿತಿ ನೀಡಲಾಗಿತ್ತು. ಮಂಗಳವಾರ ವಿಟ್ಲದ ವಿಜ್ಞಾನಿಗಳಾದ ಡಾ. ಥವಪ್ರಕಾಸ ಪಾಂಡಿಯನ್, ಡಾ. ನಾಗರಾಜ, ಎನ್.ಆರ್. ಮತ್ತು ಡಾ. ಭವಿಷ್ಯ ಇವರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಅಧಿಕ ಇಳುವರಿ ನೀಡುತ್ತಿರುವ ಸುಮಂಗಳ ಮತ್ತು ಮೋಹಿತನಗರ್ ತಳಿಗಳಲ್ಲಿ ಮಹಾಳಿ (ಕಾಯಿ ಕೊಳೆರೋಗ), ಚೆಂಡೆ ಕೊಳೆರೋಗ ಮತ್ತು ಸುಳಿ ಕೊಳೆರೋಗವನ್ನು ಗಮನಿಸಲಾಯಿತು. ಅಲ್ಲದೆ, ಪೋಷಕಾಂಶಗಳ ಅಸಮತೋಲನ ಉಂಟಾಗಿ ಸೂಕ್ಷ್ಮ ಪೋಷಕಾಂಶವಾದ ಸತುವಿನ ಕೊರತೆಯನ್ನು ವಿಜ್ಞಾನಿಗಳ ತಂಡ ಗಮನಿಸಿದರು.
ಅಡಿಕೆಗೆ ಬಾಧಿಸುವ ಕೊಳೆರೋಗವನ್ನು ಉಂಟುಮಾಡುವ ಫೈಟೋಪ್ತೋರ ಮೀಡೀ ಎನ್ನುವ ಶಿಲೀಂಧ್ರವು ಚಂಡೆಕೊಳೆ ಮತ್ತು ಸುಳಿಕೊಳೆರೋಗವನ್ನು ಕೂಡ ಉಂಟುಮಾಡುತ್ತದೆ. ಸಾಮಾನ್ಯವಾಗಿ ಇವು ಆಗಸ್ಟ್ ನಂತರದಲ್ಲಿ ಕಂಡುಬಂದರೂ, ಸುರೇಶ್‌ ಅವರ ತೋಟದಲ್ಲಿ ಜೂಲೈ ತಿಂಗಳ ಕೊನೆಯಲ್ಲಿ ಕಂಡುಬಂದಿದ್ದು ವಿಶೇಷವಾಗಿದೆ. ಚಂಡೆಕೊಳೆ ರೋಗದಲ್ಲಿ ಮೊದಲು ಕುಬೆಯ ಕೆಳ ಭಾಗದ ಎಲೆಗಳು ಹಳದಿಯಾಗುತ್ತದೆ, ನಂತರ ಕ್ರಮೇಣ ಮೇಲ್ಭಾಗದ ಎಲೆಗಲೂ ಹಳದಿಯಾಗಿ ಬಾಗುತ್ತವೆ. ಕೊನೆಗೆ, ಹೊಸ ಎಲೆ ಮತ್ತು ತಿರಿ ಕೂಡ ಹಳದಿಯಾಗಿ ಪೂರ್ತಿ ಚೆಂಡೆಯೇ ಮುರಿದು ಬೀಳಬಹುದು.  ಸುಳಿ ಕೊಳೆರೋಗದಲ್ಲಿ ಮೊದಲು ಸುಳಿ ಹಳದಿಯಾಗಿ ನಂತರ ಒಣಗಿ, ಬಾಗುತ್ತದೆ. ಮೆಲ್ಲನೆ ಎಳೆದಾಗ ಸುಳಿಯು ಹೊರಬರುವುದಲ್ಲದೆ ಕೆಟ್ಟ ವಾಸನೆಯಿಂದ ಕೂಡಿರುತ್ತದೆ. ಸುಳಿಗೆ ತೊಂದರೆಯಾದ ನಂತರ ಬೆಳವಣಿಗೆಯಾಗದೆ ಮರವು ಸತ್ತು ಹೋಗುತ್ತದೆ.
ಸುಳಿಯು ಹಳದಿಯಾದರೆ ಅಥವಾ ಚಂಡೆಯ (ಕುಬೆ) ಕೆಳಭಾಗದ ಎಲೆಗಳು ಹಳದಿಯಾದರೆ ಮುಂದಿನ ಸುತ್ತಿನ ಬೋರ್ಡೋ ಮಿಶ್ರಣವನ್ನು ಗೊನೆಗೆ ಸಿಂಪರಣೆ ಮಾಡುವಾಗ ಕುಬೆಗೆ ಕೂಡ ತಪ್ಪದೆ ಸಿಂಪರಣೆ ಮಾಡಬೇಕು. ಈ ರೀತಿ ರೋಗ ಬಂದು ಸತ್ತು ಹೋದ ಮರಗಳನ್ನು ತೆಗೆದು ತೋಟದಿಂದ ಹೊರ ಹಾಕುವುದು ಒಳ್ಳೆಯದು. ಕಾಂಡವು ಪೊಟಾಷ್ ಆಗರವಾದುದರಿಂದ ಸಾಧ್ಯವಾದರೆ ಸುಟ್ಟು, ಬೂದಿಯನ್ನು ಅಡಿಕೆ ಮರಗಳಿಗೆ ಹಾಕಬಹುದು. ಮುಂದಿನ ವರ್ಷಗಳಲ್ಲಿ ಬೋರ್ಡೋ ಮಿಶ್ರಣವನ್ನು ಗೊನೆಗಳಿಗೆ ಸಿಂಪರಣೆ ಮಾಡುವಾಗ ಕನಿಷ್ಟ ಎರಡು ಸುತ್ತಿನ ಸಿಂಪರಣೆಯನ್ನು ಕುಬೆಗೆ ಕೂಡ ನೀಡುವುದು ಮುಖ್ಯ. ಕನಿಷ್ಠ, ರೋಗ ಬಂದ ಮರದ ಸುತ್ತ ಮುತ್ತಲಿನ ಮರಗಳ ಕುಬೆಗೆ ಬೋರ್ಡೋ ಮಿಶ್ರಣವನ್ನು ಸಿಂಪರಣೆ ಮಾಡುವುದು ಹಾಗೂ ರೋಗ ಬಂದು ಸತ್ತ ಮರಗಳನ್ನು ನಿರ್ಮೂಲನೆ ಮಾಡುವುದು ಮುಖ್ಯವೆಂದು ರೋಗಶಾಸ್ತ್ರಜ್ಞ ಡಾ. ಥವಪ್ರಕಾಸ್ ಪಾಂಡಿಯನ್ ತಿಳಿಸಿದರು.
ಸಂಕೀರ್ಣ ರಸಗೊಬ್ಬರದ ಬಳಕೆ ಹೆಚ್ಚಾಗಿ ಸೂಕ್ಷ್ಮಾ ಪೋಷಕಾಂಶವಾದ ಸತುವಿನ ಕೊರತೆಯ ಲಕ್ಷಣವಾದ ಚೆಂಡೆ ಬಾಗುವಿಕೆ, ಒರೆಗೆಣ್ಣು ಮತ್ತು ಮುಂಡುತಿರಿಗೆ ಸಂಕೀರ್ಣ ರಸಗೊಬ್ಬರದ ಬಳಕೆ ಬದಲು ನೇರ ಗೊಬ್ಬರಗಳಾದ  ಯೂರಿಯ, ರಾಕ್ ಫಾಸ್ಫೇಟ್ ಮತ್ತು ಪೊಟಾಷ್ ಬಳಕೆ  ಮಾಡುವಂತೆ ಡಾ. ನಾಗರಾಜ, ಎನ್.ಆರ್ ತಿಳಿಸಿದರು. ಕುರಿಗೊಬ್ಬರ   ಬಳಸುವುದಾದರೆ ಕಾಂಪೋಸ್ಟ್ ಮಾಡಿ ಬಳಸಿ. ಜೊತೆಗೆ 200ಗ್ರಾಂ ರಾಕ್ ಫಾಸ್ಫೇಟ್, 220ಗ್ರಾಂ ಯೂರಿಯ ಮತ್ತು 350ಗ್ರಾಂ ಪೊಟಾಷ್ ಬಳಸುವಂತೆ ವಿಜ್ಞಾನಿಗಳು ಸೂಚಿಸಿದರು. ಯೂರಿಯ ಮತ್ತು ಪೊಟಾಷ್ ಗೊಬ್ಬರವನ್ನು ಆದಷ್ಟು ಹೆಚ್ಚು ಕಂತುಗಳಲ್ಲಿ ಹಾಕುವುದು (3-4), ಹಾಗೂ ಸತುವಿನ ಸಲ್ಫೇಟ್ (10ಗ್ರಾಂ) ಮತ್ತು ಬೊರಾಕ್ಸ್ (5ಗ್ರಾಂ) ಗೊಬ್ಬರಗಳನ್ನು ಡಿಸೆಂಬರ್ ತಿಂಗಳಲ್ಲಿ ಬಳಕೆ ಮಾಡುವಂತೆ ಡಾ. ಭವಿಷ್ಯ ತಿಳಿಸಿದರು.
ರೋಗಗಳಿಗೆ ತಕ್ಷಣ ಪರಿಹಾರ
ರೋಗ ಲಕ್ಷಣ ಇರುವ ಮರಗಳಿಗೆ ತಕ್ಷಣ Metalaxyl ಹಾಗೂ Mancozeb(2g/Ltr) ಸಿಂಪಡಣೆ ಮಾಡುವುದು ಹಾಗೂ ಅಡಿಕೆ ಗೊನೆಗೆ ಮುಂದಿನ ಸುತ್ತಿನ ಬೋರ್ಡೋ ಸಿಂಪಡಣೆ ವೇಳೆ ಕುಬೆಗೆ ಕೂಡಾ ಔಷಧಿ ಸಿಂಪಡಣೆ ಮಾಡುವುದು ಉತ್ತಮ  – ಡಾ.ಭವಿಷ್ಯ, ವಿಜ್ಞಾನಿ
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕಡಲಾಮೆಗಳ ಸಂತಾನೋತ್ಪತ್ತಿಗೆ ಅರಣ್ಯ ಇಲಾಖೆ ರಕ್ಷಣೆ | ಬಾವಳ ಕಡಲತೀರದಲ್ಲಿ ಸಂತೋಷದ ಕ್ಷಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…

8 hours ago

ಮಂಗಳೂರಿನಲ್ಲಿ ಸಮುದ್ರ ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆಗೆ ಸಂಸದರಿಂದ ಒತ್ತಾಯ

ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…

8 hours ago

ಕರಾವಳಿ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಆಗ್ರಹ | ಕರಾವಳಿ ಜಿಲ್ಲೆಗಳ ಅಭಿವೃದ್ಧಿಗೆ ಸಮಗ್ರ ದೃಷ್ಟಿ ಅಗತ್ಯ

ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್‌ನಲ್ಲಿ ನೀಡಬೇಕೆಂದು…

1 day ago

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

2 days ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

2 days ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

2 days ago