ಅಡಿಕೆ ಧಾರಣೆ ಏರಿಕೆಯ ನಡುವೆ ಇರಲಿ ಎಚ್ಚರ | ಗುಜರಾತಲ್ಲಿ ಅಡಿಕೆ ವ್ಯಾಪಾರಿಗೆ 59 ಲಕ್ಷ ರೂಪಾಯಿ ವಂಚನೆಯ ದೂರು |

September 26, 2021
2:46 PM

ಗುಜರಾತಿನ ಅಹಮದಾಬಾದ್‌ ಸಿಂಧುಭವನ್‌ ಪ್ರದೇಶದಲ್ಲಿ ನೀರವ್ ಭರತಭಾಯ್ ಪಟೇಲ್ ಎಂಬವರಿಗೆ ಅಡಿಕೆ ಖರೀದಿ ವ್ಯವಹಾರದಲ್ಲಿ ಸುಮಾರು 59 ಲಕ್ಷ ರೂಪಾಯಿ ವಂಚಿಸಿದ ಬಗ್ಗೆ ಅಹಮದಾಬಾದ್‌ ಪೊಲೀಸರಿಗೆ ದೂರು ನೀಡಿದ್ದಾರೆ.

ಮಾಧವಪುರದಲ್ಲಿ ಸೌರಾಷ್ಟ್ರ ಟ್ರೇಡರ್ಸ್ ಮೂಲಕ ಅಡಿಕೆ ವ್ಯವಹಾರ ನಡೆಸುತ್ತಿರುವ ಮೆಹುಲ್ ಖೈರಯ್ಯ ಅವರು ವಂಚಿಸಿ ಮುಂಬಯಿಗೆ ತೆರಳಿದ್ದಾರೆ ಎಂದು ದೂರಿನಲ್ಲಿ  ತಿಳಿಸಿದ್ದಾರೆ. ಕಳೆದ 11 ತಿಂಗಳಿನಿಂದ ಅಡಿಕೆ ವ್ಯಾಪಾರ ಮಾಡುತ್ತಿದ್ದ ಮೆಹುಲ್ ಖೈರಯ್ಯ ಅವರು ಅಡಿಕೆ ಖರೀದಿಸಿ ಕೂಡಲೇ ಹಣ ನೀಡುತ್ತಿದ್ದರು. ಒಟ್ಟು ಸುಮಾರು 1.5 ಕೋಟಿ ಮೌಲ್ಯದ ಅಡಿಕೆ ಖರೀದಿಸಿದ ನಂತರ ಆಗಾಗ ಹಣ ಪಾವತಿ ಮಾಡುತ್ತಿದ್ದರು. ಈಚೆಗೆ ಅಡಿಕೆ ಖರೀದಿ ಮಾಡಿದ 59 ಲಕ್ಷ ವಂಚಿಸಿ ಮುಂಬಯಿಗೆ ಪರಾರಿಯಾಗಿದ್ದಾರೆ ಎಂದು ಭರತಭಾಯ್ ಪಟೇಲ್ ದೂರಿನಲ್ಲಿ  ತಿಳಿಸಿದ್ದಾರೆ.

ಅಹಮದಾಬಾದ್‌ ನ ಸಿಂಧುಭವನ್‌ ಪ್ರದೇಶದಲ್ಲಿ ನೀರವ್ ಭರತಭಾಯ್ ಪಟೇಲ್ ಹಲವು ಸಮಯಗಳಿಂದ ಅಡಿಕೆ ವ್ಯಾಪಾರ ನಡೆಸುತ್ತಿದ್ದಾರೆ. ಈಚೆಗೆ ಸುಮಾರು 11 ತಿಂಗಳುಗಳ ಹಿಂದೆ ಮುಂಬಯಿ ಮೂಲದ ಮೆಹುಲ್ ರಮೇಶ್ ಭಾಯ್ ಖೈರಯ್ಯ  ಅವರ ಪರಿಚಯವಾಗಿ ಅಡಿಕೆ ಮಾರಾಟದ ವ್ಯವಹಾರ ಮಾಡುತ್ತಿದ್ದರು. ಆರಂಭದಲ್ಲಿ  ಅಡಿಕೆ ಸ್ಯಾಂಪಲ್‌ ಎಂದು ಖರೀದಿ ಮಾಡಿ ಉತ್ತಮ ರೇಟು ನೀಡಿದ್ದರು. ಇದೀಗ 6  ತಿಂಗಳಿನಿಂದ ವಂಚಿಸಿ ಪರಾರಿಯಾಗಿದ್ದಾರೆ, ಈ ಬಗ್ಗೆ ಹಣ ಪಾವತಿ ಮಾಡುವ ಭರವಸೆಯನ್ನು  ಕಳೆದ ಎರಡು ತಿಂಗಳಿನಿಂದ ನೀಡಿ ಇದೀಗ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ  ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror