ಸುದ್ದಿಗಳು

ಅಡಿಕೆ ಧಾರಣೆ ಏರಿಕೆಯ ನಡುವೆ ಇರಲಿ ಎಚ್ಚರ | ಗುಜರಾತಲ್ಲಿ ಅಡಿಕೆ ವ್ಯಾಪಾರಿಗೆ 59 ಲಕ್ಷ ರೂಪಾಯಿ ವಂಚನೆಯ ದೂರು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗುಜರಾತಿನ ಅಹಮದಾಬಾದ್‌ ಸಿಂಧುಭವನ್‌ ಪ್ರದೇಶದಲ್ಲಿ ನೀರವ್ ಭರತಭಾಯ್ ಪಟೇಲ್ ಎಂಬವರಿಗೆ ಅಡಿಕೆ ಖರೀದಿ ವ್ಯವಹಾರದಲ್ಲಿ ಸುಮಾರು 59 ಲಕ್ಷ ರೂಪಾಯಿ ವಂಚಿಸಿದ ಬಗ್ಗೆ ಅಹಮದಾಬಾದ್‌ ಪೊಲೀಸರಿಗೆ ದೂರು ನೀಡಿದ್ದಾರೆ.

Advertisement
Advertisement

ಮಾಧವಪುರದಲ್ಲಿ ಸೌರಾಷ್ಟ್ರ ಟ್ರೇಡರ್ಸ್ ಮೂಲಕ ಅಡಿಕೆ ವ್ಯವಹಾರ ನಡೆಸುತ್ತಿರುವ ಮೆಹುಲ್ ಖೈರಯ್ಯ ಅವರು ವಂಚಿಸಿ ಮುಂಬಯಿಗೆ ತೆರಳಿದ್ದಾರೆ ಎಂದು ದೂರಿನಲ್ಲಿ  ತಿಳಿಸಿದ್ದಾರೆ. ಕಳೆದ 11 ತಿಂಗಳಿನಿಂದ ಅಡಿಕೆ ವ್ಯಾಪಾರ ಮಾಡುತ್ತಿದ್ದ ಮೆಹುಲ್ ಖೈರಯ್ಯ ಅವರು ಅಡಿಕೆ ಖರೀದಿಸಿ ಕೂಡಲೇ ಹಣ ನೀಡುತ್ತಿದ್ದರು. ಒಟ್ಟು ಸುಮಾರು 1.5 ಕೋಟಿ ಮೌಲ್ಯದ ಅಡಿಕೆ ಖರೀದಿಸಿದ ನಂತರ ಆಗಾಗ ಹಣ ಪಾವತಿ ಮಾಡುತ್ತಿದ್ದರು. ಈಚೆಗೆ ಅಡಿಕೆ ಖರೀದಿ ಮಾಡಿದ 59 ಲಕ್ಷ ವಂಚಿಸಿ ಮುಂಬಯಿಗೆ ಪರಾರಿಯಾಗಿದ್ದಾರೆ ಎಂದು ಭರತಭಾಯ್ ಪಟೇಲ್ ದೂರಿನಲ್ಲಿ  ತಿಳಿಸಿದ್ದಾರೆ.

ಅಹಮದಾಬಾದ್‌ ನ ಸಿಂಧುಭವನ್‌ ಪ್ರದೇಶದಲ್ಲಿ ನೀರವ್ ಭರತಭಾಯ್ ಪಟೇಲ್ ಹಲವು ಸಮಯಗಳಿಂದ ಅಡಿಕೆ ವ್ಯಾಪಾರ ನಡೆಸುತ್ತಿದ್ದಾರೆ. ಈಚೆಗೆ ಸುಮಾರು 11 ತಿಂಗಳುಗಳ ಹಿಂದೆ ಮುಂಬಯಿ ಮೂಲದ ಮೆಹುಲ್ ರಮೇಶ್ ಭಾಯ್ ಖೈರಯ್ಯ  ಅವರ ಪರಿಚಯವಾಗಿ ಅಡಿಕೆ ಮಾರಾಟದ ವ್ಯವಹಾರ ಮಾಡುತ್ತಿದ್ದರು. ಆರಂಭದಲ್ಲಿ  ಅಡಿಕೆ ಸ್ಯಾಂಪಲ್‌ ಎಂದು ಖರೀದಿ ಮಾಡಿ ಉತ್ತಮ ರೇಟು ನೀಡಿದ್ದರು. ಇದೀಗ 6  ತಿಂಗಳಿನಿಂದ ವಂಚಿಸಿ ಪರಾರಿಯಾಗಿದ್ದಾರೆ, ಈ ಬಗ್ಗೆ ಹಣ ಪಾವತಿ ಮಾಡುವ ಭರವಸೆಯನ್ನು  ಕಳೆದ ಎರಡು ತಿಂಗಳಿನಿಂದ ನೀಡಿ ಇದೀಗ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ  ತಿಳಿಸಿದ್ದಾರೆ.
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-05-2025 | ಮೇ. 31ರಿಂದ ಕಡಿಮೆಯಾಗಿ ಜೂನ್ 3 ರ ತನಕ ಸಾಮಾನ್ಯ ಮಳೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಾಗಲಿರುವ ವಾಯುಭಾರ ಕುಸಿತವು ನಾಳೆ ಬಂಗ್ಲಾ ದೇಶದ…

3 hours ago

ಶಶಿ ಆದಿತ್ಯ ಯೋಗ, ಈ 5 ರಾಶಿಗೆ ಬೇಡವೆಂದರೂ ಲಾಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490  

6 hours ago

ಪ್ರವಾಸಿಗರು ಚಾರಣ, ನದಿ ತೀರ ಹೋಗದಂತೆ  ಸೂಚನೆ

ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ…

18 hours ago

ಕೇರಳದಾದ್ಯಂತ ತೀವ್ರಗೊಂಡ ನೈಋತ್ಯ ಮಾನ್ಸೂನ್ | ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆ | ಆಲುವಾ ಶಿವ ದೇವಾಲಯದಲ್ಲಿ ನೀರು |

ಮಳೆಯ ಕಾರಣದಿಂದ ಪೆರಿಯಾರ್ ನದಿಯ ನೀರಿನ ಮಟ್ಟ ಏರಿಕೆಯಾಗಿದೆ. ಹೀಗಾಗಿ ಆಲುವಾ ಶಿವ ದೇವಾಲಯದ…

1 day ago

ಹವಾಮಾನ ವರದಿ | 27-05-2025 | ಜೂ.3 ರವರೆಗೂ ಮಳೆ | ಮೇ.28 ರಿಂದ ಮತ್ತೆ ಮಳೆ ಚುರುಕು | ಮಳೆಯ ತೀವ್ರತೆ ಕಡಿಮೆ |

ಬಂಗಾಳಕೊಲ್ಲಿಯ ಪಶ್ಚಿಮ ಬಂಗಾಳ ಕರಾವಳಿಯಲ್ಲಿ ಉಂಟಗಿರುವ ವಾಯುಭಾರ ಕುಸಿತವು ಮುಂದಿನ 3 ಅಥವಾ…

1 day ago

ಭಾರತದಲ್ಲಿ ಅಡಿಕೆಯ ಬಳಕೆ ಹೇಗೆ..? ಯಾವುದೆಲ್ಲಾ ವಿಭಾಗಗಳು ಇವೆ..? ಮಾರುಕಟ್ಟೆ ಹೇಗೆ..?

ಅಡಿಕೆಯ ಬಹು ಪಾಲು ಬೀಡ, ಸಿಹಿ ಸುಪಾರಿ, ಗುಟ್ಕಾ,ಪಾನ್ ಮಸಾಲ ಇತ್ಯಾದಿಗಳ ತಯಾರಿಯಲ್ಲಿ…

1 day ago