Advertisement
ಸುದ್ದಿಗಳು

ಅಡಿಕೆ ಧಾರಣೆ ಏರಿಕೆಯ ನಡುವೆ ಇರಲಿ ಎಚ್ಚರ | ಗುಜರಾತಲ್ಲಿ ಅಡಿಕೆ ವ್ಯಾಪಾರಿಗೆ 59 ಲಕ್ಷ ರೂಪಾಯಿ ವಂಚನೆಯ ದೂರು |

Share

ಗುಜರಾತಿನ ಅಹಮದಾಬಾದ್‌ ಸಿಂಧುಭವನ್‌ ಪ್ರದೇಶದಲ್ಲಿ ನೀರವ್ ಭರತಭಾಯ್ ಪಟೇಲ್ ಎಂಬವರಿಗೆ ಅಡಿಕೆ ಖರೀದಿ ವ್ಯವಹಾರದಲ್ಲಿ ಸುಮಾರು 59 ಲಕ್ಷ ರೂಪಾಯಿ ವಂಚಿಸಿದ ಬಗ್ಗೆ ಅಹಮದಾಬಾದ್‌ ಪೊಲೀಸರಿಗೆ ದೂರು ನೀಡಿದ್ದಾರೆ.

ಮಾಧವಪುರದಲ್ಲಿ ಸೌರಾಷ್ಟ್ರ ಟ್ರೇಡರ್ಸ್ ಮೂಲಕ ಅಡಿಕೆ ವ್ಯವಹಾರ ನಡೆಸುತ್ತಿರುವ ಮೆಹುಲ್ ಖೈರಯ್ಯ ಅವರು ವಂಚಿಸಿ ಮುಂಬಯಿಗೆ ತೆರಳಿದ್ದಾರೆ ಎಂದು ದೂರಿನಲ್ಲಿ  ತಿಳಿಸಿದ್ದಾರೆ. ಕಳೆದ 11 ತಿಂಗಳಿನಿಂದ ಅಡಿಕೆ ವ್ಯಾಪಾರ ಮಾಡುತ್ತಿದ್ದ ಮೆಹುಲ್ ಖೈರಯ್ಯ ಅವರು ಅಡಿಕೆ ಖರೀದಿಸಿ ಕೂಡಲೇ ಹಣ ನೀಡುತ್ತಿದ್ದರು. ಒಟ್ಟು ಸುಮಾರು 1.5 ಕೋಟಿ ಮೌಲ್ಯದ ಅಡಿಕೆ ಖರೀದಿಸಿದ ನಂತರ ಆಗಾಗ ಹಣ ಪಾವತಿ ಮಾಡುತ್ತಿದ್ದರು. ಈಚೆಗೆ ಅಡಿಕೆ ಖರೀದಿ ಮಾಡಿದ 59 ಲಕ್ಷ ವಂಚಿಸಿ ಮುಂಬಯಿಗೆ ಪರಾರಿಯಾಗಿದ್ದಾರೆ ಎಂದು ಭರತಭಾಯ್ ಪಟೇಲ್ ದೂರಿನಲ್ಲಿ  ತಿಳಿಸಿದ್ದಾರೆ.

ಅಹಮದಾಬಾದ್‌ ನ ಸಿಂಧುಭವನ್‌ ಪ್ರದೇಶದಲ್ಲಿ ನೀರವ್ ಭರತಭಾಯ್ ಪಟೇಲ್ ಹಲವು ಸಮಯಗಳಿಂದ ಅಡಿಕೆ ವ್ಯಾಪಾರ ನಡೆಸುತ್ತಿದ್ದಾರೆ. ಈಚೆಗೆ ಸುಮಾರು 11 ತಿಂಗಳುಗಳ ಹಿಂದೆ ಮುಂಬಯಿ ಮೂಲದ ಮೆಹುಲ್ ರಮೇಶ್ ಭಾಯ್ ಖೈರಯ್ಯ  ಅವರ ಪರಿಚಯವಾಗಿ ಅಡಿಕೆ ಮಾರಾಟದ ವ್ಯವಹಾರ ಮಾಡುತ್ತಿದ್ದರು. ಆರಂಭದಲ್ಲಿ  ಅಡಿಕೆ ಸ್ಯಾಂಪಲ್‌ ಎಂದು ಖರೀದಿ ಮಾಡಿ ಉತ್ತಮ ರೇಟು ನೀಡಿದ್ದರು. ಇದೀಗ 6  ತಿಂಗಳಿನಿಂದ ವಂಚಿಸಿ ಪರಾರಿಯಾಗಿದ್ದಾರೆ, ಈ ಬಗ್ಗೆ ಹಣ ಪಾವತಿ ಮಾಡುವ ಭರವಸೆಯನ್ನು  ಕಳೆದ ಎರಡು ತಿಂಗಳಿನಿಂದ ನೀಡಿ ಇದೀಗ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ  ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

6 minutes ago

ರಸ್ತೆ ಬದಿ ಕಸ ಎಸೆದ್ರೆ ಜಾಗ್ರತೆ..! ದಂಡ ಕೊಡ್ಲಿಲ್ಲ ಅಂದ್ರೆ FIR ಫಿಕ್ಸ್..!

ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…

4 hours ago

ಹವಾಮಾನ ವರದಿ | 02-04-2026 | ಕರಾವಳಿಯಲ್ಲಿ ಮಳೆ ಅನಿಶ್ಚಿತತೆ, ಒಳನಾಡಿನಲ್ಲಿ ಬಿಸಿಲು

ಕರಾವಳಿಯಲ್ಲಿ ಮಳೆಯ ಸಾಧ್ಯತೆ ಇದ್ದರೂ ಗಾಳಿಯ ಪ್ರಭಾವದಿಂದ ಅದು ಕಡಿಮೆಯಾಗಬಹುದು. ಉಳಿದ ಕರ್ನಾಟಕದಲ್ಲಿ…

22 hours ago

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ

ಅಡಿಕೆ ಮಾರುಕಟ್ಟೆ ಸ್ಥಿರದಿಂದ ಏರಿಕೆಯತ್ತ ಸಾಗುತ್ತಿದೆ. ಜೂನ್-ಜುಲೈನಲ್ಲಿ ಬೆಲೆ ಹೆಚ್ಚಾಗುವ ಸಾಧ್ಯತೆ ಇದೆ.

1 day ago

ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ

ಏಪ್ರಿಲ್ 1ರಿಂದ 15ರವರೆಗೆ ಸ್ವಯಂ-ಎಣಿಕೆ ಆರಂಭವಾಗಿದೆ. ಏಪ್ರಿಲ್ 16ರಿಂದ ಮನೆಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!

ಏಪ್ರಿಲ್ 4ರವರೆಗೆ ಮಳೆ ಮುಂದುವರಿಯಲಿದೆ, ಬಳಿಕ ತಾತ್ಕಾಲಿಕ ಕಡಿಮೆ. ಏಪ್ರಿಲ್ 10ರಿಂದ ಮತ್ತೆ…

2 days ago