ಗುಜರಾತಿನ ಅಹಮದಾಬಾದ್ ಸಿಂಧುಭವನ್ ಪ್ರದೇಶದಲ್ಲಿ ನೀರವ್ ಭರತಭಾಯ್ ಪಟೇಲ್ ಎಂಬವರಿಗೆ ಅಡಿಕೆ ಖರೀದಿ ವ್ಯವಹಾರದಲ್ಲಿ ಸುಮಾರು 59 ಲಕ್ಷ ರೂಪಾಯಿ ವಂಚಿಸಿದ ಬಗ್ಗೆ ಅಹಮದಾಬಾದ್ ಪೊಲೀಸರಿಗೆ ದೂರು ನೀಡಿದ್ದಾರೆ.
ಮಾಧವಪುರದಲ್ಲಿ ಸೌರಾಷ್ಟ್ರ ಟ್ರೇಡರ್ಸ್ ಮೂಲಕ ಅಡಿಕೆ ವ್ಯವಹಾರ ನಡೆಸುತ್ತಿರುವ ಮೆಹುಲ್ ಖೈರಯ್ಯ ಅವರು ವಂಚಿಸಿ ಮುಂಬಯಿಗೆ ತೆರಳಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಕಳೆದ 11 ತಿಂಗಳಿನಿಂದ ಅಡಿಕೆ ವ್ಯಾಪಾರ ಮಾಡುತ್ತಿದ್ದ ಮೆಹುಲ್ ಖೈರಯ್ಯ ಅವರು ಅಡಿಕೆ ಖರೀದಿಸಿ ಕೂಡಲೇ ಹಣ ನೀಡುತ್ತಿದ್ದರು. ಒಟ್ಟು ಸುಮಾರು 1.5 ಕೋಟಿ ಮೌಲ್ಯದ ಅಡಿಕೆ ಖರೀದಿಸಿದ ನಂತರ ಆಗಾಗ ಹಣ ಪಾವತಿ ಮಾಡುತ್ತಿದ್ದರು. ಈಚೆಗೆ ಅಡಿಕೆ ಖರೀದಿ ಮಾಡಿದ 59 ಲಕ್ಷ ವಂಚಿಸಿ ಮುಂಬಯಿಗೆ ಪರಾರಿಯಾಗಿದ್ದಾರೆ ಎಂದು ಭರತಭಾಯ್ ಪಟೇಲ್ ದೂರಿನಲ್ಲಿ ತಿಳಿಸಿದ್ದಾರೆ.
ಅಹಮದಾಬಾದ್ ನ ಸಿಂಧುಭವನ್ ಪ್ರದೇಶದಲ್ಲಿ ನೀರವ್ ಭರತಭಾಯ್ ಪಟೇಲ್ ಹಲವು ಸಮಯಗಳಿಂದ ಅಡಿಕೆ ವ್ಯಾಪಾರ ನಡೆಸುತ್ತಿದ್ದಾರೆ. ಈಚೆಗೆ ಸುಮಾರು 11 ತಿಂಗಳುಗಳ ಹಿಂದೆ ಮುಂಬಯಿ ಮೂಲದ ಮೆಹುಲ್ ರಮೇಶ್ ಭಾಯ್ ಖೈರಯ್ಯ ಅವರ ಪರಿಚಯವಾಗಿ ಅಡಿಕೆ ಮಾರಾಟದ ವ್ಯವಹಾರ ಮಾಡುತ್ತಿದ್ದರು. ಆರಂಭದಲ್ಲಿ ಅಡಿಕೆ ಸ್ಯಾಂಪಲ್ ಎಂದು ಖರೀದಿ ಮಾಡಿ ಉತ್ತಮ ರೇಟು ನೀಡಿದ್ದರು. ಇದೀಗ 6 ತಿಂಗಳಿನಿಂದ ವಂಚಿಸಿ ಪರಾರಿಯಾಗಿದ್ದಾರೆ, ಈ ಬಗ್ಗೆ ಹಣ ಪಾವತಿ ಮಾಡುವ ಭರವಸೆಯನ್ನು ಕಳೆದ ಎರಡು ತಿಂಗಳಿನಿಂದ ನೀಡಿ ಇದೀಗ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಬಾವಳದಲ್ಲಿ ಕಡಲಾಮೆ ಮೊಟ್ಟೆಯಿಂದ ಹೊರ ಬಂದ…
ದಕ್ಷಿಣ ಕನ್ನಡದಲ್ಲಿ ಗುಣಮಟ್ಟದ ಮೀನು ಮರಿ ಕೊರತೆ ನೀಗಿಸಲು ಮಂಗಳೂರಿನಲ್ಲಿ Marine Finfish…
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…