Advertisement
ಸುದ್ದಿಗಳು

ಅಡಿಕೆ ಧಾರಣೆ ಏರಿಕೆಯ ನಡುವೆ ಇರಲಿ ಎಚ್ಚರ | ಗುಜರಾತಲ್ಲಿ ಅಡಿಕೆ ವ್ಯಾಪಾರಿಗೆ 59 ಲಕ್ಷ ರೂಪಾಯಿ ವಂಚನೆಯ ದೂರು |

Share

ಗುಜರಾತಿನ ಅಹಮದಾಬಾದ್‌ ಸಿಂಧುಭವನ್‌ ಪ್ರದೇಶದಲ್ಲಿ ನೀರವ್ ಭರತಭಾಯ್ ಪಟೇಲ್ ಎಂಬವರಿಗೆ ಅಡಿಕೆ ಖರೀದಿ ವ್ಯವಹಾರದಲ್ಲಿ ಸುಮಾರು 59 ಲಕ್ಷ ರೂಪಾಯಿ ವಂಚಿಸಿದ ಬಗ್ಗೆ ಅಹಮದಾಬಾದ್‌ ಪೊಲೀಸರಿಗೆ ದೂರು ನೀಡಿದ್ದಾರೆ.

ಮಾಧವಪುರದಲ್ಲಿ ಸೌರಾಷ್ಟ್ರ ಟ್ರೇಡರ್ಸ್ ಮೂಲಕ ಅಡಿಕೆ ವ್ಯವಹಾರ ನಡೆಸುತ್ತಿರುವ ಮೆಹುಲ್ ಖೈರಯ್ಯ ಅವರು ವಂಚಿಸಿ ಮುಂಬಯಿಗೆ ತೆರಳಿದ್ದಾರೆ ಎಂದು ದೂರಿನಲ್ಲಿ  ತಿಳಿಸಿದ್ದಾರೆ. ಕಳೆದ 11 ತಿಂಗಳಿನಿಂದ ಅಡಿಕೆ ವ್ಯಾಪಾರ ಮಾಡುತ್ತಿದ್ದ ಮೆಹುಲ್ ಖೈರಯ್ಯ ಅವರು ಅಡಿಕೆ ಖರೀದಿಸಿ ಕೂಡಲೇ ಹಣ ನೀಡುತ್ತಿದ್ದರು. ಒಟ್ಟು ಸುಮಾರು 1.5 ಕೋಟಿ ಮೌಲ್ಯದ ಅಡಿಕೆ ಖರೀದಿಸಿದ ನಂತರ ಆಗಾಗ ಹಣ ಪಾವತಿ ಮಾಡುತ್ತಿದ್ದರು. ಈಚೆಗೆ ಅಡಿಕೆ ಖರೀದಿ ಮಾಡಿದ 59 ಲಕ್ಷ ವಂಚಿಸಿ ಮುಂಬಯಿಗೆ ಪರಾರಿಯಾಗಿದ್ದಾರೆ ಎಂದು ಭರತಭಾಯ್ ಪಟೇಲ್ ದೂರಿನಲ್ಲಿ  ತಿಳಿಸಿದ್ದಾರೆ.

ಅಹಮದಾಬಾದ್‌ ನ ಸಿಂಧುಭವನ್‌ ಪ್ರದೇಶದಲ್ಲಿ ನೀರವ್ ಭರತಭಾಯ್ ಪಟೇಲ್ ಹಲವು ಸಮಯಗಳಿಂದ ಅಡಿಕೆ ವ್ಯಾಪಾರ ನಡೆಸುತ್ತಿದ್ದಾರೆ. ಈಚೆಗೆ ಸುಮಾರು 11 ತಿಂಗಳುಗಳ ಹಿಂದೆ ಮುಂಬಯಿ ಮೂಲದ ಮೆಹುಲ್ ರಮೇಶ್ ಭಾಯ್ ಖೈರಯ್ಯ  ಅವರ ಪರಿಚಯವಾಗಿ ಅಡಿಕೆ ಮಾರಾಟದ ವ್ಯವಹಾರ ಮಾಡುತ್ತಿದ್ದರು. ಆರಂಭದಲ್ಲಿ  ಅಡಿಕೆ ಸ್ಯಾಂಪಲ್‌ ಎಂದು ಖರೀದಿ ಮಾಡಿ ಉತ್ತಮ ರೇಟು ನೀಡಿದ್ದರು. ಇದೀಗ 6  ತಿಂಗಳಿನಿಂದ ವಂಚಿಸಿ ಪರಾರಿಯಾಗಿದ್ದಾರೆ, ಈ ಬಗ್ಗೆ ಹಣ ಪಾವತಿ ಮಾಡುವ ಭರವಸೆಯನ್ನು  ಕಳೆದ ಎರಡು ತಿಂಗಳಿನಿಂದ ನೀಡಿ ಇದೀಗ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ  ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಗ್ರಾಮೀಣ ಭಾರತದ ಆದಾಯಕ್ಕೆ ಹಿನ್ನಡೆ – ಕಳೆದ ವರ್ಷ ಅರ್ಧದಷ್ಟು ಕುಟುಂಬಗಳ ಆದಾಯದಲ್ಲಿ ಏರಿಕೆಯಾಗಿಲ್ಲ

ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…

6 hours ago

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

15 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

15 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

17 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

20 hours ago