Advertisement
ಸುದ್ದಿಗಳು

ಅಡಿಕೆ ಧಾರಣೆ ಏರಿಕೆಯ ನಡುವೆ ಇರಲಿ ಎಚ್ಚರ | ಗುಜರಾತಲ್ಲಿ ಅಡಿಕೆ ವ್ಯಾಪಾರಿಗೆ 59 ಲಕ್ಷ ರೂಪಾಯಿ ವಂಚನೆಯ ದೂರು |

Share

ಗುಜರಾತಿನ ಅಹಮದಾಬಾದ್‌ ಸಿಂಧುಭವನ್‌ ಪ್ರದೇಶದಲ್ಲಿ ನೀರವ್ ಭರತಭಾಯ್ ಪಟೇಲ್ ಎಂಬವರಿಗೆ ಅಡಿಕೆ ಖರೀದಿ ವ್ಯವಹಾರದಲ್ಲಿ ಸುಮಾರು 59 ಲಕ್ಷ ರೂಪಾಯಿ ವಂಚಿಸಿದ ಬಗ್ಗೆ ಅಹಮದಾಬಾದ್‌ ಪೊಲೀಸರಿಗೆ ದೂರು ನೀಡಿದ್ದಾರೆ.

ಮಾಧವಪುರದಲ್ಲಿ ಸೌರಾಷ್ಟ್ರ ಟ್ರೇಡರ್ಸ್ ಮೂಲಕ ಅಡಿಕೆ ವ್ಯವಹಾರ ನಡೆಸುತ್ತಿರುವ ಮೆಹುಲ್ ಖೈರಯ್ಯ ಅವರು ವಂಚಿಸಿ ಮುಂಬಯಿಗೆ ತೆರಳಿದ್ದಾರೆ ಎಂದು ದೂರಿನಲ್ಲಿ  ತಿಳಿಸಿದ್ದಾರೆ. ಕಳೆದ 11 ತಿಂಗಳಿನಿಂದ ಅಡಿಕೆ ವ್ಯಾಪಾರ ಮಾಡುತ್ತಿದ್ದ ಮೆಹುಲ್ ಖೈರಯ್ಯ ಅವರು ಅಡಿಕೆ ಖರೀದಿಸಿ ಕೂಡಲೇ ಹಣ ನೀಡುತ್ತಿದ್ದರು. ಒಟ್ಟು ಸುಮಾರು 1.5 ಕೋಟಿ ಮೌಲ್ಯದ ಅಡಿಕೆ ಖರೀದಿಸಿದ ನಂತರ ಆಗಾಗ ಹಣ ಪಾವತಿ ಮಾಡುತ್ತಿದ್ದರು. ಈಚೆಗೆ ಅಡಿಕೆ ಖರೀದಿ ಮಾಡಿದ 59 ಲಕ್ಷ ವಂಚಿಸಿ ಮುಂಬಯಿಗೆ ಪರಾರಿಯಾಗಿದ್ದಾರೆ ಎಂದು ಭರತಭಾಯ್ ಪಟೇಲ್ ದೂರಿನಲ್ಲಿ  ತಿಳಿಸಿದ್ದಾರೆ.

Advertisement
ಅಹಮದಾಬಾದ್‌ ನ ಸಿಂಧುಭವನ್‌ ಪ್ರದೇಶದಲ್ಲಿ ನೀರವ್ ಭರತಭಾಯ್ ಪಟೇಲ್ ಹಲವು ಸಮಯಗಳಿಂದ ಅಡಿಕೆ ವ್ಯಾಪಾರ ನಡೆಸುತ್ತಿದ್ದಾರೆ. ಈಚೆಗೆ ಸುಮಾರು 11 ತಿಂಗಳುಗಳ ಹಿಂದೆ ಮುಂಬಯಿ ಮೂಲದ ಮೆಹುಲ್ ರಮೇಶ್ ಭಾಯ್ ಖೈರಯ್ಯ  ಅವರ ಪರಿಚಯವಾಗಿ ಅಡಿಕೆ ಮಾರಾಟದ ವ್ಯವಹಾರ ಮಾಡುತ್ತಿದ್ದರು. ಆರಂಭದಲ್ಲಿ  ಅಡಿಕೆ ಸ್ಯಾಂಪಲ್‌ ಎಂದು ಖರೀದಿ ಮಾಡಿ ಉತ್ತಮ ರೇಟು ನೀಡಿದ್ದರು. ಇದೀಗ 6  ತಿಂಗಳಿನಿಂದ ವಂಚಿಸಿ ಪರಾರಿಯಾಗಿದ್ದಾರೆ, ಈ ಬಗ್ಗೆ ಹಣ ಪಾವತಿ ಮಾಡುವ ಭರವಸೆಯನ್ನು  ಕಳೆದ ಎರಡು ತಿಂಗಳಿನಿಂದ ನೀಡಿ ಇದೀಗ ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ  ತಿಳಿಸಿದ್ದಾರೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಜೂನ್ 26ರವರೆಗೆ ಭಾರೀದಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆ ಇದೆ…

15 hours ago

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ

ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಕಾಪರ್ ಸಲ್ಫೇಟ್ ಕೊರತೆ, ಬೆಳೆ ವಿಮೆ ವಿಳಂಬ, ಕಳಪೆ…

17 hours ago

ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ

ಜೂನ್ 25ರಿಂದ ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಳ್ಳುವ ಸಾಧ್ಯತೆ ಇದೆ. ಕರಾವಳಿ ಮತ್ತು…

23 hours ago

ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು

ಕೀಟನಾಶಕ ಮತ್ತು ರಾಸಾಯನಿಕ ಗೊಬ್ಬರಗಳ ಅತಿಯಾದ ಬಳಕೆಯಿಂದ ಕೃಷಿ ಹಾಗೂ ಆರೋಗ್ಯಕ್ಕೆ ಹಾನಿಯಾಗುತ್ತಿದೆ…

1 day ago

ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ

ದೇಶದ 13 ರಾಜ್ಯಗಳಿಗೆ ಐಎಂಡಿ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಕರಾವಳಿ ಕರ್ನಾಟಕ…

1 day ago

ಕೆಳದಿ ಶಿವಪ್ಪ ನಾಯಕ ಕೃಷಿ ವಿವಿ ಆಡಳಿತ ಮಂಡಳಿಗೆ ಇಬ್ಬರ ನಾಮನಿರ್ದೇಶನ

ಶಿವಮೊಗ್ಗದ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಆಡಳಿತ…

2 days ago