Advertisement
ಸುದ್ದಿಗಳು

ಅಂತರಾಷ್ಟ್ರೀಯ ಮಟ್ಟದಲ್ಲಿ ಮತ್ತೆ ಸುದ್ದಿ ಮಾಡಿದ ಅಡಿಕೆ | ಅಡಿಕೆ ಜಾಹೀರಾತು ನಿಷೇಧ ಹೇರಿದ ಚೀನಾ |

Share

ಅಡಿಕೆ ಎಂದಾಕ್ಷಣ ಅದು ಸೀಮಿತ ಪ್ರದೇಶದ ಬೆಳೆಯಲ್ಲ. ಬಹುಪ್ರದೇಶದಲ್ಲಿ ವ್ಯಾಪಿಸಿಕೊಂಡಿದೆ, ಈಗಲೂ ವ್ಯಾಪಿಸುತ್ತಿದೆ.  ಅಂತರಾಷ್ಟ್ರೀಯ ಮಟ್ಟದಲ್ಲಿ ನಿಗದಿತ ದರ ಇಲ್ಲದೇ ಇದ್ದರೂ ಈಗ ಅಡಿಕೆ ಅಂತರಾಷ್ಟ್ರೀಯ ಮಟ್ಟದ  ವಿಷಯ. ಅಂತರಾಷ್ಟ್ರೀಯ ಮಟ್ಟದಲ್ಲಿ  ಚರ್ಚೆಯಾಗುತ್ತಲೇ ಇರುತ್ತದೆ. ಈಗಲೂ ಮತ್ತೆ ಚರ್ಚೆ ಶುರುವಾಗಿದೆ. ಪ್ರತೀ ಬಾರಿಯೂ ಅಡಿಕೆ ಧಾರಣೆ ಏರಿಕೆಯಾದಾಗಲೂ ಇಂತಹದ್ದೇ ಚರ್ಚೆಯಾಗಿದೆ. ಈಗಲೂ ಚರ್ಚೆ ಆರಂಭವಾಗಿದೆ. ಅದರ ಮೊದಲ ಹಂತವೇ ಚೀನಾದಲ್ಲಿ ಅಡಿಕೆ ಜಾಹೀರಾತು ನಿಷೇಧ….!.

Advertisement

ಚೀನಾದ ಹುನಾನ್ ಪ್ರಾಂತ್ಯವು ಅಡಿಕೆ ಬಳಕೆಯ ಅತಿದೊಡ್ಡ ಪ್ರದೇಶ.  ಚೀನಾ ಬಿಸಿನೆಸ್ ಟೈಮ್ಸ್‌ನ ವರದಿಯ ಪ್ರಕಾರ, ಹುನಾನ್‌ನಲ್ಲಿ ಅಡಿಕೆ ಉತ್ಪಾದನೆಯ ಮೌಲ್ಯವನ್ನು 30 ಬಿಲಿಯನ್ ಯುವಾನ್ ಎಂದು ಅಂದಾಜಿಸಲಾಗಿದೆ.

ಅಂತರಾಷ್ಟ್ರೀಯ ಮಟ್ಟದಲ್ಲಿ  ಈಗ ಅಡಿಕೆ ಮತ್ತೆ ಸುದ್ದಿ ಮಾಡಿರುವುದು  ಪ್ರತೀ ಬಾರಿಯಂತೆಯೇ ಕ್ಯಾನ್ಸರ್‌ ಕಾರಕದ ಸುದ್ದಿ. ಚೀನಾ ಸರಕಾರದ ಸಂಸ್ಥೆಯಾದ “ನ್ಯಾಷನಲ್ ರೇಡಿಯೋ ಮತ್ತು ಟೆಲಿವಿಷನ್ ಅಡ್ಮಿನಿಸ್ಟ್ರೇಷನ್”  ಸೆಪ್ಟೆಂಬರ್‌ನಲ್ಲಿ ಅಡಿಕೆ ಬಳಕೆ ಕಡಿಮೆ ಮಾಡುವ ನಿಟ್ಟಿನಲ್ಲಿ ರೇಡಿಯೋ, ಟೆಲಿವಿಷನ್ ಅಥವಾ ಆನ್‌ಲೈನ್ ಶೋಗಳಲ್ಲಿ ಅಡಿಕೆಯ ಎಲ್ಲಾ ಜಾಹೀರಾತುಗಳನ್ನು ನಿಷೇಧಿಸಿತು. ಅಲ್ಲಿಗೇ ಆ ಸಂಗತಿ ಚರ್ಚೆಯಾಗಿ ನಿಂತಿತ್ತು. ಈಗ ಮತ್ತೆ ಮುಂದುವರಿದು ಅಡಿಕೆ ಹಾನಿಕಾರಕ ಎಂದು ಹೇಳಲಾಗಿದೆ. ವರದಿಯೊಂದರಲ್ಲಿ  ಅಡಿಕೆಯನ್ನು ಮಾತ್ರಾ ಜಗಿಯುವುದು  ಹಾನಿಕಾರಕ ಎಂದು ಹೇಳಲಾಗಿದೆ. ಅಡಿಕೆಯನ್ನು  ಜಗಿಯುವವರ ಬಾಯಲ್ಲಿ ಕೆಂಪು ಕಲೆಗಳು ಉಳಿಯುತ್ತವೆ ಅದು ಆರೋಗ್ಯದ ಮೇಲೆ ಹಾನಿಕಾರಕ ಎಂದು ಹೇಳಲಾಗಿದೆ.

ವಿಶ್ವ ಆರೋಗ್ಯ ಸಂಸ್ಥೆಯಿಂದ ಪ್ರಾಯೋಜಿತವಾದ ಅಂತರಾಷ್ಟ್ರೀಯ ಸಂಶೋಧನಾ ಸಂಸ್ಥೆ, ಅಡಿಕೆ ಮತ್ತು ವೀಳ್ಯದ ಎಲೆಗಳನ್ನು ಕಾರ್ಸಿನೋಜೆನ್ ಅಥವಾ ಕ್ಯಾನ್ಸರ್ ಉಂಟುಮಾಡುವ ಏಜೆಂಟ್ ಎಂದು ಪಟ್ಟಿ ಮಾಡಿದೆ. ದೀರ್ಘಾವಧಿಯ ಬಳಕೆಯಿಂದ ಹಲ್ಲಿನ ಹುಣ್ಣುಗಳು, ಗಮ್ ಡಿಜೆನರೇಶನ್ ಮತ್ತು ಬಾಯಿ ಮತ್ತು ಅನ್ನನಾಳದ ಕ್ಯಾನ್ಸರ್ ಉಂಟಾಗಬಹುದು ಎಂದು ಅದು ಹೇಳಿದೆ. ಈಗ ಇದೇ ವರದಿಯನ್ನು ಇರಿಸಿ ವಿವಿಧ ದೇಶಗಳಲ್ಲಿ ವರದಿ ಮಾಡಲಾಗುತ್ತಿದೆ.

ಅಡಿಕೆ ಹಾನಿಕಾರಕ ಅಲ್ಲ :

ಈಗಾಗಲೇ ಭಾರತದಲ್ಲಿ  ಅಡಿಕೆ ಹಾನಿಕಾರಕ ಅಲ್ಲ ಎಂಬ ಬಗ್ಗೆ ವಿವಿಧ ಅಧ್ಯಯನಗಳು ನಡೆದಿವೆ. ಅಡಿಕೆ ಚಹಾ, ಅಡಿಕೆ ಪೇಯ, ಐಸ್‌ ಕ್ರೀಂ ಮೊದಲಾದವುಗಳನ್ನು ತಯಾರಿಸಲಾಗಿದೆ. ಅನೇಕ ವರ್ಷಗಳಿಂದ ಅಡಿಕೆ ಜಗಿಯುವ, ಎಲೆ ಅಡಿಕೆ ತಿನ್ನುವ ಮಂದಿಯ ಅಧ್ಯಯನವನ್ನೂ ನಡೆಸಿದ ವರದಿಯಲ್ಲಿ ಹಾನಿಕಾರಕವಲ್ಲ ಎಂಬ ಅಂಶ ಬಯಲಾಗಿದೆ. ಆದರೆ ಅಧಿಕೃತ ಮಾನ್ಯತೆಗಾಗಿ ವಿವಿಧ ಸಂಸ್ಥೆಗಳು ಪ್ರಯತ್ನ ಮಾಡುತ್ತಿವೆ, ಇನ್ನಷ್ಟು ಅಧ್ಯಯನ ನಡೆಸುತ್ತಿವೆ. ಹೀಗಾಗಿ ಈ ಬಾರಿಯೂ ಅಡಿಕೆ ಧಾರಣೆ ಏರಿಕೆಯ ಜೊತೆಗೇ ಅಡಿಕೆಯ ಬಗ್ಗೆ ಅಪಪ್ರಚಾರವೂ ಹೆಚ್ಚಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ವಿಶೇಷ ಪ್ರತಿನಿಧಿ

ರೂರಲ್‌ ಮಿರರ್‌ ವಿಶೇಷ ಪ್ರತಿನಿಧಿ.

Published by
ವಿಶೇಷ ಪ್ರತಿನಿಧಿ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

2 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

6 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

7 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

7 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

18 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago