Advertisement
MIRROR FOCUS

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

Share

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ ಕಾರಣವಾಗಬಹುದು ಎಂಬ ಹೊಸ ಸಮೀಕ್ಷಾ ಅಧ್ಯಯನವು ಈಗ ಅಡಿಕೆಯ ಬಗ್ಗೆ ಹೊರಹಾಕಿದೆ. ಇತ್ತೀಚೆಗೆ ಪ್ರಕಟವಾದ ಸಮಗ್ರ ವಿಮರ್ಶೆ ಪ್ರಕಾರ, ಅಡಿಕೆಯು ಕ್ಯಾನ್ಸರ್‌, ಹೃದಯ ಸಂಬಂಧಿ ರೋಗಗಳು ಹಾಗೂ ಮೆಟಾಬಾಲಿಕ್ ಸಮಸ್ಯೆಗಳಿಗೂ ನೇರ ಸಂಬಂಧ ಹೊಂದಿದೆಯಂತೆ..!

ಜಾಗತಿಕ ಮಟ್ಟದಲ್ಲಿ ತಂಬಾಕು, ಮದ್ಯ ಮತ್ತು ಕೆಫೀನ್ ನಂತರ ಅಡಿಕೆ ಅತ್ಯಂತ ಹೆಚ್ಚು ಬಳಸುವ ಮನೋಪ್ರೇರಕ ಪದಾರ್ಥವೆಂದು ಗುರುತಿಸಲಾಗಿದೆ. ವಿಶ್ವದಾದ್ಯಂತ ಸುಮಾರು 60 ಕೋಟಿ ಜನರು ನಿಯಮಿತವಾಗಿ ಅಡಿಕೆ ಸೇವಿಸುತ್ತಿದ್ದಾರೆ. ದಕ್ಷಿಣ ಏಷ್ಯಾ ಮತ್ತು ಪಶ್ಚಿಮ ಪೆಸಿಫಿಕ್ ಪ್ರದೇಶಗಳಲ್ಲಿ ಇದರ ಬಳಕೆ ಹೆಚ್ಚು.

ಅಡಿಕೆಯಲ್ಲಿ ಇರುವ ‘ಅರೇಕೋಲಿನ್’ (Arecoline) ಎಂಬ ಆಲ್ಕಲಾಯ್ಡ್ ಮೆದುಳಿನ ವ್ಯವಸ್ಥೆಯನ್ನು ಉದ್ದೀಪನಗೊಳಿಸುತ್ತದೆ. ಇದು ನಿಕೋಟಿನ್‌ ನಂತಹ ಪರಿಣಾಮ ಉಂಟುಮಾಡಿ ಅವಲಂಬನೆ ಹೆಚ್ಚಿಸುತ್ತದೆ. ಇದರ ಪರಿಣಾಮವಾಗಿ ಅಡಿಕೆ ಜಗಿಯುವವರಿಗೆ ಚಟವಾಗುತ್ತದೆ.

ಹೀಗೆ ದೀರ್ಘಕಾಲದ ಅಡಿಕೆ ಜಗಿಯುವುದು ‘ಓರಲ್ ಸಬ್‌ಮ್ಯೂಕಸ್ ಫೈಬ್ರೋಸಿಸ್’ ಸೇರಿದಂತೆ ಬಾಯಿ ಮತ್ತು ಕುತ್ತಿಗೆ ಕ್ಯಾನ್ಸರ್‌ಗೆ ಕಾರಣವಾಗುವ ಸಾಧ್ಯತೆ ಇದೆ. ತಂಬಾಕು ಸೇರಿಸದಿದ್ದರೂ ಅಪಾಯ ಕಡಿಮೆಯಾಗುವುದಿಲ್ಲ ಎಂಬುದು ಅಧ್ಯಯನದ ಅಭಿಪ್ರಾಯ. ಅಷ್ಟೇ ಅಲ್ಲ, ಅಡಿಕೆ ಸೇವನೆ ರಕ್ತದೊತ್ತಡ ಏರಿಕೆ, ಉರಿಯೂತ, ಅಥೆರೋಸ್ಕ್ಲೆರೋಸಿಸ್ ಹಾಗೂ ಇಸ್ಕೆಮಿಕ್ ಹೃದಯ ರೋಗಗಳ ಅಪಾಯವನ್ನು ಹೆಚ್ಚಿಸುತ್ತದೆ ಎಂದು ಸೂಚಿಸಲಾಗಿದೆ. ಇನ್ನು ಇನ್ಸುಲಿನ್ ಪ್ರತಿರೋಧ, ಡಿಸ್ಲಿಪಿಡಿಮಿಯಾ, ಒಬೆಸಿಟಿ ಮತ್ತು ಮೆಟಾಬಾಲಿಕ್ ಸಿಂಡ್ರೋಮ್‌ಗಳಿಗೆ ಅಡಿಕೆ ಸೇವನೆಯ ಸಂಬಂಧ ಕಂಡುಬಂದಿದೆ  ಎಂದು ಈ ವರದಿ ಹೇಳಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಈ ಅಧ್ಯಯನವು ಅಡಿಕೆ ವ್ಯಸನವನ್ನು ಒಂದು ದೊಡ್ಡ ಸಾರ್ವಜನಿಕ ಆರೋಗ್ಯ ಸವಾಲು ಎಂದು ಗುರುತಿಸಿದೆ. ವಿಶೇಷವಾಗಿ ಯುವಜನರಲ್ಲಿ ಅರಿವು ಮೂಡಿಸುವುದು ಮತ್ತು ವ್ಯಸನ ನಿವಾರಣೆಗೆ ವೈಜ್ಞಾನಿಕ ಕ್ರಮಗಳನ್ನು ರೂಪಿಸುವ ಅಗತ್ಯವನ್ನು ಒತ್ತಿಹೇಳಲಾಗಿದೆ.  ಈ ಅಧ್ಯಯನ ವರದಿಯು journal Translational Psychiatry ನಲ್ಲಿ ಪ್ರಕಟವಾಗಿದ್ದು, ಮೆಡಿಕಲ್‌ ನೆಟ್‌ ನಲ್ಲಿ ವಿಶ್ಲೇಷಿಸಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

5 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

9 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

15 hours ago

ಸಂಪತ್ತು ಹೆಚ್ಚಾದರೆ ಬದುಕು ಶ್ರೀಮಂತವಾಗುತ್ತದೆಯೇ..?

ಸಂಪತ್ತು ಮತ್ತು ಸೌಲಭ್ಯಗಳು ಹೆಚ್ಚಿರುವುದೇ ನಿಜವಾದ ಶ್ರೀಮಂತಿಕೆಯಲ್ಲ; ಅವುಗಳನ್ನು ವಿವೇಕದಿಂದ ಬಳಸುವ ಮನಸ್ಸು…

1 day ago

ಹವಾಮಾನ ವರದಿ | 10-09-2026 | ಕರ್ನಾಟಕದಲ್ಲಿ ಮಳೆ ಏಕೆ ಇಳಿಮುಖವಾಗುತ್ತಿದೆ..?

ಸೆ.11ರಿಂದ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗುವ ಲಕ್ಷಣಗಳಿವೆ.…

2 days ago

ರಾಜ್ಯದಲ್ಲಿ ವಿದ್ಯುತ್‌ ಸಂಕಷ್ಟದ ಸುಳಿವು – ರಾತ್ರಿ 6.30 ರಿಂದ 9ರವರೆಗೆ ಪೂರೈಕೆ ವ್ಯತ್ಯಯ ಸಾಧ್ಯತೆ

ದುರ್ಬಲ ಮುಂಗಾರು ಮತ್ತು ಜಲ–ಪವನ ವಿದ್ಯುತ್‌ ಉತ್ಪಾದನೆ ಕುಸಿತದಿಂದ ರಾಜ್ಯದಲ್ಲಿ ವಿದ್ಯುತ್‌ ಪೂರೈಕೆಯ…

2 days ago