Advertisement
ಸುದ್ದಿಗಳು

ಚೀನಾದಲ್ಲಿ ಮತ್ತೆ ಸದ್ದು ಮಾಡಿದ ಅಡಿಕೆ | 36 ವರ್ಷದ ಗಾಯಕನ ಹೇಳಿಕೆ ಮೂಡಿಸಿದ ಸಂಚಲನ |

Share

ಚೀನಾದ ಪ್ರಸಿದ್ಧ ಯುವ ಗಾಯಕ ಫೂ ಸಾಂಗ್ ತನ್ನ 36 ನೇ ವಯಸ್ಸಿನಲ್ಲಿ ಬಾಯಿಯ ಕ್ಯಾನ್ಸರ್‌ನಿಂದ ನಿಧನರಾದರು. ಅದಕ್ಕೂ ಮುನ್ನ ಆತ ಸಾಮಾಜಿಕ ಮಾಧ್ಯಮದಲ್ಲಿ ತನ್ನ ಬಾಯಿ ಕ್ಯಾನ್ಸರ್‌ ಗೆ ಅಡಿಕೆ ಕಾರಣ ಎಂದು ಹೇಳಿದ್ದರು. ಹೀಗಾಗಿ ಈಗ ಚೀನಾದ ಹಲವು ಕಡೆ ಅಡಿಕೆ ಮತ್ತೆ ಸದ್ದು ಮಾಡುತ್ತಿದೆ. ಚೀನಾ ಕೆಲವು ವರ್ಷದ ಹಿಂದೆಯೇ ಅಡಿಕೆ ಜಾಹೀರಾತು ನಿಷೇಧ ಮಾಡಿತ್ತು. ಇದೀಗ ಗಾಯಕನ ಹೇಳಿಕೆ ಬಳಿಕ ಮತ್ತೆ ಅಡಿಕೆ ಸದ್ದು ಮಾಡಲು ಆರಂಭಿಸಿದೆ.

Advertisement
Advertisement

36 ವರ್ಷದ ಗಾಯಕ 6 ವರ್ಷಗಳ ಕಾಲ ಅಡಿಕೆ ಹಾಗೂ ವೀಳ್ಯದೆಲೆಯನ್ನು ಜಗಿಯುತ್ತಿದ್ದರು. ಈ ನಡುವೆ ಬಾಯಿ ಕ್ಯಾನ್ಸರ್‌ ಬಂದಿತ್ತು. ಈ ಒಂದು ಪ್ರಕರಣದ ಮೂಲಕ ಚೀನಾದಲ್ಲಿ ಮತ್ತೆ ಅಡಿಕೆಯ ಮೇಲೆ ಋಣಾತ್ಮಕ ಅಭಿಪ್ರಾಯಗಳು ಹೆಚ್ಚಾಗುತ್ತಿದೆ. ಸೆಪ್ಟೆಂಬರ್ 10, 2022 ರಂದು, ಗಾಯಕ ಫೂ ಸಾಂಗ್  ನಿಧನರಾದರು. ಫೂ ಸಾಂಗ್ ಒಮ್ಮೆ ತನ್ನ ಸಾಮಾಜಿಕ ಮಾಧ್ಯಮದಲ್ಲಿ ತನ್ನ ಬಾಯಿಯ ಕ್ಯಾನ್ಸರ್ ಅಡಿಕೆಯಿಂದ ಉಂಟಾಗಿದೆ ಎಂದು ಹೇಳಿದ್ದರು. ಅಂದಿನಿಂದ,  ಅಡಿಕೆ ಮಾರಾಟವನ್ನು ನಿಷೇಧಿಸುವ ವದಂತಿಯೂ ಹರಿಡಿದೆ. ಸಾರ್ವಜನಿಕ ಅಭಿಪ್ರಾಯವೂ ಈಗ ಅಲ್ಲಿ ಸದ್ದು ಮಾಡುತ್ತಿದೆ. ಹಲವೆಡೆ ಅಡಿಕೆ ಮಾರಾಟವನ್ನು ನಿಷೇಧಿಸಲಾಗಿದೆ. ಸದ್ಯ ಚೀನಾದ ಝೆಜಿಯಾಂಗ್ ಪ್ರಾಂತ್ಯದ ಆಹಾರ ಸುರಕ್ಷತಾ ಅಧಿಕಾರಿಗಳು ಆಹಾರ ಪ್ಯಾಕೇಜಿಂಗ್ ಮತ್ತು ಲೇಬಲ್‌ಗಳೊಂದಿಗೆ  ಅಡಿಕೆ ಉತ್ಪನ್ನಗಳನ್ನು ಮಾರಾಟ ಮಾಡಲು ಅನುಮತಿಸುವುದಿಲ್ಲ ಎಂದು ವರದಿಯಾಗಿದೆ.

Advertisement

ಚೀನಾದ ಅಂಕಿಅಂಶಗಳ ಪ್ರಕಾರ  ಪ್ರಪಂಚದಾದ್ಯಂತ ಸುಮಾರು 600 ಮಿಲಿಯನ್ ಜನರು ಅಡಿಕೆಯನ್ನು ಜಗಿಯುವ ಅಭ್ಯಾಸವನ್ನು ಹೊಂದಿದ್ದಾರೆ. ಚೀನಾದ ಕೆಲವು ಪ್ರದೇಶದಲ್ಲಿ ಮಾತ್ರವೇ ಅಡಿಕೆ ಬೆಳೆಯುತ್ತಾರೆ. ಚೀನಾದ ಹುನಾನ್ ಪ್ರಾಂತ್ಯದಲ್ಲಿ  ಅಡಿಕೆಯನ್ನು ವಾರ್ಷಿಕವಾಗಿ ಸುಮಾರು 2 ಲಕ್ಷ ಟನ್‌ ವರೆಗೆ ಬೆಳೆಯುತ್ತಾರೆ. ಬೇಡಿಕೆಯು 7-8 ಲಕ್ಷ ಟನ್‌ಗಳಷ್ಟಿದೆ. ಚೀನಾದಾದ್ಯಂತ ಅಡಿಕೆ ಮೌತ್ ಫ್ರೆಶ್ನರ್‌   ತಯಾರಕ ಸಂಸ್ಥೆಗಳು 20 ರಷ್ಟು ಇದ್ದಾರೆ. ಇಡೀ ಚೀನಾದಲ್ಲಿ ಅಡಿಕೆ ಬೆಳೆಯುವ ಪ್ರದೇಶ ಕಿರಿದಾಗಿದೆ. ಆದರೆ ಉದ್ಯಮಗಳು ಹೆಚ್ಚಿವೆ. ಈ ಎಲ್ಲದರ ನಡುವೆಯೂ ಅಡಿಕೆಯ ಬಗ್ಗೆ ಋಣಾತ್ಮಕವಾದ ಸಂದೇಶವನ್ನು ಚೀನಾದಲ್ಲಿ ಬಿತ್ತಲಾಗುತ್ತಿದೆ. ಅಷ್ಟೇ ಅಲ್ಲ ಅಂತರಾಷ್ಟ್ರೀಯ ಮಟ್ಟದಲ್ಲೂ ಅಡಿಕೆಯ ಮೇಲೆ ಪರಿಣಾಮವಾಗುವಂತೆ ಅಲ್ಲಿ ಪ್ರಯತ್ನವಾಗುತ್ತಿದ್ದು ವಿಶ್ವ ಆರೋಗ್ಯ ಸಂಸ್ಥೆಯ ಗಮನಕ್ಕೂ ತರಲಾಗುತ್ತಿದೆ.

 

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮೇ.2 | ಸಾಯಿನಿಕೇತನ ಸೇವಾಶ್ರಮದಲ್ಲಿ ಕಟ್ಟಡ ಉದ್ಘಾಟನೆ

ಕಾಸರಗೋಡು ಜಿಲ್ಲೆಯ ದೈಗೋಳಿಯಲ್ಲಿರುವ ಸಾಯಿನಿಕೇತನ ಸೇವಾಶ್ರಮಕ್ಕೆ ಮಂಗಳೂರು ಎಂಆರ್‌ಪಿಎಲ್‌ ಪ್ರಾಯೋಜಕತ್ವದಲ್ಲಿ ನಿರ್ಮಾಣಗೊಂಡ ಕಟ್ಟದ…

7 hours ago

ಯೋಚಿಸಿ… ಚಿಂತನೆ ನಡೆಸಿ… ಮತದಾನ ಮಾಡಬೇಕು… | ಏಕೆ ಗೊತ್ತಾ….?

ಮತದಾನ ಏಕೆ ಮಾಡಬೇಕು, ಯೋಚಿಸಿ ಏಕೆ ಮತದಾನ ಮಾಡಲೇಬೇಕು..? ಈ ಬಗ್ಗೆ ಅಭಿಪ್ರಾಯ…

12 hours ago

ಕೇಂದ್ರದಿಂದ ರಾಜ್ಯಕ್ಕೆ ಬರ ಪರಿಹಾರ ಬಿಡುಗಡೆ ವಿಚಾರ | ತಜ್ಞರ ವರದಿ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ

ರಾಜ್ಯಕ್ಕೆ ಕೇಂದ್ರದಿಂದ(Central Govt) ಬರಬೇಕಾದ ಬರ ಪರಿಹಾರ ಕುರಿತಂತೆ ರಾಜ್ಯ ಹಾಗೂ ಕೇಂದ್ರ…

13 hours ago

ನಿಮಗಿದು ಗೊತ್ತೇ? | ಆರೋಗ್ಯಕ್ಕಾಗಿ ಭೂ ವಿದ್ಯುತ್ ಆಯಸ್ಕಾಂತದ ಮಹತ್ವ | ಅರ್ಥಿಂಗ್/ಗ್ರೌಂಡಿಂಗ್ ಹಾಗೂ ಆರೋಗ್ಯ |

ಪರಿಸರ ಔಷಧ ಶಾಸ್ತ್ರವು(Environmental Medicine) ಸಾಮಾನ್ಯವಾಗಿ ಮಾನವನ ಆರೋಗ್ಯದ(Human health) ಮೇಲೆ ನಕಾರಾತ್ಮಕ…

15 hours ago

ಎರಡನೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಭರ್ಜರಿ ತಯಾರಿ | ಭಾರತ ವಿಶ್ವದ ಟಾಪ್ 3 ಸ್ಥಾನಕ್ಕೇರಿಸುವ ಶಕ್ತಿ ನಿಮ್ಮ ಮತಕ್ಕಿದೆ : ಮೋದಿ

ಕರ್ನಾಟಕದಲ್ಲಿ(Karnakta) ಮೊದಲ ಹಂತದ ಚುನಾವಣೆ(Election) ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಭರ್ಜರಿ ಪ್ರಚಾರ(Campaign)…

16 hours ago