ಅಡಿಕೆ ಕೌಶಲ್ಯ ಪಡೆ | ಕೊಕ್ಕಡದಲ್ಲಿ ದೋಟಿ ತರಬೇತಿ ಶಿಬಿರ

March 24, 2022
6:17 PM

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕ್ಯಾಂಪ್ಕೋ ಸಹಯೋಗದೊಂದಿಗೆ ಪೈಬರ್‌ ದೋಟಿ ಮೂಲಕ ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಯ ತರಬೇತಿ ಶಿಬಿರ ಗುರುವಾರ ಕೊಕ್ಕಡದ ಸಂಘದ ಅಧ್ಯಕ್ಷ ಕುಶಾಲಪ್ಪಗೌಡ ಇವರ ಅಡಿಕೆ ತೋಟದಲ್ಲಿ ನಡೆಯಿತು.

ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಹಾಗೂ ಕ್ಯಾಂಪ್ಕೋ ಹಾಗೂ ಸಾಯ ಎಂಟರ್ ಪ್ರೈಸಸ್ ಪುತ್ತೂರು ಇವರ ಸಹಯೋಗದೊಂದಿಗೆ ನಡೆದ ಅಡಿಕೆ ಕೌಶಲ್ಯ ಪಡೆ ತರಬೇತಿ ಶಿಬಿರವನ್ನು ಸಂಘದ ಅಧ್ಯಕ್ಷ ಕುಶಾಲಪ್ಪಗೌಡ ಪೂವಾಜೆ ಉದ್ಘಾಟಿಸಿ, ಶಿಬಿರ ಅಗತ್ಯದ ಬಗ್ಗೆ ಮಾಹಿತಿ ನೀಡಿದರು. ಅಡಿಕೆ ಬೆಳೆಗಾರರ ಬಹುದೊಡ್ಡ ಸಮಸ್ಯೆಗೆ ಪರಿಹಾರ ಸಿಗಬೇಕು ಹಾಗೂ ಯುವಕರೂ ಕೂಡಾ ಕೃಷಿಯಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಲು ಇಂತಹ ಶಿಬಿರ ಅಗತ್ಯ ಎಂದರು.

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷರು ಈಶ್ವರ ಭಟ್, ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕೆ ಹಾಗೂ ತರಬೇತುದಾರರಾದ ಮೂರೂರು ಕಲ್ಲಬ್ಬೆಯ ಆರ್ ಜಿ ಹೆಗಡೆ, ರಮೇಶ್ ಭಟ್ , ಸಾಯ ಎಂಟರ್ಪ್ರೈಸಸ್ ಪದ್ಮನಾಭ ಗೌಡ  ಉಪಸ್ಥಿತರಿದ್ದರು.

ಮೂರೂರು ಕಲ್ಲಬ್ಬೆ ಗ್ರಾಮದ ಆರ್ ಜಿ ಹೆಗಡೆ ಹಾಗೂ ರಮೇಶ್ ಭಟ್  ಕಾರ್ಬನ್ ಫೈಬರ್ ದೋಟಿಯಲ್ಲಿ ಸುಲಭವಾಗಿ ಅಡಿಕೆ ಕೊಯ್ಲು ಹಾಗೂ ಸಿಂಪಡಣೆ ಬಗ್ಗೆ ಮಾಹಿತಿ ನೀಡಿದರು. ತರಬೇತಿ ಶಿಬಿರದಲ್ಲಿ 60 ಕ್ಕೂ ಅಧಿಕ ಕೃಷಿಕರು ಭಾಗವಹಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ
ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ
April 1, 2026
6:13 AM
by: ಮಿರರ್‌ ಡೆಸ್ಕ್
ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ
April 1, 2026
6:07 AM
by: ಮಿರರ್‌ ಡೆಸ್ಕ್
ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್
April 1, 2026
5:56 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror