ಅಡಿಕೆ ಕೌಶಲ್ಯ ಪಡೆ | ಅರಂತೋಡು ಸಹಕಾರಿ ಸಂಘದ ವತಿಯಿಂದ ತರಬೇತಿ ಶಿಬಿರ | ದೋಟಿ ಖರೀದಿಗೆ ಸಹಾಯ ಯೋಜನೆ | ದೋಟಿ ಬಗ್ಗೆ ಆಸಕ್ತಿ ವಹಿಸಿದ ಮಹಿಳೆಯರು.. ! |

March 26, 2022
9:40 AM

ಅರಂತೋಡು ತೊಡಿಕಾನ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವತಿಯಿಂದ  ಪೈಬರ್‌ ದೋಟಿ ಮೂಲಕ ಅಡಿಕೆ ಕೊಯ್ಲು ಹಾಗೂ ಔಷಧಿ ಸಿಂಪಡಣೆಯ ತರಬೇತಿ ಶಿಬಿರ ಶುಕ್ರವಾರ ಉಳುವಾರು ರಾಧಾಕೃಷ್ನ ಅವರ ಅಡಿಕೆ ತೋಟದಲ್ಲಿ ನಡೆಯಿತು. ಈ ಸಂದರ್ಭ ಮಾತನಾಡಿದ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್‌ ಕುತ್ತಮೊಟ್ಟೆ, ಮುಂದಿನ ದಿನಗಳಲ್ಲಿ ಸಹಕಾರಿ ಸಂಘದಿಂದ ದೋಟಿ ಖರೀದಿ ಹಾಗೂ ಸಾಲ ಯೋಜನೆಯನ್ನು ನೀಡಲು ಚಿಂತನೆ ನಡೆಸಲಾಗುವುದು  ಎಂದರು.

Advertisement
Advertisement

ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವತಿಯಿಂದ ಸಾಯ ಎಂಟರ್ ಪ್ರೈಸಸ್ ಪುತ್ತೂರು ಇವರ ಸಹಯೋಗದೊಂದಿಗೆ ನಡೆದ ಅಡಿಕೆ ಕೌಶಲ್ಯ ಪಡೆ ತರಬೇತಿ ಶಿಬಿರವನ್ನು ಕೃಷಿಕ ದೀಪಕ್‌ ಕುತ್ತಮೊಟ್ಟೆ ಉದ್ಘಾಟಿಸಿದರು. ಈ ಸಂದರ್ಭ ಸಹಕಾರಿ ಸಂಘದ ಅಧ್ಯಕ್ಷ ಸಂತೋಷ್‌ ಕುತ್ತಮೊಟ್ಟೆ, ಸಾಯ ಎಂಟರ್‌ ಪ್ರೈಸಸ್‌ ನ ಗೋವಿಂದ ಪ್ರಕಾಶ್‌, ತರಬೇತುದಾರರಾದ ಮೂರೂರು ಕಲ್ಲಬ್ಬೆಯ ಆರ್ ಜಿ ಹೆಗಡೆ, ರಮೇಶ್ ಭಟ್  ಉಪಸ್ಥಿತರಿದ್ದರು.

ಮೂರೂರು ಕಲ್ಲಬ್ಬೆ ಗ್ರಾಮದ ಆರ್ ಜಿ ಹೆಗಡೆ ಹಾಗೂ ರಮೇಶ್ ಭಟ್  ಕಾರ್ಬನ್ ಫೈಬರ್ ದೋಟಿಯಲ್ಲಿ ಸುಲಭವಾಗಿ ಅಡಿಕೆ ಕೊಯ್ಲು ಹಾಗೂ ಸಿಂಪಡಣೆ ಬಗ್ಗೆ ಮಾಹಿತಿ ನೀಡಿದರು. ತರಬೇತಿ ಶಿಬಿರದಲ್ಲಿ 10 ಮಂದಿ ತರಬೇತಿ ಪಡೆದರು.30 ಕ್ಕೂ ಅಧಿಕ ಕೃಷಿಕರು ಭಾಗವಹಿಸಿದರು. ಮಹಿಳೆಯರು ಕೂಡಾ ಶಿಬಿರದಲ್ಲಿ ಭಾಗವಹಿಸಿದರು. ಸಹಕಾರಿ ಸಂಘದ ಮೂಲಕ ವೈಯಕ್ತಿಕ ಅಥವಾ ರೈತ ಗುಂಪು ರಚಿಸಿ ಸಹಕಾರಿ ಸಂಘದಿಂದ ದೋಟಿ ಖರೀದಿಗೆ ಯೋಜನೆ ರೂಪಿಸಲು ಸಿದ್ಧತೆ ನಡೆಸಲಾಗಿದೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ
January 30, 2026
7:57 AM
by: ಮಿರರ್‌ ಡೆಸ್ಕ್
ಬೇಸಿಗೆ ಕುಡಿಯುವ ನೀರು ಸಮಸ್ಯೆ ಎದುರಾಗದಂತೆ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ
January 30, 2026
7:27 AM
by: ಮಿರರ್‌ ಡೆಸ್ಕ್
ಸರ್ಕಾರಿ ಶಾಲೆ ಮಕ್ಕಳಿಗೆ ಚೆಸ್ ಪಾಠ | ದ.ಕ ದಲ್ಲಿ “ಚೆಸ್ ಇನ್ ಸ್ಕೂಲ್” ಆರಂಭ | ಗ್ರಾಮೀಣ ಮಕ್ಕಳಿಗೆ ಬೌದ್ಧಿಕ ಅವಕಾಶ
January 29, 2026
2:18 PM
by: ದ ರೂರಲ್ ಮಿರರ್.ಕಾಂ
ಕೊಳೆ ರೋಗ ನಿಯಂತ್ರಣಕ್ಕೂ ತೆರಿಗೆ…? ಮೈಲುತುತ್ತಿಗೆ ಸುಂಕ – ಅಡಿಕೆ ರೈತನಿಗೆ ಮತ್ತೊಂದು ಹೊರೆ..!
January 29, 2026
7:39 AM
by: ಕುಮಾರಸುಬ್ರಹ್ಮಣ್ಯ ಮುಳಿಯಾಲ

You cannot copy content of this page - Copyright -The Rural Mirror